Thursday, December 27, 2018

ಮೆಟ್ರೊದಲ್ಲಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು, 16 ಮಂದಿ ಅಸ್ವಸ್ಥ

         ಜನಜಾಗೃತಿ ಸುದ್ಧಿವಾಹಿನಿ


ಕೋಲ್ಕತ್ತ: ಕೋಲ್ಕತ್ತ ಮೆಟ್ರೊ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಹದಿನಾರು ಪ್ರಯಾಣಿಕರು ಅಸ್ವಸ್ಥರಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.


ನಗರದ ಹೃದಯ ಭಾಗದ ರವೀಂದ್ರ ಸದನ ನಿಲ್ದಾಣದಿಂದ ಮೈದಾನ್ ನಿಲ್ದಾಣ ಮಾರ್ಗದಲ್ಲಿ ಮೆಟ್ರೊ ರೈಲಿನ ಮೊದಲ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಆವರಿಸಿಕೊಳ್ಳುತ್ತಿದ್ದಂತೆ ಹಲವು ಪ್ರಯಾಣಿಕರು ಅಸ್ವಸ್ಥರಾಗಿದ್ದಾರೆ. ಇವರಲ್ಲಿ ಬಹುತೇಕ ಪ್ರಯಾಣಿಕರು ಹಿರಿಯ ನಾಗರಿಕರಾಗಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಒಬ್ಬ ಪ್ರಯಾಣಿಕ ಕಾಲು ಮುರಿತಕ್ಕೆ ಒಳಗಾಗಿದ್ದು, ಹದಿನೈದು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.


ನೀರು ಮತ್ತು ಅಗ್ನಿ ಶಮನಕ ಸಿಲಿಂಡರ್‌ಗಳನ್ನು ಬಳಸಿ ಮೆಟ್ರೊ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಪಶ್ಚಿಮ ಬಂಗಾಳ ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಮತ್ತು ಕೋಲ್ಕತ್ತ ಪೊಲೀಸ್‌ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಬಂದಿದ್ದು, ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಕೋಲ್ಕತ್ತ ಮೆಟ್ರೊ ಟ್ವೀಟಿಸಿದೆ.

Visit our channel 

http://Youtube.com/c/janajagrutiTVNews

Follow us in facebook 

https://www.facebook.com/%E0%B2%9C%E0%B2%A8%E0%B2%9C%E0%B2%BE%E0%B2%97%E0%B3%83%E0%B2%A4%E0%B2%BF-%E0%B2%B8%E0%B3%81%E0%B2%A6%E0%B3%8D%E0%B2%A7%E0%B2%BF%E0%B2%B5%E0%B2%BE%E0%B2%B9%E0%B2%BF%E0%B2%A8%E0%B2%BF-474624809612940/

No comments:

Post a Comment