Saturday, December 29, 2018

'ಶೂ ಭಾಗ್ಯ ಯೋಜನೆ' ಜಾರಿ ಹಿಂದಿದೆ ಮನಕಲಕುವ ಕಥೆ : ಸಿದ್ದರಾಮಯ್ಯ ನೆನಪು

        ಜನಜಾಗೃತಿ ಸುದ್ಧಿವಾಹಿನಿ

ಬಾಗಲಕೋಟೆ: ಶಾಲಾ ಮಕ್ಕಳಿಗೆ ಶೂ ಭಾಗ್ಯ ಯೋಜನೆ ಜಾರಿಗೆ ತಂದಿರುವ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡಿದ್ದಾರೆ.


ಬಾದಾಮಿಯಲ್ಲಿ ಪುಸ್ತಕ ಪ್ರಾಧಿಕಾರದ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾವು ಶಾಲಾ ದಿನಗಳಲ್ಲಿ ಟೈರ್ ನಿಂದ ತಯಾರಿಸಿದ ಚಪ್ಪಲಿ ಧರಿಸಿ ಹೋಗುತ್ತಿದ್ದೇವು. ಈಗಿನ ಮಕ್ಕಳಿಗೆ ಇಂತಹ ತೊಂದರೆ ಆಗಬಾರದು ಎಂದು ಹೇಳಿ ಶೂ ಭಾಗ್ಯ ಯೋಜನೆ ಜಾರಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.


ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು, ನಾನು ಶಾಲೆಗೆ ಹೋಗುವಾಗ ಟೈರ್ ಚಪ್ಪಲಿ ಧರಿಸುತ್ತಿದೆ. ಇಂತಹ ತೊಂದರೆ ಬರಬಾರದೆಂದು ವಿದ್ಯಾರ್ಥಿಗಳಿಗೆ ಶೂ ಭಾಗ್ಯ ಜಾರಿಗೆ ತಂದಿದ್ದೇವೆ ಎಂದು ಹೇಳಿದರು.


ಇನ್ನು ಬದಾಮಿಯ ಕನಕ ಜಯಂತಿ ಕಾರ್ಯಕ್ರಮದ ವೇಳೆ ಸಿದ್ದರಾಮಯ್ಯ ಅವರು ಸ್ವತಃ ಡೋಲು ಬಾರಿಸಿ ಗಮನ ಸೆಳೆದರು.


ಆದರೆ ಈ ವೇಳೆ ಡೋಲು ಬಾರಿಸುವ ಕೋಲಿನ ಸಿಬಿರು ಚುಚ್ಚಿ ಸಿದ್ದರಾಮಯ್ಯ ಅವರ ಬೆರಳಿಗೆ ಗಾಯವಾಯಿತು. ಕೂಡಲೇ ಕಾರ್ಯಕರ್ತರು ಪ್ರಥಮ ಚಿಕಿತ್ಸೆ ನೀಡಿದ ಘಟನೆ ನಡೆಯಿತು

Visit our Channel now Youtube.com/c/janajagrutiTVNews

Follow in facebook https://www.facebook.com/%E0%B2%9C%E0%B2%A8%E0%B2%9C%E0%B2%BE%E0%B2%97%E0%B3%83%E0%B2%A4%E0%B2%BF-%E0%B2%B8%E0%B3%81%E0%B2%A6%E0%B3%8D%E0%B2%A7%E0%B2%BF%E0%B2%B5%E0%B2%BE%E0%B2%B9%E0%B2%BF%E0%B2%A8%E0%B2%BF-474624809612940/

No comments:

Post a Comment