Thursday, December 27, 2018

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್. ವಿಶ್ವನಾಥ್ ಗುಡ್ ಬೈ!?

      ಜನಜಾಗೃತಿ ಸುದ್ಧಿವಾಹಿನಿ



ಬೆಂಗಳೂರು: ಲೋಕಸಭಾ ಚುನಾವಣೆ ತಯಾರಿ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ ತ್ಯಜಿಸಲು ಹೆಚ್. ವಿಶ್ವನಾಥ್ ಮುಂದಾಗಿದ್ದಾರೆ ಎನ್ನಲಾಗಿದೆ.


ಲೋಕಸಭಾ ಚುನಾವಣೆ ತಯಾರಿ ಸಂಬಂಧ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ .ದೇವೇಗೌಡರು ಜನವರಿ 3 ರಂದು ಪಕ್ಷದ ಕಚೇರಿಯಲ್ಲಿ ಕರೆದಿರವ ಶಾಸಕರು, ಸಂಸದರು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಸೇರಿದಂತೆ ಪಕ್ಷದ ಪ್ರಮುಖ ಸಭೆ ಬಳಿಕ ದೇವೇಗೌಡರನ್ನು ಭೇಟಿಯಾಗಿ ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಬಿಡುಗಡೆ ಮಾಡಬೇಕೆಂದು ಮನವಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.


ಈ ಕುರಿತು ಮಾತನಾಡಿರುವ ವಿಶ್ವನಾಥ್, ದೇವೇಗೌಡರು ಅಪಾರ ನಿರೀಕ್ಷೆ ಹಾಗೂ ವಿಶ್ವಾಸವಿಟ್ಟು ಹುದ್ದೆ ನೀಡಿದ್ದಾರೆ. ಆದರೆ ಅವರ ನಿರೀಕ್ಷೆಗೆ ತಕ್ಕಂತೆ ಹುದ್ದೆಗೆ ನ್ಯಾಯ ಕೊಡಲು ಆಗುತ್ತಿಲ್ಲ.


ಜೊತೆಗೆ ವೈದ್ಯರು ಸಹ ವಿಶ್ರಾಂತಿಗೆ ಸಲಹೆ ನೀಡಿರುವುದರಿಂದ ರಾಜ್ಯಾಧ್ಯಕ್ಷ ಹುದ್ದೆ ತ್ಯಜಿಸಲು ಮುಂದಾಗಿದ್ದೇನೆ ಎಂದಿದ್ದಾರೆ.

Visit Our Channel And Subscribe to Support Us Youtube.com/c/janajagrutiTVNews

Follow Us In Facebook https://www.facebook.com/%E0%B2%9C%E0%B2%A8%E0%B2%9C%E0%B2%BE%E0%B2%97%E0%B3%83%E0%B2%A4%E0%B2%BF-%E0%B2%B8%E0%B3%81%E0%B2%A6%E0%B3%8D%E0%B2%A7%E0%B2%BF%E0%B2%B5%E0%B2%BE%E0%B2%B9%E0%B2%BF%E0%B2%A8%E0%B2%BF-474624809612940/

No comments:

Post a Comment