ಜನಜಾಗೃತಿ ಸುದ್ಧಿವಾಹಿನಿ
ಕಲಬುರಗಿ: ಅಪಘಾತಕ್ಕೀಡಾಗಿ ಗಾಯಗೊಂಡು ಕಾರಿನಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಜೇವರ್ಗಿ ಶಾಸಕ ಅಜಯ್ ಸಿಂಗ್ ಮಾನವೀಯತೆ ಮೆರೆದಿದ್ದಾರೆ.
ಈ ಕುರಿತು ತಮ್ಮ ಫೇಸ್ ಬುಕ್ ನಲ್ಲಿ ಅಜಯ್ ಸಿಂಗ್ ಅವರೇ ಫೋಟೋ ಸಮೇತ ಬರೆದುಕೊಂಡಿದ್ದು, ಇಜೇರಿ ಹಾಗೂ ಚಿಗರಳ್ಳಿ ಗ್ರಾಮದ ನಡುವೆ ಅಪಘಾತವಾದ ಸ್ಥಳಕ್ಕೆ ಭೇಟಿ ನೀಡಿ ಜೆಸಿಬಿ ಮೂಲಕ ಅಪಘಾತವಾದ ಗಾಯಾಳುಗಳಿಗೆ ಹೊರತೆಗೆದು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಲಾಯಿತು ಎಂದು ಬರೆದುಕೊಂಡಿದ್ದಾರೆ.
ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬಂದು ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಚಾಲಕ ಇಮಾಮ್ ಅಲಿ ಗಂಭೀರವಾಗಿ ಗಾಯಗೊಂಡಿದ್ದರು. ಈ ವೇಳೆ ಅಜಯ್ ಸಿಂಗ್ ಗಾಯಾಳು ಇಮಾಮ್ ಅಲಿಯನ್ನು ಜೇವರ್ಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
visit our channel now Youtube.com/c/janajagrutiTVNews
No comments:
Post a Comment