ಜನಜಾಗೃತಿ ಸುದ್ಧಿವಾಹಿನಿ
ಮೈಸೂರು: ಕಬಡ್ಡಿ ಆಡುವಾಗ ಆಯತಪ್ಪಿ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮೈಸೂರಿನ ಶಾರದಾ ದೇವಿ ನಗರದ ಖಾಸಗಿ ಶಾಲೆಯಲ್ಲಿ ನಡೆದಿದೆ.
15 ವರ್ಷದ ಆಕಾಶ್ ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಶಾಲೆಯ ಮೈದಾನದಲ್ಲಿ ಕಬಡ್ಡಿ ಅಭ್ಯಾಸ ಪಂದ್ಯದ ವೇಳೆ ಆಕಾಶ್ ರೈಡ್ ಗೆ ಹೋಗಿ ಬರುವಾಗ ಸಿಮೆಂಟ್ ಕಂಬಕ್ಕೆ ಡಿಕ್ಕಿ ಹೊಡೆದುಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಆಕಾಶ್ ನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Visit our channel and subscribe to support us Youtube.com/c/janajagrutiTVNews
No comments:
Post a Comment