ಜನಜಾಗೃತಿ ಸುದ್ಧಿವಾಹಿನಿ
ಮಂಡ್ಯ: ಕುಮಾರಸ್ವಾಮಿ ಅವರಿಗೆ ಸಮ್ಮಿಶ್ರ ಸರ್ಕಾರವನ್ನು ಮುನ್ನಡೆಸುವ ಸಾಮರ್ಥ್ಯ ಇದೆ. ಅವರು ಸರ್ಕಾರವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಾರೆ. ಆದರೆ ತಾಲೂಕಿನಲ್ಲಿ ನಡೆಯುತ್ತಿರುವ ಕೆಲವು ಘಟನೆಗಳ ಬಗ್ಗೆ ಅಸಮಾಧಾನ ಇದೆ ಎಂದು ಮಳವಳ್ಳಿ ಶಾಸಕ ಅನ್ನದಾನಿ ಹೇಳಿದ್ದಾರೆ.
ಮಳವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ' ಸಮ್ಮಿಶ್ರ ಸರ್ಕಾರ ರಚನೆಯಾದ ಸಮಯದಿಂದ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕಾರ್ಯ ಮಾಡುತ್ತಿದ್ದೇನೆ. ಆದರೆ ಇದೇ ರೀತಿ ಅವರ ಕಾರ್ಯ ಮುಂದುವರಿದರೆ ನಾವು ಸುಮ್ಮನೆ ಇರುವುದಿಲ್ಲ. ಜನತಾದಳದವರೇನು ಕೈಗೆ ಬಳೆ ತೊಟ್ಟುಕೊಂಡು ಕುಳಿತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಸಮ್ಮಿಶ್ರ ಸರ್ಕಾರ ರಚನೆಯಾದ ಸಮಯದಿಂದಲೂ ಮೈತ್ರಿ ಧರ್ಮಕ್ಕೆ ಧಕ್ಕೆ ಆಗದಂತೆ ಕೆಲಸ ಮಾಡುತ್ತಿದ್ದು, ಇಲ್ಲಿಯವರೆಗೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಿದ್ದೇನೆ.
ಆದರೆ ತಾಲೂಕಿನಲ್ಲಿ ಇದಕ್ಕೆ ವಿರುದ್ಧವಾಗಿ ಕೆಲ ಘಟನೆಗಳು ನಡೆಯುತ್ತಿದ್ದು, ಇದೇ ರೀತಿ ಮುಂದುವರಿದರೆ ಸುಮ್ಮನಿರೋಲ್ಲ ಜೆಡಿಎಸ್ ನವರೇನು ಕೈಗೆ ಬಳೆ ತೊಟ್ಟುಕೊಂಡು ಕುಳಿತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Visit our channel by link Youtube.com/c/janajagrutiTVNews
No comments:
Post a Comment