Thursday, December 27, 2018

ಮತ್ತೊಂದು ಗಣಿ ಸಂಕಷ್ಟ;ರೆಡ್ಡಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ SIT

         ಜನಜಾಗೃತಿ ಸುದ್ಧಿವಾಹಿನಿ 


ಬೆಂಗಳೂರು: ಬಳ್ಳಾರಿಯಲ್ಲಿ ಅಕ್ರಮ ಅದಿರು ಗಣಿಗಾರಿಕೆ ನಡೆಸಿದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಿದೆ.


ಶೇಖ್ ಸಾಬ್ ಅವರಿಂದ ಗಣಿ ಕಂಪನಿ ಗುತ್ತಿಗೆ ಪಡೆದು ಅಕ್ರಮ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಎಸ್ ಐಟಿ ತನಿಖಾ ತಂಡ ತನಿಖೆ ನಡೆಸಿತ್ತು. ಇದೀಗ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿರುವ ವಿಶೇಷ ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಿದೆ ಎಂದು ವರದಿ ತಿಳಿಸಿದೆ.


ಚಾರ್ಜ್ ಶೀಟ್ ನಲ್ಲಿ ಜನಾರ್ದನ ರೆಡ್ಡಿ ಎ1 ಆರೋಪಿಯಾಗಿ, ಅಲಿಖಾನ್ ಎ2 ಹಾಗೂ ಶ್ರೀನಿವಾಸ್ ರೆಡ್ಡಿ ಎ3 ಆರೋಪಿಯನ್ನಾಗಿ ಉಲ್ಲೇಖಿಸಲಾಗಿದೆ. ಆದರೆ ಖಾರದಪುಡಿ ಮಹೇಶ್ ಸೇರಿದಂತೆ ಹಲವರ ಹೆಸರು ಆರೋಪಪಟ್ಟಿಯಲ್ಲಿ ಕೈಬಿಡಲಾಗಿದೆ ಎಂದು ವರದಿ ವಿವರಿಸಿದೆ.

Visit our channel subscribe to support us Youtube.com/c/janajagrutiTVNews 

Follow in facebook https://www.facebook.com/%E0%B2%9C%E0%B2%A8%E0%B2%9C%E0%B2%BE%E0%B2%97%E0%B3%83%E0%B2%A4%E0%B2%BF-%E0%B2%B8%E0%B3%81%E0%B2%A6%E0%B3%8D%E0%B2%A7%E0%B2%BF%E0%B2%B5%E0%B2%BE%E0%B2%B9%E0%B2%BF%E0%B2%A8%E0%B2%BF-474624809612940/

No comments:

Post a Comment