Monday, March 11, 2019

ಹೇಳಿಕೆ ಅನಗತ್ಯ, ಮುಸ್ಲಿಮರನ್ನು ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸಿ: ಟಿಎಂ ಸಿಗೆ ಒವೈಸಿ

ಜನಜಾಗೃತಿ ಸುದ್ಧಿವಾಹಿನಿ
ರಂಜಾನ್ ವೇಳೆ ಮತದಾನ, '
ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ತಮ್ಮ ಹೇಳಿಕೆಗಳಿಂದ ಅಚ್ಚರಿ ಉಂಟುಮಾಡುತ್ತಿರುವ ಎಂಐಎಂ ಪಕ್ಷದ ಮುಖ್ಯಸ್ಥ ಈಗ ರಂಜಾನ್ ವೇಳೆ ಲೋಕಸಭಾ ಚುನಾವಣೆ ವಿವಾದವನ್ನು ಅನಗತ್ಯ ಎಂದಿದ್ದಾರೆ.

ಉತ್ತರ ಪ್ರದೆಶ, ಪಶ್ಚಿಮ ಬಂಗಾಳ, ಬಿಹಾರ್ ರಾಜ್ಯಗಳಲ್ಲಿ ರಂಜಾನ್ ವೇಳೆಯೇ ಲೋಕಸಭೆಗೆ ಮತದಾನ ನಡೆಯಲಿದೆ ಇದರಿಂದ ಅಲ್ಪಸಂಖ್ಯಾತರಿಗೆ ಮತದಾನ ಮಾಡುವುದಕ್ಕೆ ಅಡ್ಡಿ ಉಂಟಾಗಲಿದೆ ಎಂದು ಕೋಲ್ಕತ್ತಾ ಮೇಯರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಒವೈಸಿ ಪ್ರತಿಕ್ರಿಯೆ ನೀಡಿದ್ದು, ಇಡೀ ವಿವಾದ ಅನಗತ್ಯವಾದದ್ದು, ನಿಮ್ಮ ಕಾರಣಗಳಿಗಾಗಿ ಮುಸ್ಲಿಂ ಸಮುದಾಯ ಹಾಗೂ ರಂಜಾನ್ ನ್ನು ಎಳೆದು ತರಬೇಡಿ ಎಂದು ಆ ರಾಜಕೀಯ ಪಕ್ಷಗಳಿಗೆ (ತೃಣಮೂಲ ಕಾಂಗ್ರೆಸ್) ಗೆ ಮನವಿ ಮಾಡುತ್ತೆನೆ ಎಂದು ಹೇಳಿದ್ದಾರೆ.
ರಂಜಾನ್ ವೇಳೆ ಮುಸ್ಲಿಮರು ಉಪವಾಸ ಮಾಡುತ್ತಾರೆ, ಹೊರಗೆ ಓಡಾಡುತ್ತಾರೆ, ಕಚೇರಿಗೆ ಹೋಗುತ್ತಾರೆ. ಸಹಜ ಜೀವನ ನಡೆಸುತ್ತಾರೆ, ಅತಿ ಬಡವರೂ ಸಹ ರಂಜಾನ್ ಉಪವಾಸ ಮಾಡುತ್ತಾರೆ. ರಂಜಾನ್ ವೇಳೆ ವಾಸ್ತವವಾಗಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ಮತದಾನ ಮಾಡುತ್ತಾರೆ, ಏಕೆಂದರೆ ಅವರೆಲ್ಲಾ ಪ್ರಾಪಂಚಿಕ ಕರ್ತವ್ಯಗಳಿಂದ ಒಂದಷ್ಟು ಬಿಡುವು ಹೊಂದಿರುತ್ತಾರೆ ಎಂದು ಒವೈಸಿ ಹೇಳಿದ್ದಾರೆ.
ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/AFrRSRKwwtY

Sunday, March 10, 2019

ಮಲ್ಲಿಕಾರ್ಜುನ ಖರ್ಗೆ ದೇಶಧ ಎರಡನೇ ಅಂಬೇಡ್ಕರ್ : ರಾಜಶೇಖರ್ ಪಾಟೀಲ್

ಜನಜಾಗೃತಿ ಸುದ್ಧಿವಾಹಿನಿ
ಯಾದಗಿರಿ: ಕಾಂಗ್ರೆಸ್ ನ ಹಿರಿಯ ನಾಯಕ, ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಎರಡನೇ ಅಂಬೇಡ್ಕರ್, ಲೋಕಸಭೆ ಚುನಾವಣೆಯಲ್ಲಿ ಅವರನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ ದೇಶ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ್ ಪಾಟೀಲ್ ಹೇಳಿದರು.

ಗುರುಮಠಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು 8 ಬಾರಿ ಶಾಸಕರಾಗಿ, 2 ಬಾರಿ ಲೋಕಸಭೆ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಮತದಾರರು ಇವರಿಗೆ ಅವರನ್ನು ಗೆಲ್ಲಿಸಬೇಕು. ಪ್ರಧಾನಿ ಮೋದಿ ಅವರನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಖರ್ಗೆ ಅವರಿಗೆ ಮಾತ್ರ ಇದೆ ಎಂದರು.

ಬಳಿಕ ಮಾತನಾಡಿದ ಕೆಪಿಸಿಸಿ ಕಾರ್ಯದರ್ಶಿ ಈಶ್ವರ್ ಖಂಡ್ರೆ, ಪ್ರಧಾನಿ ಮೋದಿ ಅವರು ಬರೀ ಹುಸಿ ಭರವಸೆಗಳನ್ನು ನೀಡಿ ಜನರಿಗೆ ಮೋಸ ಮಾಡಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಆಡಳಿತ ನಡೆಸಿದರೂ ಸಹ ದೇಶಕ್ಕೆ ಏನೂ ಕೊಡುಗೆ ನೀಡಿಲ್ಲ ಎಂದು ಆರೋಪಿಸಿದರು.
ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/AFrRSRKwwtY

Saturday, March 9, 2019

ಸುಮಲತಾ ವಿರುದ್ದ ರೇವಣ್ಣ ಹೇಳಿಕೆ; ಕ್ಷಮೆ ಕೇಳಿದ ಸಿಎಂ ಕುಮಾರಸ್ವಾಮಿ!🙏🏻

ಜನಜಾಗೃತಿ ಸುದ್ಧಿವಾಹಿನಿ 


ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ವಿಚಾರವಾಗಿ ನಟಿ ಸುಮಲತಾ ಅಂಬರೀಶ್ ವಿರುದ್ಧ ಸಚಿವ ರೇವಣ್ಣ ನೀಡಿದ್ದ ಹೇಳಿಕೆ ವಿಚಾರವಾಗಿ ಸಿಎಂ ಕುಮಾರಸ್ವಾಮಿ ಕ್ಷಮೆ ಯಾಚಿಸಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಸಿಎಂ ಕುಮಾರಸ್ವಾಮಿ ಅವರು ಪುಟಾಣಿ ಮಕ್ಕಳಿಗೆ ಲಸಿಕೆ ಹಾಕೋ ಮೂಲಕ ಚಾಲನೆ ನೀಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೇವಣ್ಣ ಅವರು ಸುಮಲತಾ ಅವರ ವಿರುದ್ಧ ಮಾತನಾಡಿಲ್ಲ. ಅವರನ್ನು ಟೀಕಿಸಿಲ್ಲ. ರೇವಣ್ಣ ಬಳಿ ನಾನು ಈ ಬಗ್ಗೆ ಮಾತನಾಡಿ, ಯಾಕೆ ಈ ಹೇಳಿಕೆ ನೀಡಿದಿರಿ ಅಂತ ಕೇಳಿದ್ದೇನೆ. ಸುಮಲತಾ ಅವರು ಅಂಬರೀಶ್ ಅವರು ಅಗಲಿರುವ ನೋವಿನಲ್ಲಿದ್ದಾರೆ. ಈ ನಡುವೆ ರಾಜಕೀಯ ಬೇಡವಾಗಿತ್ತು ಎನ್ನುವ ದೃಷ್ಟಿಯಲ್ಲಿ ನಾನು ಹೇಳಿದ್ದು ಅಷ್ಟೆ ಎಂದು ಹೇಳಿದ್ದಾರೆ.

ಆದರೂ ಅವರು ಅವರು ಈ ರೀತಿ ಹೇಳಿಕೆ ನೀಡಬಾರದಿತ್ತು. ರೇವಣ್ಣ ಅವರ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಅವರ ಪರವಾಗಿ ಕ್ಷಮೆ ಕೇಳುತ್ತೇನೆ. ನಮ್ಮದು ಮಹಿಳೆಯರಿಗೆ ಗೌರವ ಕೊಡುವ ಕುಟುಂಬ. ಯಾವ ಹೆಣ್ಣು ಮಕ್ಕಳಿಗೂ ನಾವು ಅವಮಾನ ಮಾಡಿಲ್ಲ ಎಂದು ಎಂದು ಕುಮಾರಸ್ವಾಮಿ ಹೇಳಿದರು. 

ರೇವಣ್ಣ ಅವರು ಸುಮಲತಾ ಅವರಿಗೆ ರಾಜಕೀಯ ಯಾಕೆ ಬೇಕಿತ್ತು ಅಂತ ಹೇಳಿಕೆಗೆ ಅಂಬಿ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಬಿಜೆಪಿ ನಾಯಕರು ಕೂಡ ರೇವಣ್ಣ ಹೇಳಿಕೆಯನ್ನು ಖಂಡಿಸಿದ್ದರು. ಸಾಮಾಜಿಕ ಜಾಲತಾಣಗಳ ಮೂಲಕ ಬಹುತೇಕ ಜನರು ಸುಮಲತಾ ಅವರಿಗೆ ಬೆಂಬಲ ವ್ಯಕ್ತಪಡಿಸಿ, ದೇವೇಗೌಡರು ಕುಟುಂಬ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಗಳನ್ನೂ ಕೂಡ ಮಾಡುತ್ತಿದ್ದಾರೆ.


ನಿನ್ನೆಯಷ್ಟೇ ಇದೇ ವಿಚಾರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರೂ ಕೂಡ ರೇವಣ್ಣ ಪರವಾಗಿ ಕ್ಷಮೆ ಯಾಚಿಸಿ ಇಡೀ ಪ್ರಹಸನಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/AFrRSRKwwtY

ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್

ಕಲಬುರಗಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯದಲ್ಲಿ ಅನೇಕ ಬೆಳವಣಿಗೆ ನಡೆಯತೊಡಗಿವೆ.


ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಶಾಸಕ ಡಾ. ಉಮೇಶ್ ಜಾಧವ್ ರಾಜೀನಾಮೆ ನೀಡಿ, ಬಿಜೆಪಿ ಪಾಳಯ ಸೇರಿಕೊಂಡಿದ್ದಾರೆ.


ಅವರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸುವುದು ಪಕ್ಕಾ ಆಗಿದೆ. ಇದೇ ವೇಳೆ ಕಲಬುರಗಿಯ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ವೈಜನಾಥ ಪಾಟೀಲ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.


ಹೈದರಾಬಾದ್ - ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷರಾಗಿರುವ ವೈಜನಾಥ ಪಾಟೀಲ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಹೈದರಾಬಾದ್ - ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನ ಪೂರ್ಣವಾಗಿ ಖರ್ಚಾಗುತ್ತಿಲ್ಲ.


ಅಲ್ಲದೇ, 371ಜೆ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿಲ್ಲ. ಈ ಭಾಗದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ ಎಂದು ಅವರು ದೂರಿದ್ದಾರೆ. ಅವರು ಈ ಬೆಳವಣಿಗೆಗಳಿಂದ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. ವೈಜನಾಥ ಪಾಟೀಲ್ ಬಿಜೆಪಿ ಸೇರ್ಪಡೆಯಾಗಿ ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿಯನ್ನು ಬೆಂಬಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/AFrRSRKwwtY 

Thursday, March 7, 2019

ಮೋದಿಯಂತಹ ನೂರು ಮಂದಿ ಬಂದರೂ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಜನಜಾಗೃತಿ ಸುದ್ಧಿವಾಹಿನಿ

ಕಲಬುರಗಿ, ಮಾ.7: ಕಲಬುರಗಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿ ಕಾಮಗಾರಿಗಳ ಬಗ್ಗೆಯಷ್ಟೇ ಮಾತನಾಡಲು ಸಾಧ್ಯ. ಹೀಗಾಗಿ ನನ್ನ ಕುರಿತು ಪ್ರಧಾನಿ ನರೇಂದ್ರ ಮೋದಿ ಏನೂ ಮಾತನಾಡದೆ ಹಿಂದಿರುಗಿದ್ದಾರೆ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.


ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಸುಳ್ಳು ಮಾತನಾಡಿದರೆ ಇಲ್ಲಿನ ಜನರು ತಿರುಗೇಟು ನೀಡುತ್ತಾರೆಂಬುದು ಮೋದಿಗೆ ಗೊತ್ತಿದೆ. ಖರ್ಗೆ ಎಂದ ಕೂಡಲೇ ಅಭಿವೃದ್ದಿ ಜನರ ಕಣ್ಣ ಮುಂದೆ ಬರುತ್ತದೆ. ಹೀಗಾಗಿ ಅವರು ನನ್ನ ಬಗ್ಗೆ ಏನೂ ಮಾತನಾಡಿಲ್ಲ. ಇದು ಚುನಾವಣಾ ತಂತ್ರಗಾರಿಕೆ ಭಾಗವೇ ಆಗಿದೆ ಎಂದು ಹೇಳಿದರು.


ಪ್ರಧಾನಿ ಮೋದಿ ಕಲಬುರಗಿಗೆ ಬರುತ್ತಿದ್ದು, ಕಲ್ಲಿನ ನಾಡನ್ನು ಚಿನ್ನದ ನಾಡನ್ನಾಗಿ ಮಾಡಿಬಿಡುತ್ತಾರೆಂಬ ಭಾವಿಸಿದ್ದೆ. ಆದರೆ, ಬಂದ ದಾರಿಗೆ ಸುಂಕವಿಲ್ಲ ಎಂಬ ಮಾತಿನಂತೆ ಹೀಗೆ ಬಂದು ಹಾಗೇ ಹೋಗಿದ್ದಾರೆ. ಈ ಕರ್ಮಕ್ಕೆ ಅವರು ದಿಲ್ಲಿಯಿಂದ ಇಲ್ಲಿಗೆ ಬರಬೇಕಿತ್ತೇ ಎಂದು ಪ್ರಶ್ನಿಸಿದ ಅವರು, 5 ವರ್ಷಗಳಲ್ಲಿ ಮೋದಿ ಈ ಜಿಲ್ಲೆಗೆ ಮಾಡಿದ ಒಂದೇ ಒಂದೂ ಕೆಲಸವನ್ನಾದರೂ ಬಾಯಿ ಬಿಟ್ಟು ಹೇಳಬೇಕಿತ್ತು. ಆದರೆ, ಅವರು ಏಕೆ ಹೇಳಲಿಲ್ಲ ಎಂದು ಟೀಕಿಸಿದರು.


ರೈಲ್ವೆ ವಿಭಾಗೀಯ ಕಚೇರಿ, ಹೊರ ವರ್ತುಲ ರಸ್ತೆ, ವಿಮಾನ ನಿಲ್ದಾಣ ಸೇರಿದಂತೆ ಹಲವು ಕೆಲಸಗಳು ಬಾಕಿ ಉಳಿದಿವೆ. ನನ್ನ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಹಲವು ಕಡತಗಳು ದೂಳು ಹಿಡಿದಿವೆ. ಅದೆಲ್ಲವನ್ನೂ ಬೆಂಗಳೂರು, ರಾಯಚೂರು ಹಾಗೂ ಹುಬ್ಬಳ್ಳಿಗೆ ಮಂಜೂರಾದ ಕಾಮಗಾರಿಗಳಿಗೆ ಕಲಬುರಗಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ ಎಂದು ಟೀಕಿಸಿದರು.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/uh1TYTbdX7Y

Tuesday, March 5, 2019

ಲೋಕಸಭಾ ಚುನಾವಣೆ ಹಿನ್ನಲೆ : ಖರ್ಗೆ ಕೋಟೆಗೆ ಇಂದು ಪ್ರಧಾನಿ ಮೋದಿ ಮುತ್ತಿಗೆ

ಜನಜಾಗೃತಿ ಸುದ್ಧಿವಾಹಿನಿ
ಕಲಬುರಗಿ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಪುತ್ರ ಪ್ರಿಯಾಂಕ್ ವಿರುದ್ಧ ಸಿಡಿದೆದ್ದು ಕೈ ತೊರೆದಿರುವ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆಗೆ ಇಂದು ಕಲಬುರಗಿಯಲ್ಲಿ ವೇದಿಕೆ ಸಜ್ಜಾಗಿದೆ.

ಈ ನಡುವೆ ಇಂದು ನಡೆಯಲಿರುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದು, ಉಮೇಶ್ ಜಾಧವ್ ಪ್ರಧಾನಿ ಸಮ್ಮುಖದಲ್ಲೇ ಬಿಜೆಪಿ ಸೇರಲಿದ್ದು, ಚುನಾವಣೆಯಲ್ಲಿ ಅವರನ್ನೇ ಖರ್ಗೆ ಎದುರು ಘೋಷಣೆ ಮಾಡಲಾಗುವುದು ಎನ್ನಲಾಗಿದೆ.
ಕಲಬುರಗಿ ಲೋಕಸಭೆ ಕ್ಷೇತ್ರದಲ್ಲಿ ಖರ್ಗೆ ವಿರುದ್ಧ ಹೆಪ್ಪುಗಟ್ಟಿರುವ ವಿರೋಧಿ ಅಲೆಗಳನ್ನು ಒಟ್ಟುಗೂಡಿಸಿ ಬಿಜೆಪಿ ಹೋರಾಟಕ್ಕಿಳಿದಿದೆ. ಈ ಬಾರಿ ಹೇಗಾದರೂ ಮಾಡಿ ಕಲಬುರಗಿಯನ್ನು ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಹೊರಟಿರುವ ಬಿಜೆಪಿಗೆ ಕಾಂಗ್ರೆಸ್​ನ ಅತೃಪ್ತರೆಲ್ಲ ಬೆಂಬಲಕ್ಕೆ ನಿಂತಿರುವುದು ವಿಶೇಷ. ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕ್ಷೇತ್ರದಿಂದಲೇ ಮೋದಿ ರಾಜ್ಯ ಪ್ರವಾಸ ಆರಂಭಿಸುತ್ತಿರುವುದು ಇನ್ನೊಂದು ವಿಶೇಷವಾಗಿದೆ.
ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/zAAS6y1zJgs

ಸಚಿವ ಡಿ.ಕೆ. ಶಿವಕುಮಾರ್ ಗೆ ಮತ್ತೆ ಶಾಕ್ : ತಾಯಿ ಗೌರಮ್ಮರಿಗೆ ಐಟಿಯಿಂದ ನೋಟಿಸ್!

ಜನಜಾಗೃತಿ ಸುದ್ಧಿವಾಹಿನಿ
ಬೆಂಗಳೂರು: ಸಚಿವ ಡಿ.ಕೆ. ಶಿವಕುಮಾರ್ ಗೆ ಬೇನಾಮಿ ಆಸ್ತಿ ಆರೋಪ ಪ್ರಕರಣದಲ್ಲಿ ಮತ್ತೆ ಐಟಿ ಶಾಕ್ ನೀಡಿದ್ದು, ತಾಯಿ ಗೌರಮ್ಮ ಅವರಿಗೆ ಮತ್ತೆ ನೋಟಿಸ್ ನೀಡಿದೆ.
ಇತ್ತೀಚೆಗಷ್ಟೇ ನೋಟಿಸ್ ನೀಡಿದ್ದ ಐಟಿ ಅಧಿಕಾರಿಗಳು ಮಾ. 6 ರೊಳಗೆ ವಿವರಣೆ ನೀಡುವಂತೆ ಸೂಚನೆ ನೀಡಿದ್ದರು.
 ಸೂಕ್ತ ವಿವರಣೆ ನೀಡದಿದ್ದರೆ ಬೇನಾಮಿ ಆಸ್ತಿ ಜಪ್ತಿ ಮಾಡುವುದಾಗಿ ಹೇಳಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಸುಳ್ಳು ದಾಖಲೆ ಸಲ್ಲಿಕೆ ಆರೋಪವಾಗಿ ಈಗಾಗಲೇ ಚುನಾವಣೆ ಆಯೋಗಕ್ಕೆ ಆದಾಯ ತೆರಿಗೆ ಅಧಿಕಾರಿಗಳು ದೂರು ನೀಡಿದ್ದಾರೆ.ಬೇನಾಮಿ ಆಸ್ತಿ ಆರೋಪ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಹಾಗೂ ಪುತ್ರಿ ಐಶ್ವರ್ಯ, ಸಹೋದರ ಡಿ.ಕೆ. ಸುರೇಶ್ ಗೆ ಸಾಕಷ್ಟು ನೀಡಿದ್ದಾರೆ.
ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/zAAS6y1zJgs

Sunday, March 3, 2019

ಹೃದಯಾಘಾತ ಬರುವ ಮುನ್ನ ನಮ್ಮ ದೇಹದಲ್ಲಿ ಈ ತರಹದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ!

ಜನಜಾಗೃತಿ ಸುದ್ಧಿವಾಹಿನಿ
ಮನುಷ್ಯನ ದೇಹದ ಮುಖ್ಯವಾದ ಅಂಗಗಳಲ್ಲಿ ಹೃದಯವು ಸಹ ಒಂದು. ಹೃದಯವೂ ನಿರಂತರವಾಗಿ ಸಕ್ರಿಯವಾದದ್ದು, ರಕ್ತ ಶುದ್ಧಿಗೊಳಿಸುತ್ತಾ, ಅದು ದೇಹದ ಎಲ್ಲಾ ಅಂಗಾಂಗಗಳಿಗೂ ರಕ್ತ ತಲುಪುವಂತೆ ಮಾಡುತ್ತದೆ. ಪ್ರಸ್ತುತ ಆರೋಗ್ಯಕರ ಆಹಾರ ಪದ್ಧತಿ, ನಮ್ಮ ಸುತ್ತಮುತ್ತಲಿರುವ ಕಲುಷಿತ ಮಾಲಿನ್ಯ, ದುಶ್ಚಟಗಳ ಅಭ್ಯಾಸದಿಂದ ಹೃದಯದ ಮೇಲೆ ಒತ್ತಡ ಹೆಚ್ಚಾಗಿ ಹೃದಯಾಘಾತ ಸಂಭವಿಸುವ ಅವಕಾಶಗಳು ಇದೆ. ತೀವ್ರವಾದ ಹೃದಯಾಘಾತ ಉಂಟಾದರೆ ಪ್ರಾಣಕ್ಕೆ ಅಪಾಯ ಸಂಭವಿಸಬಹುದು.

 ಹೃದಯಾಘಾತ ಸಂಭವಿಸುವವರಿಗೆ ಹೃದಯದ ಸಮಸ್ಯೆ ಬರಬಹುದೆಂಬ ಆಲೋಚನೆಯು ಸಹ ಇರುವುದಿಲ್ಲ. ಹೃದಯಾಘಾತ ಬರುವ ಮುನ್ನ ಕೆಲ ಲಕ್ಷಣಗಳು ನಮಗೆ ತಿಳಿಯುತ್ತವೆ. ಇದನ್ನು ತುಂಬಾ ಜನರು ಗಮನಿಸುವುದೇ ಇಲ್ಲ, ಈ ಲಕ್ಷಣಗಳನ್ನು ಗುರುತಿಸಿದರೆ ಮುನ್ನೆಚ್ಚರಿಕೆ ಕ್ರಮಗಳಿಂದ ಹೃದಯ್ಘಾತ ಸಂಭವಿಸದಂತೆ ನೋಡಿಕೊಳ್ಳಬಹುದು. ಆ ಲಕ್ಷಣಗಳ ಬಗ್ಗೆ ಈಗ ತಿಳಿಯೋಣ ಬನ್ನಿ...

ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೆ, ಸಕ್ಕರೆ ಖಾಯಿಲೆ ಇರುವವರಿಗೆ, ಅಧಿಕ ಕೊಲೆಸ್ಟ್ರಾಲ್ ಇದ್ದಾರೆ, ಯಾವುದೇ ರೀತಿಯ ದೈಹಿಕ ವ್ಯಾಯಾಮ ಮಾಡದೆ ಇರುವವರಿಗೆ, ಅಧಿಕ ತೂಕ ಇರುವವರಿಗೆ ಹೃದಯಾಘಾತ ಬರುವ ಸಾಧ್ಯತೆಗಳು ಹೆಚ್ಚು.

೧)ತಲೆಸುತ್ತು: ಕಾರಣವಿಲ್ಲದೆ ತಲೆಸುತ್ತು ಬರುತ್ತಿದ್ದರೆ ಹಾಗು ಯಾವಾಗಲು ತಲೆನೋವು ಕಾಡುತ್ತ ಇದ್ದಾರೆ, ಹೃದಯವು ಮೆದುಳಿಗೆ ಸರಿಯಾಗಿ ರಕ್ತವನ್ನು ಸಂಚಾರ ಮಾಡುತ್ತಿಲ್ಲವೆಂದರ್ಥ. ಇದು ಹೃದಯಾಘಾತದ ಒಂದು ಲಕ್ಷಣವಾಗಿರಬಹುದು.

೨) ಉಸಿರಾಟದಲ್ಲಿ ವೇಗ ಹೆಚ್ಚಾಗುವುದು: ಹೃದಯವು ಸರಿಯಾಗಿ ಕೆಲಸ ಮಾಡದೇ ಇದ್ದಾಗ ಶ್ವಾಸಕೋಶಕ್ಕೆ ಸರಿಯಾಗಿ ರಕ್ತಸಂಚಾರ ಆಗುವುದಿಲ್ಲ. ಇದರಿಂದ ಉಸಿರಾಟದಲ್ಲಿ ತೊಂದರೆಯಾಗುತ್ತದೆ. ತಂಪು ವಾತಾವರಣದಲ್ಲಿ ದೇಹ ಬೆವರುತ್ತಿದ್ದರೆ ಅದು ಹೃದಯಾಘಾತದ ಲಕ್ಷಣವಾಗಿರಬಹುದು.

೩) ಆಲಸ್ಯ: ಯಾವುದೇ ಕಾರಣವಿಲ್ಲದೆ ಸುಸ್ತು ಕಾಣಿಸಿಕೊಳ್ಳುತ್ತಿದ್ದರೆ ಅದು ಹೃದಯಾಘಾತದ ಲಕ್ಷಣವಾಗಿರಬಹುದು. ಇದು ಒಂದು ತಿಂಗಳ ಮೊದಲು ಕಾಣಿಸಿಕೊಳ್ಳುತ್ತದೆ. ಎದೆಭಾಗದಲ್ಲಿ ಬಿಗಿಹಿಡಿತ, ಒತ್ತಡ, ಉರಿಯುವಂತಾಗುವುದು ಇಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದರೆ ತಕ್ಷಣವೇ ವೈದ್ಯರನ್ನು ಭೇಟಿಯಾಗುವುದು ಒಳ್ಳೆಯದು.

ಈ ಲಕ್ಷಣ ಎಲ್ಲರಿಗು ಎದೆಯ ಎಡಭಾಗದಲ್ಲೇ ನೋವು ಕಾಣಿಸಿಕೊಳ್ಳಬೇಕೆಂದಿಲ್ಲ. ಇದು ಕೆಲವರಿಗೆ ಕತ್ತು, ಗಂಟಲು, ಹೊಟ್ಟೆಯ ಮೇಲ್ಭಾಗ, ಬೆನ್ನು, ತೋಳು, ಸೊಂಟ, ದವಡೆ, ಭುಜಗಳಲ್ಲಿ ನೋವು ಬರಬಹುದು. ಅನಿಯಮಿತ ಎದೆ ಬಡಿತವು ಸಹ ಹೃದಯಾಘಾತದ ಲಕ್ಷಣಗಳೇ ಆಗಿವೆ.

೪)ಊತ: ಹೃದಯವು ಅಸಹಜ ರೀತಿಯಲ್ಲಿ ರಕ್ತವನ್ನು ಹೊರಹಾಕುತ್ತಿದ್ದಾಗಹೊಟ್ಟೆ ಮತ್ತು ಕೈ ಕಾಲು ಭಾಗಗಳಲ್ಲಿ ಊತ ಕಾಣಿಸಿಕೊಳ್ಳುತ್ತದೆ. ಇದರಿಂದ ಹೊರಸೂಸುಗಳಲ್ಲಿ ಉರಿ ಕಾಣಿಸಿಕೊಳ್ಳಬಹುದು.

ಈ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ತಡಮಾಡದೆ ಚಿಕಿತ್ಸೆಯನ್ನು ತೆಗೆದುಕೊಂಡು ಹೃದಯ ಆರೋಗ್ಯವನ್ನು ಕಾಪಾಡಿಕೊಳ್ಳಿ..
ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/zAAS6y1zJgs

Saturday, March 2, 2019

ರಾಜ್ಯಾದ್ಯಂತ ಹಂದಿಜ್ವರ ದಿಢೀರ್‌ ಹೆಚ್ಚಳ; 14 ಮಂದಿ ಸಾವು

ಜನಜಾಗೃತಿ ಸುದ್ಧಿವಾಹಿನಿ

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಮಾರಣಾಂತಿಕ ಎಚ್‌1ಎನ್‌1 (ಹಂದಿ ಜ್ವರ) ಪ್ರಕರಣಗಳು ತೀವ್ರಗೊಳ್ಳುತ್ತಿದ್ದು, ಎರಡೇ ತಿಂಗಳಲ್ಲಿ 607 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ 14 ಮಂದಿ ಮೃತಪಟ್ಟಿದ್ದು, ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.


ಕಳೆದ ಇಡೀ ವರ್ಷ 1733 ಪ್ರಕರಣಗಳು ಮಾತ್ರ ದೃಢಪಟ್ಟಿದ್ದವು. ಈ ಪೈಕಿ 72 ಮಂದಿ ಮೃತಪಟ್ಟಿದ್ದು, ಪ್ರಸಕ್ತ ಸಾಲಿನಲ್ಲಿ ವರ್ಷದ ಆರಂಭದಲ್ಲೇ ಹಂದಿ ಜ್ವರ ಮರಣ ಮೃದಂಗ ಬಾರಿಸುತ್ತಿದೆ. ಎರಡು ತಿಂಗಳಲ್ಲಿ 607 ಪ್ರಕರಣ ವರದಿಯಾಗಿದ್ದು, ಫೆಬ್ರವರಿ ತಿಂಗಳ 28 ದಿನದಲ್ಲೇ 400 ಪ್ರಕರಣಗಳು ದೃಢಪಟ್ಟಿವೆ. ರಾಜ್ಯ ಡೆತ್‌ ಆಡಿಟ್‌ ಕಮಿಟಿ ವರದಿ ಪ್ರಕಾರ ಈ ಪೈಕಿ 14 ಮಂದಿ ಮೃತಪಟ್ಟಿದ್ದಾರೆ.


ಇದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 141 ಪ್ರಕರಣ ವರದಿಯಾಗಿದ್ದು, ಬಿಬಿಎಂಪಿ ಹೊರತುಪಡಿಸಿ ಬೆಂಗಳೂರು ನಗರ ಭಾಗದಲ್ಲಿ 50 ಪ್ರಕರಣ ದೃಢಪಟ್ಟಿದೆ.


ಜನವರಿ ಕೊನೆಯ ವಾರದಲ್ಲಿ 49ರಷ್ಟಿದ್ದ ಪ್ರಕರಣಕ್ಕೆ ಫೆಬ್ರವರಿ ಕೊನೆಯ ವಾರದ ವೇಳೆಗೆ 91 ಪ್ರಕರಣ ಹೆಚ್ಚುವರಿಯಾಗಿ ಸೇರ್ಪಡೆಗೊಂಡಿದೆ. ರಾಜ್ಯಾದ್ಯಂತ ಪ್ರಕರಣಗಳು ಹಠಾತ್‌ ಹೆಚ್ಚಳ ಕಂಡಿರುವುದರಿಂದ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.


ಸಾಂಕ್ರಾಮಿಕ ರೋಗಗಳ ವಿಭಾಗದ ಜಂಟಿ ನಿರ್ದೇಶಕರಾದ ಎಸ್‌. ಸಜ್ಜನ್‌ ಶೆಟ್ಟಿ ಪ್ರಕಾರ, ರಾಜ್ಯದಲ್ಲಿ ಎಚ್‌1ಎನ್‌1 ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಪ್ರಕರಣಗಳ ಸಂಖ್ಯೆ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಕಾಯಿಲೆಯನ್ನು ಶೀಘ್ರ ಪತ್ತೆ ಹಚ್ಚಿದರೆ ಗುಣಪಡಿಸಬಹುದು. ಆದರೂ ಮುನ್ನೆಚ್ಚರಿಕೆ ವಹಿಸುವಂತೆ ಶುಕ್ರವಾರ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೂ ಸುತ್ತೋಲೆ ರವಾನಿಸಲಾಗಿದೆ ಎಂದು ಹೇಳಿದರು.


ಕಟ್ಟೆಚ್ಚರಕ್ಕೆ ಸೂಚನೆ:

ಕಳೆದ ಎರಡು ಡೆತ್‌ ಆಡಿಟ್‌ ಸಮಿತಿ ಸಭೆಯಲ್ಲೂ ಎಚ್‌1ಎನ್‌1 ಮರಣ ಸಂಖ್ಯೆಯ ಹೆಚ್ಚಾಗುತ್ತಿರುವುದು ದೃಢಪಟ್ಟಿದೆ. ಹೀಗಾಗಿ ಇಲಾಖೆಯು ಕೂಡಲೇ ಕಟ್ಟೆಚ್ಚರ ವಹಿಸುವಂತೆ ಆದೇಶ ಮಾಡಿದೆ. ಸೋಂಕಿನ ಲಕ್ಷಣ ಕಂಡುಬಂದ ಕೂಡಲೇ ಕಾಯಿಲೆ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಕಾಯಿಲೆಗೆ ಸೂಕ್ತ ಚಿಕಿತ್ಸಾ ವ್ಯವಸ್ಥೆ ಕಲ್ಪಿಸಬೇಕು ಎಂದು ಆದೇಶ ನೀಡಲಾಗಿದೆ.


ಕಾಯಿಲೆಗಳು ತೀವ್ರವಾಗಿ ಹರಡುತ್ತಿರುವ ಪ್ರದೇಶದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಜಾಗೃತಿ ಮೂಡಿಸಬೇಕು. ರೋಗದ ಬಗ್ಗೆ ಅರಿವು ಮೂಡಿಸುವ ಶಿಬಿರಗಳನ್ನು ಏರ್ಪಡಿಸಬೇಕು. ರೋಗ ಲಕ್ಷಣಗಳು ಕಂಡು ಬಂದವರನ್ನು ಕೂಡಲೇ ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ಕೊಡಿಸಬೇಕು. ಈ ಬಗ್ಗೆ ಕಾಲಕಾಲಕ್ಕೆ ವರದಿ ನೀಡಬೇಕು ಎಂದು ಆರೋಗ್ಯ ಇಲಾಖೆ ಆದೇಶಿಸಿದೆ.


ಸರ್ಕಾರದಿಂದ ಎಚ್‌1ಎನ್‌1 ಜಾಗೃತಿ


ಎಚ್‌1ಎನ್‌1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳು, ಮೆಟ್ರೋ ನಿಲ್ದಾಣಗಳು, ಪ್ರಾಥಮಿಕ, ತಾಲೂಕು, ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಎಚ್‌1ಎನ್‌1 ಬಗ್ಗೆ ಜಾಗೃತಿ ಮೂಡಿಸುವ ಸಂದೇಶ ನೀಡಲಾಗುತ್ತಿದೆ. ಪ್ರತಿಯೊಬ್ಬ ಶಂಕಿತರಿಗೂ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಸೂಚಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಾ ಕಾರ್ಯಕ್ರಮದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈಗಾಗಲೇ ಎಲ್ಲಾ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಎಚ್‌1ಎನ್‌1 ಹೆಚ್ಚಾಗುತ್ತಿರುವ ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚಿಸಿದ್ದಾರೆ. ಜತೆಗೆ ಎಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/jWz-MKDOEW4

Thursday, February 28, 2019

ನಾಳೆ ವಿಂಗ್​ ಕಮಾಂಡರ್​​ ಬಿಡುಗಡೆ: ಪಾಕ್​ ಪ್ರಧಾನಿ ಇಮ್ರಾನ್ ಖಾನ್ ಘೋಷಣೆ

ಜನಜಾಗೃತಿ ಸುದ್ಧಿವಾಹಿನಿ

ಇಸ್ಲಮಾಬಾದ್​: ವಿಂಗ್​ ಕಮಾಂಡರ್​​ ಅವರನ್ನು ಸ್ನೇಹ ಸಂಬಂಧದ ಮೇಲೆ ನಾಳೆ ಬಿಡುಗಡೆ ಮಾಡುವುದಾಗಿ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಹೇಳಿದ್ದಾರೆ. ಇಂದು ಪಾಕ್​ ಸಂಸತ್ತನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಇಮ್ರಾನ್ ಖಾನ್, ನಮ್ಮ ಸೆರೆಯಲ್ಲಿರುವ ಭಾರತದ ಪೈಲಟ್ ವಿಂಗ್ ಕಮಾಂಡರ್ ಅವರನ್ನು ಶಾಂತಿ ದ್ಯೋತಕವಾಗಿ ಬಿಡುಗಡೆ ಮಾಡಲಾಗುತ್ತೆ ಅಂತಾ ತಿಳಿಸಿದ್ದಾರೆ.

ನಿನ್ನೆ ಭಾರತದ ಗಡಿ ಪ್ರವೇಶಿಸಿದ್ದ ಪಾಕ್​​ನ ಜೆಟ್​ ವಿಮಾನವನ್ನು ಭಾರತದ ವಿಮಾನಗಳು ಹೊಡೆದುರುಳಿಸಿದ್ದವು. ಈ ವೇಳೆ ಪಾಕ್​​ ದಾಳಿಗೆ ಸಿಲುಕಿದ್ದ ಮಿಗ್ 21 ವಿಮಾನವು ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಹೋಗಿ ಬಿದ್ದಿತ್ತು. ಈ ವೇಳೆ, ಅಲ್ಲಿನ ಸೇನೆ ಅವರನ್ನು ಬಂಧಿಸಿ, ಅವರ ವೀಡಿಯೋ ಕೂಡ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಜಿನೇವಾ ಒಪ್ಪಂದವನ್ನು ಉಲ್ಲಂಘಿಸಿದೆ ಅನ್ನೋ ಬಲವಾದ ಆರೋಪ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೇಳಿ ಬಂದಿತ್ತು. ಇನ್ನೊಂದೆಡೆ ಭಾರತ ಕೂಡ, ಪಾಕಿಸ್ತಾನದ ಯಾವುದೇ ತಂತ್ರಗಳಿಗೂ ಮಣಿಯದೇ ಜಿನೇವಾ ಒಪ್ಪಂದದಂತೆ ನಮ್ಮ ವಿಂಗ್ ಕಮಾಂಡರ್ ಅವರನ್ನು ಬಿಡುಗಡೆ ಮಾಡಬೇಕು ಅಂತಾ ಬಲವಾಗಿ ಆಗ್ರಹಿಸಿತ್ತು. ಈ ಹಿನ್ನೆಲೆಯಲ್ಲಿ, ಕೊನೆಗೂ ಒಂದೆಡೆ ಭಾರತದ ಬಿಗಿ ಕ್ರಮ, ಇನ್ನೊಂದೆಡೆ ಅಂತಾರಾಷ್ಟ್ರೀಯ ಒತ್ತಡಕ್ಕೆ ಕೊನೆಗೂ ಮಣಿದಿರುವ ಪಾಕಿಸ್ತಾನ ವಿಂಗ್ ಕಮಾಂಡರ್ ಅವರನ್ನು ಬಿಡುಗಡೆ ಮಾಡುವುದಾಗಿ ಇಂದು ಘೋಷಣೆ

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/jWz-MKDOEW4

Wednesday, February 27, 2019

ಸಬ್‌ ಕಾ ಸಾಥ್‌-ಸಬ್‌ ಕಾ ವಿಕಾಸ್‌ ಎಂದು ಹೇಳುವ ನೈತಿಕತೆ ನನಗಿದೆ ಎಂದ ಸಿದ್ದರಾಮಯ್ಯ

ಜನಜಾಗೃತಿ ಸುದ್ಧಿವಾಹಿನಿ
ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಸಬ್‌ ಕಾ ಸಾಥ್‌- ಸಬ್‌ ಕಾ ವಿಕಾಸ್‌ ಎಂದು ಹೇಳಿದ್ದು ಮಾತ್ರ ಆದರೆ ವಿಕಾಸವಾದದ್ದು ಕೇವಲ ಕೈಗಾರಿಕೆ ಆದರೆ ನಾನು ಸಿಎಂ ಆಗಿದ್ದಾಗ ಎಲ್ಲಾ ವರ್ಗ ವಿಕಾಸವಾಗಿದೆ ಆದುದರಿಂದ ನನಗೆ ಸಬ್‌ ಕಾ ಸಾಥ್‌- ಸಬ್‌ ಕಾ ವಿಕಾಸ್‌ ಎನ್ನುವ ನೈತಿಕತೆ ಇದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ವಿಜಯಪುರದ ದರಬಾರ ಹೈಸ್ಕೂಲ್‌ ಮೈದಾನದಲ್ಲಿ ಬುಧವಾರ ನಡೆದ ಕಾಂಗ್ರೆಸ್‌ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಂಡ ಅವರು, ಮಹಾತ್ಮಾ ಗಾಂಧೀಜಿ - ಮೋದಿ ಗುಜರಾತ್‌ನವರು. ಗಾಂಧೀಜಿ ಅವರು ಸತ್ಯ, ಅಹಿಂಸೆಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ವಿಶ್ವ ನಾಯಕರಾದರು. ಪ್ರಧಾನಿ ಮೋದಿ ಅವರು ಮಹಾನ್‌ ಸುಳ್ಳುಗಾರನಾಗಿ ಬೆಳೆದಿರುವುದು ವಿಪರ್ಯಾಸ ಎಂದರು.
ಪ್ರಧಾನಿ ಸಬ್‌ ಕಾ ಸಾಥ್‌- ಸಬ್‌ ಕಾ ವಿಕಾಸ್‌ ಎಂದು ಹೇಳಿದ್ದೇ ಹೇಳಿದ್ದು.ಆದರೆ ಕೈಗಾರಿಕೋದ್ಯಮಿಗಳು ಮಾತ್ರ ವಿಕಾಸ ಆಗಿದ್ದಾರೆ, ಅಲ್ಪಸಂಖ್ಯಾತ ಹಿಂದುಳಿದವರು, ದಲಿತರು, ಮಹಿಳೆಯರು, ರೈತರ ಅಭಿವೃದ್ಧಿಗೆ ಮೋದಿ ಸರಕಾರ ಶ್ರಮಿಸಿಲ್ಲ ಎಂದು ಟೀಕಿಸಿದ ಸಿದ್ದರಾಮಯ್ಯ, ನಾನು ಸಿಎಂ ಆಗಿದ್ದಾಗ ಎಲ್ಲ ವರ್ಗದವರ ಏಳಿಗೆಗೆ ಶ್ರಮಿಸಿದ್ದೇನೆ. ಹೀಗಾಗಿ ಸಬ್‌ ಕಾ ಸಾಥ್‌-ಸಬ್‌ ಕಾ ವಿಕಾಸ್‌ ಎಂದು ಹೇಳಿಕೊಳ್ಳುವ ನೈತಿಕತೆ ನನಗಿದೆ ಎಂದರು.
ನಮ್ಮ ಸುದ್ಧಿ ನೋಡಲು ಲಿಂಕ್ ಬಳಸಿ https://youtu.be/jWz-MKDOEW4

Tuesday, February 26, 2019

ಸರ್ಜಿಕಲ್ ಸ್ಟ್ರೈಕ್: ಸುಳ್ಳಿನ ಸರಮಾಲೆ ಕಟ್ಟಿ ಕೊನೆಗೆ ಸತ್ಯ ಒಪ್ಪಿಕೊಂಡ ಪಾಕ್

ಜನಜಾಗೃತಿ ಸುದ್ಧಿವಾಹಿನಿ

ಇಸ್ಲಾಮಾಬಾದ್: ಭಾರತದ ವಾಯುಸೇನೆ ನಡೆಸಿದ ದಾಳಿಯನ್ನು ಒಪ್ಪಿಕೊಳ್ಳಲಾಗದ ಪಾಕಿಸ್ತಾನದ ಮುಖಂಡರು, ಒಬ್ಬರ ಮೇಲೊಬ್ಬರು ಸುಳ್ಳಿನ ಸರಮಾಲೆಯನ್ನೇ ಕಟ್ಟುತ್ತಿದ್ದಾರೆ.


ವಿಚಿತ್ರವೆಂದರೆ, ಸುಳ್ಳು ಹೇಳಿದರೂ ನಂಬುವಂತಿರಬೇಕು ಎನ್ನುವ ಮಾತಿನಂತೆ ಅಲ್ಲಿನ ಜನತೆಯನ್ನು ನಂಬಿಸಲು ಮುಂದಾಗಿರುವ, ಪಾಕ್ ಪ್ರಧಾನಿ ಒಂದು ಸುಳ್ಳು, ವಿದೇಶಾಂಗ ಸಚಿವರು ಇನ್ನೊಂದು, ಪಾಕಿಸ್ತಾನದ ಆರ್ಮಿ ಮುಖ್ಯಸ್ಥ ಮಗದೊಂದು ಸುಳ್ಳನ್ನು ಹೇಳುತ್ತಿದ್ದಾರೆ.


ದಾಳಿಯೇ ನಡೆದಿಲ್ಲ, ನಮ್ಮವರು ಭಾರತದ ಯುದ್ದವಿಮಾನವನ್ನು ಹಿಮ್ಮೆಟ್ಟಿಸಿದ್ದರು ಎಂದು ಹೇಳುತ್ತಿದ್ದ ಪಾಕಿಸ್ತಾನದ ರಕ್ಷಣಾ ಸಚಿವ ಪರ್ವೇಜ್ ಖಟ್ಟಕ್, ಮಾಧ್ಯಮದವರ ಪ್ರಶ್ನೆಗೆ ಆಯತಪ್ಪಿ ಸತ್ಯ ಒಪ್ಪಿಕೊಂಡು ಬೆಪ್ಪುತಕಡಿಯಂತಾಗಿದ್ದಾರೆ.


ಭಾರತ ಸುಳ್ಳು ಹೇಳುತ್ತಿದೆ, ಅಂತರಾಷ್ಟ್ರೀಯ ಮಾಧ್ಯಮಗಳನ್ನು ಭಾರತ ದಾಳಿ ನಡೆಸಿದೆ ಎನ್ನುವ ಸ್ಥಳಕ್ಕೆ ಹೆಲಿಕಾಪ್ಟರ್ ನಲ್ಲಿ ಕರೆದುಕೊಂಡು ಹೋಗುತ್ತೇವೆ ಎಂದು ಪಾಕ್ ಸಚಿವರು ಹೇಳಿದ್ದರು.


ಭಾರತ ಸರಕಾರ ಅಥವಾ ಸೇನೆ 

ಪಾಕಿಸ್ತಾನ ದಾಳಿ ನಡೆದ ಬಗ್ಗೆ ಟ್ವಿಟ್ಟರ್ ಮೂಲಕ ಹೇಳಿತ್ತು


ಭಾರತ ಸರಕಾರ ಅಥವಾ ಸೇನೆ, ಸರ್ಜಿಕಲ್ ಸ್ಟ್ರೈಕ್ ನಡೆದ ಬಗ್ಗೆ ಹೇಳುವ ಮುನ್ನವೇ, ಪಾಕಿಸ್ತಾನ ದಾಳಿ ನಡೆದ ಬಗ್ಗೆ ಟ್ವಿಟ್ಟರ್ ಮೂಲಕ ಹೇಳಿತ್ತು. ಭಾರತ ಗಡಿರೇಖೆಯನ್ನು ದಾಟಿ ಬಂದಿತ್ತು, ಆದರೆ ನಮ್ಮ ವಾಯುಸೇನೆ ಅವರನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿತ್ತು ಎಂದು ಮೇಜರ್ ಜನರಲ್ ಆಸಿಫ್ ಗಫೂರ್ ಹೇಳಿದ್ದರು.


ಪಾಕಿಸ್ತಾನದ ಆರ್ಮಿ ಮುಖ್ಯಸ್ಥ 

ಬಾಯಿತಪ್ಪಿ ಸತ್ಯ ಹೇಳಿ, ಬೆಪ್ಪುತಕಡಿಯಂತಾದ ಸಚಿವ


ಪಾಕಿಸ್ತಾನದ ಆರ್ಮಿ ಮುಖ್ಯಸ್ಥರ ಮಾತನ್ನೇ ಪುನರುಚ್ಚಿಸುತ್ತಾ ಬರುತ್ತಿದ್ದ ಪಾಕಿಸ್ತಾನದ ರಕ್ಷಣಾ ಸಚಿವ ಪರ್ವೇಜ್ ಖಟ್ಟಕ್ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಬಾಯಿತಪ್ಪಿ ಸತ್ಯ ಹೇಳಿ, ಬೆಪ್ಪುತಕಡಿಯಂತಾಗಿದ್ದಾರೆ. ಕತ್ತಲು ಇದ್ದಿದ್ದರಿಂದ ನಮ್ಮವರಿಗೆ ಗೊತ್ತಾಗಲಿಲ್ಲ ಎಂದು ಹೇಳಿದ್ದಾರೆ.


ಬೆಳ್ಳಂಬೆಳಗ್ಗೆ, ನಸುಕಿನ ಕತ್ತಲಲ್ಲಿ 

ನಾಲ್ಕೈದು ಕಿಲೋಮೀಟರ್ ಒಳಗೆ ಬಂದ, ಭಾರತದ ವಾಯುಪಡೆ


ಬೆಳ್ಳಂಬೆಳಗ್ಗೆ, ನಸುಕಿನ ಕತ್ತಲಲ್ಲಿ, ನಮ್ಮ ಗಡಿರೇಖೆಯೊಳಗೆ ಸುಮಾರು ನಾಲ್ಕೈದು ಕಿಲೋಮೀಟರ್ ಒಳಗೆ ಬಂದ, ಭಾರತದ ವಾಯುಪಡೆ ಬಾಂಬ್ ದಾಳಿ ನಡೆಸಿತ್ತು. ನಮ್ಮ ಮಿಲಿಟರಿಯವರೂ ತಯಾರಾಗಿದ್ದರು, ಆದರೆ ಕತ್ತಲು ಇದ್ದಿದ್ದರಿಂದ ಅವರು ಸುಮ್ಮನಾದರು ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.


ಭಾರತ ದಾಳಿ 

ಯಾವ ಮಟ್ಟಿಗೆ ನಷ್ಟವಾಗಿದೆ ಎನ್ನುವುದರ ಬಗ್ಗೆ ಗೊತ್ತಾಗಲಿಲ್ಲ


ಭಾರತ ದಾಳಿ ನಡೆಸಿದ ವೇಳೆ ಕತ್ತಲು ಕವಿದಿದ್ದರಿಂದ ಯಾವ ಮಟ್ಟಿಗೆ ನಷ್ಟವಾಗಿದೆ ಎನ್ನುವುದರ ಬಗ್ಗೆ ಗೊತ್ತಾಗಲಿಲ್ಲ. ಈಗ ನಮಗೆ ಸರಿಯಾದ ಮಾಹಿತಿ ಸಿಕ್ಕಿದೆ, ಸರಿಯಾದ ದಾರಿಯಲ್ಲಿ ಸಾಗಲು ಡೈರೆಕ್ಸನ್ ಕೂಡಾ ಸಿಕ್ಕಿದೆ ಎಂದು ಪಾಕ್ ರಕ್ಷಣಾ ಸಚಿವ ಪರ್ವೇಜ್ ಖಟ್ಟಕ್ ಸತ್ಯವನ್ನು ಒಪ್ಪಿಕೊಂಡಿದ್ದಾರೆ.

ಪಾಕಿಸ್ತಾನ ಸರ್ಜಿಕಲ್ ಸ್ಟ್ರೈಕ್ 2 ಬಾಲಿವುಡ್‌ನ ಅಡ್ಡಪರಿಣಾಮ ಪಾಕಿಸ್ತಾನದಲ್ಲಿ ಭಾರತ ಇಂದು ಮಾಡಿರುವ ಸರ್ಜಿಕಲ್ ಸ್ಟ್ರೈಕ್ 2 ಅನ್ನು ಬಾಲಿವುಡ್‌ನ ಅಡ್ಡಪರಿಣಾಮ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಲೇವಡಿ ಮಾಡಿದ್ದರು. ಪಾಕಿಸ್ತಾನದ ಮೇಲೆ ಭಾರತ ದಾಳಿ ನಡೆಸಿರುವುದನ್ನೇ ಸುಳ್ಳು ಎಂದು ಇಮ್ರಾನ್ ಹೇಳಿದ್ದರು.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/jWz-MKDOEW4

Saturday, February 23, 2019

ಪುಲ್ವಾಮಾ ದಾಳಿ ಹಿಂದೆ ಪಾಕ್​ : ಜೈಷ್​​-ಎ-ಮೊಹ್ಮದ್​ ಅಲ್ಲ, ಅದು ಜೈಶ್​​-ಎ-ಶೈತಾನ್​ ಎಂದ ಓವೈಸಿ

ಜನಜಾಗೃತಿ ಸುದ್ಧಿವಾಹಿನಿ

ಮುಂಬೈ ​​: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸಿಆರ್​​ಪಿಎಫ್​​ ಯೋಧರ ಮೇಲೆ ನಡೆದ ಉಗ್ರರ ದಾಳಿಯಲ್ಲಿ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದು, ಘಟನೆಗೆ ಇಡೀ ವಿಶ್ವವೇ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಇದೀಗ ಎಐಎಂಐಎಂ ಮುಖಂಡ ಅಸಾದುದ್ದೀನ್​ ಓವೈಸಿ ಕೂಡ ದಾಳಿ ವಿಚಾರವಾಗಿ ಪಾಕ್​ ಹಾಗೂ ಜೈಷ್​​-ಎ-ಮೊಹ್ಮದ್​ ಉಗ್ರ ಸಂಘಟನೆ ವಿರುದ್ಧ ಹರಿಹಾಯ್ದಿದ್ದಾರೆ. ದಾಳಿ ಹಿಂದೆ ಪಾಕಿಸ್ತಾನದ ನೇರ ಕೈವಾಡವಿದ್ದು, ಅಲ್ಲಿನ ಸರ್ಕಾರ, ಪಾಕ್​ ಆರ್ಮಿ ಹಾಗೂ ಐಎಸ್​ಐ ಸಂಘಟನೆ ಪ್ರಕಾರ ಈ ದಾಳಿಯ ಯೋಜನೆ ನಡೆದಿದೆ. ದಾಳಿ ನಡೆಸಿರುವ ಜೈಷ್​​-ಎ-ಮೊಹ್ಮದ್​ ಅದು ಜೈಷ್​-ಎ-ಶೈತಾನ್​ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಓರ್ವ ಸೈನಿಕನಾದ ಮೊಹ್ಮದ್​ ಮನುಷ್ಯರನ್ನ ಕೊಲ್ಲಲು ಸಾಧ್ಯವಿಲ್ಲ. ಆತ ಮಾನವೀಯತೆಯ ಕರುಣಾಜನಕ. ಆದರೆ ನೀವೂ ಜೈಷ್​-ಎ-ಶೈತಾನ್​​ ಆಗಿದ್ದೀರಿ.ನೀನು ದೆವ್ವದ ಅನುಯಾಯಿ. ಪಾಕಿಸ್ತಾನದ ನರಿ ಬುದ್ಧಿ ಇದೇ ಮೊದಲೇನಲ್ಲ.ಈ ಹಿಂದೆ ಪಠಾಣ್​​ಕೋಟ್​​,ಉರಿ ಇದೀಗ ಪುಲ್ವಾಮಾ. ಪ್ರಧಾನಿ ಮೋದಿ ನಿಮ್ಮ ಮುಗ್ಧತೆಯ ಮುಖವಾಡ ತೆಗೆದು ಹೊರಹಾಕಿ ಎಂದು ವಾಗ್ದಾಳಿ ನಡೆಸಿದ್ದರು.
ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/5ATw2o6XY1c

Wednesday, February 20, 2019

ಆನಂದ್ ಸಿಂಗ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಬಂಧನ

ಜನಜಾಗೃತಿ ಸುದ್ಧಿವಾಹಿನಿ

ಬೆಂಗಳೂರು : ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್ .ಗಣೇಶ್ ಬಂಧನವಾಗಿದೆ.

ರಾಮನಗರ ಪೊಲೀಸರು ಶಾಸಕ ಕಂಪ್ಲಿ ಗಣೇಶ್​​ರನ್ನು ಹೊರರಾಜ್ಯದಲ್ಲಿ ಅರೆಸ್ಟ್ ಮಾಡಿರುವುದು ಪಕ್ಕಾ. ಆದ್ರೆ, ಯಾವ ಸ್ಥಳದಲ್ಲಿ ಬಂಧಿಸಿದ್ದಾರೆ ಎನ್ನುವುದು ಖಚಿತ ಮಾಹಿತಿ ಇಲ್ಲ. ಇಂದು ರಾತ್ರಿ ವೇಳೆಗೆ ಗಣೇಶ್​​ರನ್ನು ರಾಮನಗರಕ್ಕೆ ಕರೆತರುವ ಸಾಧ್ಯತೆ ಇದೆ. ಬಳಿಕ, ಕೋರ್ಟ್​​ ಮುಂದೆ ಹಾಜರುಪಡಿಸುತ್ತಾರೆ ಎಂದು ತಿಳಿದುಬಂದಿದೆ.


ಜ. 20 ರಂದು ಈಗಲ್ಟನ್ ರೆಸಾರ್ಟ್‌ನಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರು ವಿಜಯನಗರ (ಹೊಸಪೇಟೆ)  ಶಾಸಕ ಆನಂದ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು.

ಘಟನೆಯ ನಂತ್ರ, ಗಣೇಶ್​ ತಲೆ ಮರೆಸಿಕೊಂಡಿದ್ದರು. ಈ ನಡುವೆ, ನಿನ್ನೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​​ನಲ್ಲಿ ತಮ್ಮ ವಕೀಲರ ಮೂಲಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್​ ತೆಗೆದುಕೊಂಡಿದ್ದರು.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/VW7cgrd6_ms

Tuesday, February 19, 2019

ಅಪಘಾತಕ್ಕಿಡಾದವರನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ ರಾಜಶೇಖರ ಪಾಟೀಲ್

ಜನಜಾಗೃತಿ ಸುದ್ಧಿವಾಹಿನಿ


ಹುಮನಾಬಾದ್ ಹಳ್ಳಿಖೇಡ.(ಬಿ) :

ನಿನ್ನೆ ರಾತ್ರಿ ರಾಜ್ಯ ಹೆದ್ದಾರಿ ಮೇಲೆ ಅಪಘಾತಕ್ಕಿಡಾಗಿ ನೆರೆಳುತ್ತಿರುವ ಇಬ್ಬರು ಗಾಯಾಳುಗಳಿಗೆ ಗಣಿ ಮತ್ತು ಭೂ ವಿಜ್ಞಾನ ಮುಜುರಾಯೀ ಸಚಿವ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ.ಬಿ ಪಾಟೀಲ ತಮ್ಮ ವಾಹನ ವನ್ನು ನಿಲ್ಲಿಸಿ ಘಟನೆ ಯನ್ನು ಕುರಿತು ವಿಚಾರಿಸಿ ತಕ್ಷಣವೇ ಅಪಘಾತಕ್ಕಿಡಾದ ವ್ಯಕ್ತಿ ಗಳನ್ನ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿದ್ದಾರೆ.
ನಮ್ಮ ಸುದ್ಧಿ ಗಳನ್ನ ವೀಕ್ಷಿಸಲು ಲಿಂಕ್ ಬಳಸಿ https://youtu.be/Yaz2RMFjMZE

🍷ತರಗತಿಯಲ್ಲಿಯೇ ಮದ್ಯ ಸೇವಿಸಿದ ಹೈಸ್ಕೂಲ್ ವಿದ್ಯಾರ್ಥಿನಿಯರು!

ಜನಜಾಗೃತಿ ಸುದ್ಧಿವಾಹಿನಿ
ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್‌ ಬೆರಿಸಿ ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುತ್ತಿರುವ ನಡುವೆಯೇ ಗುಟುಕರಿಸಿದ್ದರು.
ಹೈದಾರಾಬಾದ್‌: ಒಂಬತ್ತನೇ ತರಗತಿ ವಿದ್ಯಾರ್ಥಿನಿಯರಿಬ್ಬರು ತರಗತಿ ನಡೆಯುತ್ತಿರುವಾಗಲೇ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಸರಕಾರಿ ಶಾಲೆಯೊಂದರಲ್ಲಿ ಮಂಗಳವಾರ ನಡೆದಿದೆ.

ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್‌ ಬೆರಿಸಿ ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುತ್ತಿರುವ ನಡುವೆಯೇ ಗುಟುಕರಿಸಿದ್ದರು. ನಿಧಾನವಾಗಿ ಆ ವಿದ್ಯಾರ್ಥಿನಿಯರು ಕುಳಿತಲ್ಲಿಯೇ ಜೋಲಿ ಹೊಡೆದು, ಯದ್ವಾತದ್ವ ಮಾತಾಡಲು ಶುರು ಮಾಡಿದಾಗ ಅನುಮಾನಗೊಂಡ ಶಿಕ್ಷಕರು, ಪಾನೀಯ ಬಾಟಲನ್ನು ಕಿತ್ತುಕೊಂಡು ಮೂಸಿದಾಗ ಮದ್ಯದ ವಾಸನೆ ರಾಚಿತ್ತು. ತಕ್ಷಣ ಆ ವಿದ್ಯಾರ್ಥಿನಿಯರಿಬ್ಬರನ್ನು ಶಾಲೆಯಿಂದ ಅಮಾನತುಗೊಳಿಸಲಾಯಿತು. ಬಳಿಕ ಈ ಕುರಿತು ವಿವರ ನೀಡಿದ ಮುಖ್ಯೋಪಾಧ್ಯಾಯ ಬಿಟ್ಟು ಸುರೇಶ್‌ ಕುಮಾರ್‌, ''ಇದು ವಿದ್ಯಾರ್ಥಿನಿಯರ ಮದ್ಯಪಾನದ ಮೊದಲ ಪ್ರಕರಣವೇನು ಅಲ್ಲ. ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ,'' ಎಂದಿದ್ದಾರೆ.

''ಈಗ ಸಿಕ್ಕಿ ಬಿದ್ದಿರುವ ವಿದ್ಯಾರ್ಥಿನಿಯರು ತಮ್ಮ ಕೆಟ್ಟ ಹವ್ಯಾಸಕ್ಕೆ ತಂದೆಯರನ್ನು ಹೊಣೆ ಮಾಡಿದ್ದಾರೆ. ನಿತ್ಯ ಕುಡಿದು ಮನೆಗೆ ಬರುತ್ತಿದ್ದ ತಮ್ಮ ತಂದೆ, ಉಳಿಕೆ ಮದ್ಯದ ಬಾಟಲುಗಳನ್ನು ಮನೆಯಲ್ಲಿ ಇರಿಸುತ್ತಿದ್ದರು. ಯಾರೂ ಇಲ್ಲದಾಗ ಅದರ ರುಚಿ ನೋಡಿ, ಕೊನೆಗೆ ಅದು ಹವ್ಯಾಸವಾಗಿ ಬೆಳೆಯಿತೆಂದು ವಿವರಿಸಿದ್ದಾರೆ,'' ಎಂದು ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.
ನಮ್ಮ ಸುದ್ಧಿ ನೋಡಲು ಲಿಂಕ್ ಬಳಸಿ https://youtu.be/Yaz2RMFjMZE

Monday, February 18, 2019

ಮಸಣವಾಯಿತು ಮದುವೆ ಮನೆ: ಪಾರ್ಟಿಗೆ ನುಗ್ಗಿದ ಲಾರಿ, 13 ಮಂದಿ ಸಾವು

ಜನಜಾಗೃತಿ ಸುದ್ಧಿವಾಹಿನಿ 
ರಾಜಸ್ಥಾನದ ಪ್ರತಾಪಘಡ ಜಿಲ್ಲೆಯ ಚೌಟರಿಯೊಂದರಲ್ಲಿ ಮದುವೆ ಮನೆಯ ಸಂತಸ ಎದ್ದು ಕಾಣುತ್ತಿತ್ತು. ಬೆಳಗ್ಗೆಯಷ್ಟೇ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಅದ್ದೂರಿ ಪಾರ್ಟಿಯಲ್ಲಿ ತೊಡಗಿದ್ದವರು, ಹಾಡು ಹೇಳುತ್ತಾ ಕುಣಿದು ಕುಪ್ಪಳಿಸುತ್ತಿದ್ದರು. ಆಗ, ಲಾರಿಯೊಂದು ಜವರಾಯನ ರೀತಿ ಎದುರಾಗಿತ್ತು. ನೋಡ ನೋಡುತ್ತಿದ್ದಂತೆ ಲಾರಿ ಪಾರ್ಟಿ ಹಾಲ್​ಗೆ ನುಗ್ಗಿತ್ತು.

ಕ್ಷಣಮಾತ್ರದಲ್ಲಿ ಮದುವೆ ಮನೆ, ಸ್ಮಶಾನವಾಗಿ ಬದಲಾಗಿತ್ತು.
ಹೀಗೊಂದು ಘಟನೆ ಚೋಟಿ ಸದ್ರಿ ಗ್ರಾಮದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 113 ಪಕ್ಕದ ಚೌಟರಿಯಲ್ಲಿ ಆರತಕ್ಷತೆ ಏರ್ಪಡಿಸಲಾಗಿತ್ತು. ಈ ವೇಳೆ, ನಿಯಂತ್ರಣ ಕಳೆದುಕೊಂಡ ಲಾರಿ ಜನರು ನೆರೆದಿದ್ದ ಕಡೆ ನುಗ್ಗಿದೆ. ಲಾರಿಯ ಅಡಿಗೆ ಸಿಲುಕಿ 9 ಜನರು ಸ್ಥಳದಲ್ಲೇ ಮೃತಪಟ್ಟರೆ, ನಾಲ್ವರು ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.
ಇಬ್ಬರು ಸ್ಥಳದಲ್ಲೇ ಸಾವು
18 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತಕ್ಕೆ ಲಾರಿಯ ಬ್ರೇಕ್​ ಫೇಲ್​ ಆಗಿದ್ದು ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಸರಿಯಾದ ತನಿಖೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ. ಚಾಲಕ ಪಾರ್ಟಿ ಲಾರಿ ಹಾಲ್​ಗೆ ನುಗ್ಗದಂತೆ ನೋಡಲು ಬಹಳ ಪ್ರಯತ್ನ ಪಟ್ಟಿದ್ದ. ಆದರೆ, ಲಾರಿ ಸಂಪೂರ್ಣ ನಿಯಂತ್ರಣ ಕಳೆದುಕೊಂಡಿದ್ದರಿಂದ ಆತನಿಗೆ ಬೆರೆ ಮಾರ್ಗವೇ ಇರಲಿಲ್ಲ. ಸದ್ಯ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮ ಸುದ್ಧಿ ಯನ್ನು ವೀಕ್ಷಿಸಲು ಲಿಂಕ್ ಬಳಸಿ https://youtu.be/bXAmq2N6U40

ಬಿಜೆಪಿಯ ಕೀರ್ತಿ ಅಜಾದ್ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ!🤚🏻

ಜನಜಾಗೃತಿ ಸುದ್ಧಿವಾಹಿನಿ

ನವದೆಹಲಿ:ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಬಿಜೆಪಿಯ ಉಚ್ಚಾಟಿತ ಲೋಕಸಭಾ ಸದಸ್ಯ ಕೀರ್ತಿ ಅಜಾದ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.ಮಾಜಿ ಕ್ರಿಕೆಟ್ ಆಟಗಾರ ಹಾಗೂ ರಾಜಕಾರಣಿಯಾಗಿರುವ ಕೀರ್ತಿ ಅಜಾದ್,1983 ರಲ್ಲಿ ಟೀಂ ಇಂಡಿಯಾ ವಿಶ್ವ ಕಪ್ ಗೆದ್ದಾಗ ಕೀರ್ತಿ ಅಜಾದ್ ಕೂಡಾ ಟೀಂ ಇಂಡಿಯಾ ಆಟಗಾರರಾಗಿದ್ದರು.


ಬಿಹಾರದಲ್ಲಿನ ದರ್ಬಾಂಗಾ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಭ್ರಷ್ಟಾಚಾರ, ಅಕ್ರಮ ಕುರಿತಂತೆ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ಆರೋಪ ಮಾಡಿದ್ದರಿಂದ ಅವರನ್ನು ಡಿಸೆಂಬರ್ 3, 2015ರಿಂದ ಬಿಜೆಪಿಯಿಂದ ಉಚ್ಚಾಟಿಸಲಾಗಿತ್ತು.


ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ತಮ್ಮನ್ನು ಸಂಪ್ರದಾಯಿಕ ಮಿಥಿಲಾ ಶೈಲಿಯಲ್ಲಿ ಸನ್ಮಾನಿಸಲಾಯಿತು ಎಂದು ಕೀರ್ತಿ ಅಜಾದ್ ಟ್ವೀಟ್ ಮಾಡಿದ್ದಾರೆ.2014ರಲ್ಲಿ ಅವರು ಬಿಜೆಪಿ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದು ಡಿಸೆಂಬರ್ 3, 2015ರಿಂದ ಬಿಜೆಪಿಯಿಂದ ಉಚ್ಚಾಟಿಸಲಾಗಿತ್ತು ಫೆಬ್ರವರಿ 15 ರಂದೇ ಅಜಾದ್ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ, ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.ನಾಳೆ ಅಜಾದ್ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/y5NrJ6S-iYo

ವಿಶ್ವಕಪ್ ಬಳಿಕ ಏಕದಿನ ಕ್ರಿಕೆಟ್‌ನಿಂದ ಕ್ರಿಸ್ ಗೇಲ್ ನಿವೃತ್ತಿ🏏

ಜನಜಾಗೃತಿ ಸುದ್ಧಿವಾಹಿನಿ

ಮುಂಬೈ,ಫೆ.18:ವೆಸ್ಟ್‌ಇಂಡೀಸ್‌ನ ಸ್ಟಾರ್ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಮೇ ತಿಂಗಳಲ್ಲಿ ಇಂಗ್ಲೆಂಡ್‌ನಲ್ಲಿ ಆರಂಭವಾಗಲಿರುವ ವಿಶ್ವಕಪ್‌ನ ಬಳಿಕ ಏಕದಿನ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಲು ನಿರ್ಧರಿಸಿದ್ದಾರೆ.

ಬಾರ್ಬಡೊಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗೆ ರವಿವಾರ ಅಭ್ಯಾಸ ಆರಂಭಿಸುವ ಮೊದಲು 39ರ ಹರೆಯದ ಎಡಗೈ ದಾಂಡಿಗ ಗೇಲ್ ಟ್ವಿಟರ್‌ನ ಮೂಲಕ ತನ್ನ ನಿವೃತ್ತಿಯ ಘೋಷಣೆ ಮಾಡಿದರು. ಗೇಲ್ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಲ್ಲಿ ಆಡಲಿದ್ದಾರೆ.


ಜಮೈಕಾ ದಾಂಡಿಗ ಗೇಲ್ ಈತನಕ 284 ಏಕದಿನ ಪಂದ್ಯಗಳನ್ನು ಆಡಿದ್ದು, 37.12ರ ಸರಾಸರಿಯಲ್ಲಿ 23 ಶತಕ ಹಾಗೂ 49 ಅರ್ಧಶತಕಗಳ ಸಹಿತ ಒಟ್ಟು 9,727 ರನ್ ಕಲೆ ಹಾಕಿದ್ದಾರೆ.

 2015ರ ವಿಶ್ವಕಪ್‌ನಲ್ಲಿ ಝಿಂಬಾಬ್ವೆ ವಿರುದ್ಧ ಗರಿಷ್ಠ ವೈಯಕ್ತಿಕ ಸ್ಕೋರ್ 215 ಗಳಿಸಿದ್ದರು. ಇದು ವಿಶ್ವಕಪ್‌ನಲ್ಲಿ ದಾಖಲಾದ ಮೊದಲ ದ್ವಿಶತಕವಾಗಿದೆ. ಆ ಪಂದ್ಯದಲ್ಲಿ ಗೇಲ್ ಮರ್ಲಾನ್ ಸ್ಯಾಮುಯೆಲ್ಸ್‌ರೊಂದಿಗೆ 372 ರನ್ ಜೊತೆಯಾಟ ನಡೆಸಿದ್ದರು. ಇದು ವಿಶ್ವಕಪ್ ಇತಿಹಾಸದಲ್ಲಿ ಗರಿಷ್ಠ ರನ್ ಜೊತೆಯಾಟವಾಗಿದೆ.


ಗೇಲ್ ವಿಶ್ವ ಕ್ರಿಕೆಟ್‌ನಲ್ಲಿ ಟೆಸ್ಟ್‌ನಲ್ಲಿ ತ್ರಿಶತಕ, ಏಕದಿನದಲ್ಲಿ ದ್ವಿಶತಕ ಹಾಗೂ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿರುವ ಏಕೈಕ ಆಟಗಾರ. ‘ಯುನಿವರ್ಸ್ ಬಾಸ್’ ಎಂದೇ ಖ್ಯಾತಿ ಪಡೆದಿರುವ ಗೇಲ್ ಈ ತನಕ 103 ಟೆಸ್ಟ್ ಹಾಗೂ 56 ಟ್ವೆಂಟಿ-20 ಪಂದ್ಯಗಳನ್ನು ಆಡಿದ್ದಾರೆ.

ಗೇಲ್ 2006ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದು, ಆ ಟೂರ್ನಿಯಲ್ಲಿ 3 ಶತಕ ಹಾಗೂ 8 ಅರ್ಧಶತಕಗಳ ಸಹಿತ ಒಟ್ಟು 474 ರನ್ ಗಳಿಸಿದ್ದರು. ಒಟ್ಟು 8 ವಿಕೆಟ್‌ಗಳನ್ನು ಉರುಳಿಸಿದ್ದರು.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/y5NrJ6S-iYo

Sunday, February 17, 2019

ಪುಲ್ವಾಮ ದಾಳಿಯ ಮಾಸ್ಟರ್ ಮೈಂಡ್ ನನ್ನು ಹತ್ಯೆಗೈದ ಭಾರತೀಯ ಸೇನೆ ?

ಜನಜಾಗೃತಿ ಸುದ್ಧಿವಾಹಿನಿ

ಶ್ರೀನಗರ, ಫೆ.18: ಕಳೆದ ಗುರುವಾರ ಪುಲ್ವಾಮದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿಯ ಮಾಸ್ಟರ್‌ಮೈಂಡ್ ಎನ್ನಲಾದ ಜೈಶ್ ಉಗ್ರ ಸಂಘಟನೆಗೆ ಸೇರಿದ ರಶೀದ್ ಘಾಜಿ ಹಾಗೂ ಕಮ್ರಾನ್‌ನನ್ನು ಭಾರತೀಯ ಸೇನೆ ಸೋಮವಾರ ಬೆಳಗ್ಗೆ ನಡೆಸಿದ ದೀರ್ಘ ಕಾಲದ ಕಾರ್ಯಾಚರಣೆಯಲ್ಲಿ ಹತ್ಯೆಗೈದಿದೆ ಎನ್ನಲಾಗಿದೆ.


ಈ ಮೂಲಕ ಗುರುವಾರ ಭಾರತದ 40 ಯೋಧರ ಬಲಿ ಪಡೆದಿದ್ದ ದಾಳಿಯ ಸಂಚುಕೋರರನ್ನು ಸೇನೆ ಹೊಡೆದುರುಳಿಸಲು ಯಶಸ್ವಿಯಾಗಿದೆ ಎನ್ನಲಾಗಿದೆ. 9 ಗಂಟೆಗಳ ಕಾಲ ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪಿಂಗ್ಲಾನ ಪ್ರದೇಶದಲ್ಲಿ ಉಗ್ರರ ವಿರುದ್ಧ ನಡೆದಿರುವ ಎನ್‌ಕೌಂಟರ್‌ನಲ್ಲಿ ಮೇಜರ್ ಸಹಿತ ಐವರು ಯೋಧರು ಹುತಾತ್ಮರಾಗಿದ್ದಾರೆ.

ಅಡಗಿ ಕುಳಿತ್ತಿರುವ ಇನ್ನೂ ಕೆಲವು ಉಗ್ರರ ಪತ್ತೆಗಾಗಿ ಸೇನೆಯ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗುತ್ತಿದೆ.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/y5NrJ6S-iYo

Saturday, February 16, 2019

ನಮ್ಮ ಸೈನಿಕರ ಕೊಡುಗೆಗಳಿಗೆ ಸರಕಾರವು ಯಾವತ್ತೂ ಬೆಲೆ ಕೊಟ್ಟಿಲ್ಲ ಹುತಾತ್ಮ ಯೋಧನ ಪತ್ನಿ


ನಮಗೆ ಮೋದಿ ಮತ್ತು ಅವರ ಸರಕಾರದಲ್ಲಿ ನಂಬಿಕೆಯಿಲ್ಲ: ಹುತಾತ್ಮ ಯೋಧನ ಪತ್ನಿ

ಹೊಸದಿಲ್ಲಿ, ಫೆ.16: ಪುಲ್ವಾಮದಲ್ಲಿ ಹುತಾತ್ಮರಾದ ಯೋಧರ ಬಲಿದಾನ ವ್ಯರ್ಥವಾಗುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ ನಾವು ಅವರನ್ನೂ ಅವರ ಸರಕಾರವನ್ನು ನಂಬುವುದಿಲ್ಲ” ಎಂದು ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧ ಪ್ರದೀಪ್ ಸಿಂಗ್ ರ ಪತ್ನಿ ಹೇಳಿದ್ದಾರೆ.


ಪ್ರದೀಪ್ ಸಿಂಗ್ ರ ಪತ್ನಿ ನೀರಜ್ ‘ಇಂಡಿಯಾ ಟುಡೆ’ ಜೊತೆ ಮಾತನಾಡಿದ್ದು, “ಕಾಶ್ಮೀರದಲ್ಲಿ ಈ ಹಿಂದೆಯೂ ಉಗ್ರ ದಾಳಿಗಳು ನಡೆದಿತ್ತು. ಆದರೆ ಭದ್ರತಾ ಪಡೆಗಳಿಗೆ ಸಂಪೂರ್ಣ ಅಧಿಕಾರ ಏಕೆ ನೀಡಲಿಲ್ಲ. ಕಾಶ್ಮೀರದಲ್ಲಿರುವ ಕಲ್ಲುತೂರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಮ್ಮ ಸೈನಿಕರಿಗೆ ಅವಕಾಶ ನೀಡಬೇಕು. ನಮಗೆ ಮೋದಿ ಮತ್ತು ಅವರ ಸರಕಾರದ ಮೇಲೆ ನಂಬಿಕೆ ಇಲ್ಲ” ಎಂದು ಹೇಳಿದರು.


“ಈ ಘಟನೆಯ ನಂತರ ಸೇನೆಯು ಉಗ್ರರ ವಿರುದ್ಧ ಕ್ರಮ ಕೈಗೊಂಡರೂ ನನ್ನ ಪತಿ ಹಿಂದಿರುಗಿ ಬರುವುದಿಲ್ಲ. 40  ದಿನಗಳ ರಜೆಯಲ್ಲಿ ಬಂದಿದ್ದ ಅವರು ಫೆಬ್ರವರಿ 11ರಂದು ಕಾಶ್ಮೀರಕ್ಕೆ ತೆರಳಿದ್ದರು” ಎಂದವರು ಹೇಳಿದರು.


ಹುತಾತ್ಮ ಯೋಧ ಪ್ರದೀಪ್ ರ ತಂದೆ ಅಮರ್ ಸಿಂಗ್ ಮಾತನಾಡಿ, “ನಮ್ಮ ಸೈನಿಕರ ಕೊಡುಗೆಗಳಿಗೆ ಸರಕಾರವು ಯಾವತ್ತೂ ಬೆಲೆ ಕೊಟ್ಟಿಲ್ಲ. ಮೂರು ದಿನಗಳಲ್ಲೇ ಜನರು ನನ್ನ ಪುತ್ರನ ಕೊಡುಗೆಯನ್ನು ಮರೆಯುತ್ತಾರೆ. ಸರಕಾರವು ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಹೊಗಳುತ್ತಲೇ ಇದ್ದರೂ ಉಗ್ರ ಚಟುವಟಿಕೆಗಳು ನಡೆಯುತ್ತಲೇ ಇದೆ” ಎಂದು ಹೇಳಿದರು.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/47WLrf7Pu10

ಪುತ್ರಿಯ ಮದುವೆ ಔತಣ ರದ್ದು ಮಾಡಿ ಹುತಾತ್ಮ ಸೈನಿಕರ ಕುಟುಂಬಕ್ಕೆ 11 ಲಕ್ಷ ರೂ. ನೀಡಿದ ವ್ಯಕ್ತಿ

ಜನಜಾಗೃತಿ ಸುದ್ಧಿವಾಹಿನಿ 

   〰〰〰〰〰〰〰〰〰

ಸೂರತ್: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿಆರ್‍ ಪಿಎಫ್ ಸಿಬ್ಬಂದಿಗೆ ದೇಶದ ವಿವಿಧೆಡೆಗಳಿಂದ ನೆರವಿನ ಮಹಾಪೂರ ಹರಿದುಬರುತ್ತಿದೆ. ಸೂರತ್ ಉದ್ಯಮಿಯೊಬ್ಬರು ತಮ್ಮ ಮಗಳ ಅದ್ದೂರಿ ವಿವಾಹಕ್ಕೆ ಕಡಿವಾಣ ಹಾಕಿ 11 ಲಕ್ಷ ರೂಪಾಯಿಗಳನ್ನು ಹುತಾತ್ಮರ ಪರಿಹಾರಕ್ಕೆ ಮತ್ತು 5 ಲಕ್ಷ ರೂಪಾಯಿಗಳನ್ನು ಭದ್ರತಾ ಏಜೆನ್ಸಿಗಳಿಗೆ ನೀಡಿದ್ದಾರೆ.


ದೇವಶಿ ಮನೇಕ್ ಎಂಬ ವಜ್ರೋದ್ಯಮಿ ತಮ್ಮ ಮಗಳು ಅಮಿ ವಿವಾಹದ ಸಂದರ್ಭದಲ್ಲಿ ನಡೆಯಬೇಕಿದ್ದ ಔತಣವನ್ನು ರದ್ದು ಮಾಡಿ, ಈ ಹಣವನ್ನು ಸಂತ್ರಸ್ತ ಕುಟುಂಬಗಳಿಗೆ ಹಣಕಾಸು ನೆರವು ಒದಗಿಸಲು ದೇಣಿಗೆ ನೀಡಿದರು.ಮನೇಕ್ ಅವರ ಪುತ್ರಿ ಅಮಿ ವಿವಾಹವು ಶುಕ್ರವಾರ ನಡೆಯಿತು. ಈ ವಿವಾಹದ ಔತಣ ಏರ್ಪಡಿಸುವ ಬದಲು ಈ ಹಣವನ್ನು ಉದ್ಯಮಿ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದರು.


ದೇಶಾದ್ಯಂತ ಹಲವು ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಜನ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಯೋಧರ ಕುಟುಂಬಗಳ ಬೆಂಬಲಕ್ಕೆ ನಿಂತಿದ್ದಾರೆ. ಭಾರತ ರಾಷ್ಟ್ರೀಯ ಕಾಂಗ್ರೆಸ್, ಜಿ20 ದೇಶಗಳ ರಾಯಭಾರಿಗಳ ಗೌರವಾರ್ಥ ಏರ್ಪಡಿಸಿದ್ದ ಔತಣವನ್ನು ರದ್ದುಪಡಿಸಿತ್ತು.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/47WLrf7Pu10

Friday, February 15, 2019

✉ಅವಶ್ಯವಿದ್ದರೆ ನಮ್ಮ ರಕ್ತ ಹರಿಸಲು ಸಿದ್ಧ... ಪ್ರಧಾನಿ ಮೋದಿಗೆ ಸಿದ್ದಾಪುರದ ವಿದ್ಯಾರ್ಥಿ ಮಹಮದ್ ಶಕೀಬ್ ಪತ್ರ

ಜನಜಾಗೃತಿ ಸುದ್ಧಿವಾಹಿನಿ

   〰〰〰〰〰〰〰〰〰

ಕಾರವಾರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ನಡೆಸಿದ ಭೀಕರ ದಾಳಿಗೆ ದೇಶದ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಹೇಯ ಕೃತ್ಯ ನಡೆಸಿದ ಉಗ್ರರಿಗೆ ತಕ್ಕ ಪಾಠ ಕಲಿಸುವಂತೆ ವಿದ್ಯಾರ್ಥಿಯೋರ್ವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾನೆ. 

 ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಹಮದ್ ಶಕೀಬ್ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಅಂತಿಮ ವರ್ಷದಲ್ಲಿ ಓದುತ್ತಿದ್ದಾನೆ. ಫೆ. 14ರಂದು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ನಡೆಸಿದ ದಾಳಿ ಬಗ್ಗೆ ತಿಳಿದಿದ್ದೇವೆ. 


ದೇಶದ 44ಕ್ಕೂ ಹೆಚ್ಚು ಯೋಧರು ತಮ್ಮ ಅಮೂಲ್ಯ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇಂತಹ ದುಷ್ಕೃತ್ಯವೆಸಗಿದ ಪಾಕಿಸ್ತಾನಿ ಉಗ್ರರಿಗೆ ತಕ್ಕ ಪಾಠ ಕಲಿಸಬೇಕು. ನಾನು ನಿಮಗೆ ಈ ಬಗ್ಗೆ ಕೈ ಮುಗಿದು ಬೇಡಿಕೊಳ್ಳುತ್ತೇನೆ. ಯೋಧರು ಮಾಡಿದ ತ್ಯಾಗ ವ್ಯರ್ಥವಾಗದಂತೆ ನೋಡಿಕೊಳ್ಳಿ. ಅವರಿಗೆ ಪಾಠ ಕಲಿಸಲು ನಾವು ಯಾವುದೇ ತ್ಯಾಗಕ್ಕೂ ಬದ್ಧರಿದ್ದೇವೆ. ಅವಶ್ಯವಿದ್ದರೆ ರಕ್ತವನ್ನು ಹರಿಸಲು ಸಿದ್ಧರಿದ್ದೇವೆ ಎಂದು ಬರೆದು ಮೇಲ್ ಮತ್ತು ಪೋಸ್ಟ್ ಮೂಲಕ ಪ್ರಧಾನಿ ಕಚೇರಿಗೆ ರವಾನಿಸಿದ್ದಾನೆ.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/47WLrf7Pu10


ವ್ಯಾಟ್ಸ್​ಆ್ಯಪ್​ನಲ್ಲಿ ಹೊಸ ಆಯ್ಕೆ: ಇನ್ಮುಂದೆ ನಿಮ್ಮ ಒಪ್ಪಿಗೆ ಇಲ್ಲದೆ ಗ್ರೂಪ್​ಗೆ ಆ್ಯಡ್ ಮಾಡುವಂತಿಲ್ಲ!

ಜನಜಾಗೃತಿ ಸುದ್ಧಿವಾಹಿನಿ


ನೀವು ವ್ಯಾಟ್ಸ್​ಆ್ಯಪ್ ಬಳಸುತ್ತಿದ್ದರೆ, ನಿಮಗೊಂದು ಗುಡ್​ ನ್ಯೂಸ್​ ಇದೆ. ನಿಮ್ಮ ಅನುಮತಿ ಇಲ್ಲದೆ ವ್ಯಾಟ್ಸ್​ಆ್ಯಪ್​ ಗ್ರೂಪ್​ಗಳಿಗೆ ಸೇರಿಸುವ ಆಯ್ಕೆಗೆ ಶೀಘ್ರದಲ್ಲೇ ಕಡಿವಾಣ ಬೀಳಲಿದೆ. ಸಾಮಾನ್ಯವಾಗಿ ನಿಮ್ಮ ನಂಬರ್ ಇದ್ದವರು ಯಾವುದೇ ವ್ಯಾಟ್ಸ್​ಆ್ಯಪ್​ ಗ್ರೂಪ್​ಗೂ ನಿಮ್ಮನ್ನು ಸೇರಿಸಬಹುದಿತ್ತು. ಇಲ್ಲಿ ನಿಮ್ಮ ಒಪ್ಪಿಗೆ ಪಡೆಯಬೇಕಾಗಿರಲಿಲ್ಲ. ಆದರೀಗ ವ್ಯಾಟ್ಸ್​ಆ್ಯಪ್​ ಪರಿಚಯಿಸಲಿರುವ ಹೊಸ ಅಪ್​ಡೇಟ್​ನಲ್ಲಿ ನಿಮ್ಮ ನಂಬರ್​ ಅನ್ನು ಗ್ರೂಪ್​ಗೆ ಸೇರಿಸಬೇಕಿದ್ದರೆ ನಿಮ್ಮ ಒಪ್ಪಿಗೆ ಇರಬೇಕಾಗುತ್ತದೆ. 


ಇದಕ್ಕಾಗಿ 'ಗ್ರೂಪ್​ ಇನ್​ವಿಟೇಷನ್' ಎಂಬ ಆಯ್ಕೆಯನ್ನು ಶೀಘ್ರದಲ್ಲೇ ವಾಟ್ಸ್​ಆ್ಯಪ್​ ಒದಗಿಸಲಿದ್ದು, ಈ ಅಪ್ಶನ್ ಬಳಸಿ ಇನ್ನು ಮುಂದೆ ಬಳಕೆದಾರರು ತಮ್ಮ ಇಚ್ಚೆಗೆ ಅನುಸಾರ ಗ್ರೂಪ್​ಗಳಿಗೆ ಸೇರಬಹುದಾಗಿದೆ. ವಾಟ್ಸ್​ಆ್ಯಪ್​ ಬೇಟಾ ಇನ್​ಫೋ ಮಾಹಿತಿ ಪ್ರಕಾರ, ಈಗಾಗಲೇ ಹೊಸ ಫೀಚರ್​ ಅನ್ನು ಐಒಎಸ್​ ಬೇಟಾ ಬಳಕೆದಾರರಿಗೆ ನೀಡಲಾಗಿದೆ. ಶೀಘ್ರದಲ್ಲೇ ಹೊಸ ಅಪ್​ಡೇಟ್​ ಆ್ಯಂಡ್ರಾಯ್ಡ್​ ಬಳಕೆದಾರಿಗೂ ಲಭ್ಯವಾಗಲಿದೆ. ಈ ನೂತನ ಫೀಚರ್​ ಅನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ಹೀಗಾಗಿ ಮೊದಲ ಹಂತದಲ್ಲಿ ಎಲ್ಲಾ ಬಳಕೆದಾರಿರಿಗೆ ಈ ಅಪ್​ಡೇಟ್​ ಆಯ್ಕೆ ಲಭ್ಯವಾಗುವುದಿಲ್ಲ ಎಂದು ಕೂಡ ವಾಟ್ಸ್​ಆ್ಯಪ್​ ಬೇಟಾ ಇನ್ಫೋ ತಿಳಿಸಿದೆ. 


ಹೊಸ ಆಯ್ಕೆ ಹೇಗೆ?

 

 ವ್ಯಾಟ್ಸ್​ಆ್ಯಪ್​ನಲ್ಲಿ ನೀಡಲಾಗುವ ಹೊಸ ಆಯ್ಕೆಯನ್ನು ಸೆಟ್ಟಿಂಗ್ಸ್​ನಲ್ಲಿ ಪಡೆಯಬಹುದಾಗಿದೆ. setting > account > privacy settings > last seen, profile photo, about, status and groups ಆಯ್ಕೆ ಕಾಣಿಸಲಿದೆ. ಇಲ್ಲಿ ನೀವು ಗ್ರೂಪ್​ ಆಯ್ಕೆಯನ್ನು ಕ್ಲಿಕ್ ಮಾಡಿದರೆ Everyone, My contact and Nobody ಎಂಬ ಆಯ್ಕೆಗಳು ಲಭ್ಯವಾಗಲಿದೆ. ಇದರಲ್ಲಿ ನಿಮಗೆ ಬೇಕಾದ ಆಯ್ಕೆಯನ್ನು ಆರಿಸಿಕೊಳ್ಳಬಹುದು.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/sPi9H6mM2hE

ನಮ್ಮನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ: ಪಾಕಿಸ್ತಾನಕ್ಕೆ ಎಚ್ಚರಿಕೆ ರವಾನಿಸಿದ ಪ್ರಧಾನಿ

ಜನಜಾಗೃತಿ ಸುದ್ಧಿವಾಹಿನಿ

ಯೋಧರನ್ನು ಹತ್ಯೆ ಮಾಡಿ ತಪ್ಪು ಮಾಡಿದ್ದೀರಿ


ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿ, ಭಾರತವನ್ನು ಅಸ್ಥಿರಗೊಳಿಸಬಹುದು ಎಂದು ನೆರೆಯ ದೇಶ ಭಾವಿಸಿದರೆ ಅದನ್ನು ಮರೆತು ಬಿಡಲಿ ಅದು ಸಾಧ್ಯವಿಲ್ಲ ಎಂದು  ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.ಯೋಧರ ಮೇಲೆ ದಾಳಿ ನಡೆಸಿ ಉಗ್ರರು ಭಾರೀ ದೊಡ್ಡ ತಪ್ಪು ಮಾಡಿದ್ದಾರೆ, ಅದಕ್ಕೆ ತಕ್ಕ ಬೆಲೆಯನ್ನು ಅವರು ತೆರಬೇಕಾಗುತ್ತದೆ ಇಂತಹ ಕೃತ್ಯಗಳಿಂದ ಭಾರತವನ್ನು ಅಸ್ಥಿರಗೊಳಿಸಬಹುದು ಎಂದು ಭಾವಿಸಿದ್ದರೆ ಅದು ಸಾಧ್ಯವಿಲ್ಲ ಎಂದಿದ್ದಾರೆ.


ದೆಹಲಿಯಿಂದ ವಾರಣಾಸಿಗೆ ಸಂಚರಿಸುವ ಹೊಸ ಸೆಮಿ ಹೈ ಸ್ಪೀಡ್ ರೈಲು ವಂದೇ ಭಾರತ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಮೋದಿಯವರು ರೈಲಿಗೆ ಚಾಲನೆ ನೀಡುವುದಕ್ಕೆ ಮುನ್ನ ನೆರೆದಿದ್ದ ಗಣ್ಯರು ನಿನ್ನೆ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಎರಡು ನಿಮಿಷಗಳ ಕಾಲ ಮೌನಾಚರಣೆ ಸಲ್ಲಿಸಿದರು.ಇದೊಂದು ಭಾವನಾತ್ಮಕ ಮತ್ತು ಸೂಕ್ಷ್ಮ ಸಮಯ. ಆಡಳಿತದಲ್ಲಿರಲಿ ಅಥವಾ ವಿರೋಧ ಪಕ್ಷದಲ್ಲಿರಲಿ ಈ ಸಂದರ್ಭದಲ್ಲಿ ನಾವು ರಾಜಕೀಯದಿಂದ ದೂರವುಳಿಯಬೇಕು. ದೇಶದ ಎಲ್ಲರೂ ಒಂದಾಗಬೇಕು ಎಂದು ಕರೆ ನೀಡಿದರು.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/sPi9H6mM2hE 


Thursday, February 14, 2019

ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಯೋಧರ ಹೆಸರುಗಳು

ಜನಜಾಗೃತಿ ಸುದ್ಧಿವಾಹಿನಿ

    14 Feb 2019


ಜಮ್ಮು ಕಾಶ್ಮೀರ, :  ಜಮ್ಮು ಕಾಶ್ಮೀರದ ಪುಲ್ವಾಮಾ ದಲ್ಲಿ ಉಗ್ರರು ಸಿಆರ್‌ಫಿಎಫ್‌ ಯೋಧರ ಮೇಲೆ ನಡೆಸಿದ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ 40ಕ್ಕೆ ಏರಿದೆ.

ದಾಳಿಗೆ ಸಂಬಂಧಿಸಿದಂತೆ ಈಗಾಗಲೇ ಎನ್‌ಐಎ ಸಭೆ ನಡೆಸಿದ್ದು, ಅದೇ ಸಂಸ್ಥೆಯು ಘಟನೆಯ ಬಗ್ಗೆ ತನಿಖೆ ಕೈಗೊಳ್ಳಲಿದೆ. ಮೃತಪಟ್ಟಿರುವ ಅಷ್ಟೂ ಜನ ಯೋಧರ ಹೆಸರು ಈಗಾಗಲೇ ಬಹಿರಂಗಗೊಳಿಸಲಾಗಿದೆ.

ಒಬ್ಬ ಕಮ್ಯಾಂಡರ್, ಒಬ್ಬ ವಾಹನ ಚಾಲಕ, ನಾಲ್ವರು ಎಸ್ಕಾರ್ಟ್‌ ಸಿಬ್ಬಂದಿ ಸೇರಿ ಒಟ್ಟು 42 ಮಂದಿ ಯೋಧರು ಮೃತಪಟ್ಟಿದ್ದಾರೆ. ಯೋಧರ ಹೆಸರುಗಳು ಇಂತಿವೆ.


1 ಜೈಮಲ್ ಸಿಂಗ್ (ಡ್ರೈವರ್)

2 ನಸೀರ್ ಅಹ್ಮದ್ (ಕಮಾಂಡರ್)

3 ಸುಖವೀಂದರ್ ಸಿಂಗ್ (ಎಸ್ಕಾರ್ಟ್‌)

4 ರೋಹಿತಾಶ್ ಲಂಬಾ (ಎಸ್ಕಾರ್ಟ್‌)

5 ತಿಲಕ್ ರಾಜ್ (ಎಸ್ಕಾರ್ಟ್‌)

6 ಭಗೀರತ ಸಿಂಗ್

7 ಭಿರೇಂದ್ರ ಸಿಂಗ್

8 ಅವ್ದೇಶ್ ಕುಮಾರ್ ಯಾದವ್

9 ನಿತಿನ್ ಸಿಂಗ್ ರಾಥೋರ್

10 ರತನ್ ಕುಮಾರ್ ಠಾಕೂರ್

11 ಸುರೇಂದ್ರ ಯಾದವ್

12 ಸಂಜಯ್ ಕುಮಾರ್ ಸಿಂಗ್

13 ರಾಮವಾಕಿಲ್

14 ಧರ್ಮಚಂದ್ರ

15 ಬೆಲ್ಕಾರ್ ಟಾಕಾ

16 ಶ್ಯಾಂ ಬಾಬು

17 ಅಜಿತ್ ಕುಮಾರ್ ಆಜಾದ್

18 ಪ್ರದೀಪ್ ಸಿಂಗ್

19 ಸಂಜಯ್ ರಜಪೂತ್

20 ಕುಶಾಲ್ ಕುಮಾರ್ ರಾವತ್

21 ಜೀತ್ ರಾಮ್

22 ಅಮಿತ್ ಕುಮಾರ್

23 ಬಿಜಯ್ ಕುಮಾರ್ ಮೋಯಾ

24 ಕುಲ್ವಿಂದರ್ ಸಿಂಗ್

25 ವಿಜಯ್ ಸುರೇಂಗ್

26 ವಸಂತ್ ಕುಮಾರ್ ವಿವಿ

27 ಗುರು ಎಚ್

28 ಶುಭಂ ಅನಿರಂಗ್ ಜಿ

29 ಅಮರ್ ಕುಮಾರ್

30 ಅಜಯ್ ಕುಮಾರ್

31 ಮನೀಂದರ್ ಸಿಂಗ್

32 ರಮೇಶ್ ಯಾದವ್

33 ಪ್ರಶನ್ನ ಕುಮಾರ್ ಸಾಹು

34 ಹೇಮರಾಜ್ ಮೀನಾ

35 ಬಬ್ಲಾ ಶಂತ್ರಾ

36 ಅಶ್ವಿನ್ ಕುಮಾರ್ ಕೊಚ್ಚಿ

37 ಪ್ರದೀಪ್ ಕುಮಾರ್

38 ಸುಧೀರ್ ಕುಮಾರ್ ಬನ್ಸಲ್

39 ರವೀಂದ್ರ ಸಿಂಗ್

40 ಎಂ ಬಾಶುಮತರಾಯ್

41 ಮಹೇಶ್ ಕುಮಾರ್

42 ಎನ್‌ಎಲ್ ಗುರ್ಜರ್‌

Wednesday, February 13, 2019

ಬಿಸಿಯೂಟ ಸೇವಿಸಿ 17 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಜನಜಾಗೃತಿ ಸುದ್ಧಿವಾಹಿನಿ

 Feb 14 / 2019

ಚಿಕ್ಕಮಗಳೂರು: ಶಾಲೆಯಲ್ಲಿ ಮಕ್ಕಳಿಗೆ ನೀಡಿದ್ದ ಬಿಸಿಯೂಟ ಸೇವಿಸಿ, ಹಾಲು ಕುಡಿದ 17 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ತಾಲೂಕಿನ ಶಿರವಾಸೆಯಲ್ಲಿ ನಡೆದಿದೆ.

ಶಿರವಾಸೆ ಗ್ರಾಮದಲ್ಲಿರುವ ವಿವೇಕಾನಂದ ಶಾಲೆಯಲ್ಲಿ ಮಧ್ಯಾಹ್ನ ಊಟದ ಬಳಿಕ ಮಕ್ಕಳು ಊಟ ಮಾಡಿ ಹಾಲು ಕುಡಿಯುತ್ತಿದ್ದಂತೆ ತಲೆಸುತ್ತು, ವಾಂತಿ ಹಾಗೂ ಹೊಟ್ಟೆನೋವಿನಿಂದ ಬಳಲಿದ್ದಾರೆ. ಕೂಡಲೇ ಎಚ್ಚೆತ್ತ ಶಿಕ್ಷಕರು ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಬಳಿಕ ಅಲ್ಲಿಂದ ಎಲ್ಲ ಮಕ್ಕಳನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ತಹಶೀಲ್ದಾರ್ ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.ಮಕ್ಕಳು ತಿಂದಿದ್ದ ಪುಳಿಯೊಗರೆ, ಹಾಲು ಮತ್ತು ನೀರನ್ನು ಹೆಚ್ಚಿನ ಪರೀಕ್ಷೆಗೆಂದು ಲ್ಯಾಬ್ ಗೆ ಕಳುಹಿಸಲಾಗಿದೆ.
ನಮ್ಮ ಸುದ್ಧಿ ಗಳನ್ನ ವೀಕ್ಷಿಸಲು ಲಿಂಕ್ ಬಳಸಿ https://youtu.be/EkNJBR144Q8

ಟಿಪ್ಪು ಸುಲ್ತಾನ್ ಹಿಂದೂಗಳ‌ ಮಾನ ರಕ್ಷಕ’ ಆರೂವರೆ ದಶಕದ ಹಿಂದಿನ‌ ನಾಟಕದ ಕರಪತ್ರ ವೈರಲ್!

ಜನಜಾಗೃತಿ ಸುದ್ಧಿವಾಹಿನ
ಫೆ.12,2019: ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ, ಅಪ್ಪಟ ಕನ್ನಡಿಗ ಟಿಪ್ಪು ಸುಲ್ತಾನ್ ಅವರ ದೇಶಪ್ರೇಮವನ್ನು ಕೊಂಡಾಡಿ ನಾಟಕ ಪ್ರದರ್ಶನದ ನಡೆಸಿದ ಹಳೆಯ ಕಾಲದ ಕರಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ. ಹಾಲ ಸಿದ್ದೇಶ್ವರ ಸಂಗೀತ ನಾಟಕ ಮಂಡಳಿ ಹಲಗೇರಿ ತಂಡ 1951ರಲ್ಲಿ ತಮ್ಮ ನಾಟಕದ ಪ್ರದರ್ಶನಕ್ಕಾಗಿ ಹಂಚಿದ ಕರಪತ್ರದ ಎರಡು ಪುಟಗಳು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು, ಹಿರಿಯ ಸಾಹಿತಿ ಮುಹಮ್ಮದ್ ಅಲಿ ಕಮ್ಮರಾಡಿಯವರು ಆರೂವರೆ ದಶಕಗಳ ಹಿಂದಿನ‌ ಈ ಕರಪತ್ರದ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  1. ಟಿಪ್ಪು ಸುಲ್ತಾನ್ ಹಿಂದೂಗಳ‌ ಮಾನ ರಕ್ಷಕ’ ಆರೂವರೆ ದಶಕದ ಹಿಂದಿನ‌ ನಾಟಕದ ಕರಪತ್ರ ವೈರಲ್!ಟಿಪ್ಪು ಸುಲ್ತಾನ್ ಹಿಂದೂಗಳ‌ ಮಾನ ರಕ್ಷಕ’ ಆರೂವರೆ ದಶಕದ ಹಿಂದಿನ‌ ನಾಟಕದ ಕರಪತ್ರ ವೈರಲ್!

ಕರ್ನಾಟಕ ಸ್ವಾತಂತ್ರ್ಯಕ್ಕಾಗಿ ಆತ್ಮರ್ಪಣೆ ಮಾಡಿದ, ಶ್ರೀರಂಗನ ಪರಮ ಭಕ್ತ, ಮಹಮ್ಮದೀಯ ಬಾಂಧವ, ಹಿಂದೂಗಳ ಮಾನ ರಕ್ಷಣೆಗಾಗಿ ತನ್ನ ಮಕ್ಕಳನ್ನು ಒತ್ತೆಯಿಟ್ಟ, ಇಂಗ್ಲೀಷರು ಈ ದೇಶದಿಂದ ಬಿಟ್ಟು ಹೋಗಬೇಕೆಂದು ಹೋರಾಡಿದ ವೀರ, ಶಸ್ತ್ರಾಸ್ತ್ರನಾದರೂ ಹೆಬ್ಬುಲಿಯನ್ನು ಬರೀಗೈಯಲ್ಲಿ ಸೀಳಿ ಒಗೆದ ಧೀರ, ಶೂರ, ಇವರ ನಾಟಕವನ್ನು ನೋಡಿ ಆನಂದಿಸಿರಿ ಎಂಬ ಬರಹವಿರುವ ಕರಪತ್ರ 1951ರ ಇಸವಿಯಲ್ಲಿ ಹಂಚಲ್ಪಟ್ಟಿತ್ತು. ಈ ನಾಟಕ ಮೂಡಬಿದಿರೆಯ ಮಹಾವೀರ ಥಿಯೇಟರ್‌‌ನಲ್ಲಿ‌ ನಡೆದಿದೆ ಎಂಬುದಕ್ಕೆ ಕರಪತ್ರ ಸಾಕ್ಷಿಯಾಗಿದೆ.
ಟಿಪ್ಪು ಸುಲ್ತಾನ್ ನಿಜವಾದ ದೇಶಭಕ್ತ ಮತ್ತು ಹಿಂದೂಗಳ ಪಾಲಿನ ಆಪ್ತಮಿತ್ರ ಎಂಬುದನ್ನು ಸಾರಿ ಸಾರಿ ಹೇಳುವಂತಿದೆ ಆ ಕರಪತ್ರ . ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹಿರಿಯ ಸಾಹಿತಿ ಮುಹಮ್ಮದ್ ಅಲಿ ಕಮ್ಮರಾಡಿ ಹಂಚಿಕೊಂಡ ಕರಪತ್ರ ಸಕ್ಕತ್ ಸೌಂಡು ಮಾಡುತ್ತಿದೆ. ಮತ್ತು ಟಿಪ್ಪು ಸುಲ್ತಾನ್‌ರನ್ನು ಕಡೆ ಗಣಿಸುವ ಜನರ ಮುಖಕ್ಕೆ ಹೊಡೆದು ಹೇಳುವಂತಿದೆ.
ನಮ್ಮ ಸುದ್ಧಿಗಳನ್ನ ವೀಕ್ಷಿಸಲು ಲಿಂಕ್ ಬಳಸಿ https://youtu.be/EkNJBR144Q8

Tuesday, February 12, 2019

⭕ಫೇಸ್‌ಬುಕ್‌ ಗೆಳತಿಯರ ಕಾಟ :ಜೇವರ್ಗಿ ವಿದ್ಯಾರ್ಥಿ ಸಾವು❗

ಜನಜಾಗೃತಿ ಸುದ್ಧಿವಾಹಿನಿ

ಬೆಂಗಳೂರು: ಫೇಸ್‌ಬುಕ್‌ ಗೆಳತಿಯರ ಕಾಟ ತಾಳಲಾರದೆ ಖಾಸಗಿ ಕಾಲೇಜಿನ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾರತ್‌ಹಳ್ಳಿ ಸಮೀಪದ ಕರಿಯಮ್ಮನ ಅಗ್ರಹಾರದ ಪಿಜಿಯಲ್ಲಿ ನಡೆದಿದೆ.


ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಅತೀಶ್‌ ಎಸ್‌.ನಾಯಕ್‌ (19) ಮೃತ ದುರ್ದೈವಿ. ಶನಿವಾರ ಬೆಳಗ್ಗೆ ಕಾಲೇಜಿಗೆ ತೆರಳದೆ ಪಿಜಿಯಲ್ಲಿದ್ದ ಅತೀಶ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಧ್ಯಾಹ್ನ ಮೃತನ ಸಹಪಾಠಿಗಳು ಪಿಜಿಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.


ಫೇಸ್‌ಬುಕ್‌ ಗೆಳತಿಯರಿಗೆ ತಲಾಶ್‌: ಮೃತ ಅತೀಶ್‌, ಮಾರತ್‌ಹಳ್ಳಿ ಹತ್ತಿರದ ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿದ್ದ.


ಕಾಲೇಜು ಸಮೀಪದ ಗೋಪಾಲರೆಡ್ಡಿ ಎಂಬುವರಿಗೆ ಸೇರಿದ ಪಿಜಿಯಲ್ಲಿ ಆತ ನೆಲೆಸಿದ್ದ. ಕಾಲೇಜಿನಲ್ಲಿ ಸಭ್ಯ ವಿದ್ಯಾರ್ಥಿಯಾಗಿದ್ದ ಎಂದು ಮೃತನ ಉಪನ್ಯಾಸಕರು ಹಾಗೂ ಸಹಪಾಠಿಗಳು ಹೇಳಿಕೆ ನೀಡಿದ್ದಾರೆ. ಇತ್ತೀಚಿಗೆ ಅತೀಶ್‌ ವಿಪರೀತವಾಗಿ ಮೊಬೈಲ್‌ ಬಳಸುತ್ತಿದ್ದು, ಸದಾ ಸಾಮಾಜಿಕ ಜಾಲ ತಾಣಗಳಲ್ಲಿ ಸಕ್ರಿಯವಾಗಿದ್ದ ಸಂಗತಿ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.


ಶುಕ್ರವಾರ ಸಹಪಾಠಿಗಳು ಕಾಲೇಜಿಗೆ ತೆರಳಿದ ಬಳಿಕ ಅತೀಶ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಧ್ಯಾಹ್ನ ಕಾಲೇಜಿನಿಂದ ಮರಳಿದ ಮೃತನ ಗೆಳೆಯರು, ಕೊಠಡಿಗೆ ಬಾಗಿಲು ಬಡಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಆತಂಕಗೊಂಡ ಅವರು ಕೂಡಲೇ ಪಿಜಿ ಮಾಲಿಕರಿಗೆ ವಿಷಯ ತಿಳಿಸಿದ್ದರು. ಆನಂತರ ಕೊಠಡಿ ಬಾಗಿಲು ಒಡೆದು ಒಳ ಪ್ರವೇಶಿಸಿದ ನೇಣಿನ ಕುಣಿಕೆಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.


ಕೆಲ ದಿನಗಳ ಹಿಂದೆ ಫೇಸ್‌ಬುಕ್‌ನಲ್ಲಿ ಆತನಿಗೆ ಸೋನಿಯಾ ಹಾಗೂ ಪ್ರಕೃತಿ ಎಂಬ ಹೆಸರಿನ ಯುವತಿಯರು ಪರಿಚಯವಾಗಿತ್ತು. ಬಳಿಕ ಅವರು ನಡುವೆ ಮೊಬೈಲ್‌ ಸಂಖ್ಯೆ ವಿನಿಮಯವಾಗಿ ಮಾತುಕತೆ ಶುರುವಾಗಿತ್ತು. ನಡು ರಾತ್ರಿವರೆಗೆ ಫೇಸ್‌ಬುಕ್‌ ಗೆಳೆಯತಿಯರ ಜತೆ ಅತೀಶ್‌ನ ಮೊಬೈಲ್‌ ಸಂಭಾಷಣೆ ಹಾಗೂ ಚಾಟಿಂಗ್‌ ನಡೆದಿವೆ. ಆದರೆ ಆ ಗೆಳೆತಿಯರನ್ನು ಆತ ಭೇಟಿಯಾಗಿದ್ದ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಹೀಗಾಗಿ ಸಿಡಿಆರ್‌ (ಮೊಬೈಲ್‌ ಕರೆಗಳ) ಅನ್ನು ಪರಿಶೀಲಿಸಿ ಮೃತನ ಅದೃಶ್ಯ ಸ್ನೇಹಿತೆಯರನ್ನು ವಿಚಾರಣೆ ಕರೆಯಲಾಗುತ್ತದೆ.


ಹಲವು ದಿನಗಳ ಹಿಂದೆಯೇ ಸೋನಿಯಾ ಹಾಗೂ ಪ್ರಕೃತ ಎಂಬ ಹುಡುಗಿಯರು ಹಿಂಸೆ ಕೊಡುತ್ತಿದ್ದಾರೆ. ದುಡ್ಡು ಕೊಡುವಂತೆ ಪೀಡಿಸುತ್ತಿದ್ದಾರೆ ಎಂದು ಪುತ್ರ ಹೇಳಿಕೊಂಡಿದ್ದ. ಆತನ ಸಾವಿಗೆ ಆ ಹುಡುಗಿಯರೇ ಕಾರಣವಾಗಿದ್ದಾರೆ ಎಂದು ಮೃತನ ಪೋಷಕರು ದೂರು ಕೊಟ್ಟಿದ್ದಾರೆ. ಅದರನ್ವಯ ದೂರಿನ ಮೇರೆಗೆ ಆತ್ಮಹತ್ಯೆಗೆ ಪ್ರಚೋದನೆ (ಐಪಿಸಿ 306)ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮಾರತ್‌ಹಳ್ಳಿ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/EkNJBR144Q8

ಬಿ.ಎಸ್. ಯಡಿಯೂರಪ್ಪಗೆ `ಬಿಜೆಪಿ ಹೈಕಮಾಂಡ್' ನೀಡಿದೆ ಈ ಖಡಕ್ ಸಂದೇಶ❗

ಜನಜಾಗೃತಿ ಸುದ್ಧಿವಾಹಿನಿ

ಬೆಂಗಳೂರು: ಆಪರೇಷನ್ ಕಮಲ ಆಡಿಯೋ ವಿವಾದ ಜೋರಾಗಿದ್ದು, ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಖಡಕ್ ಸಂದೇಶವನ್ನು ರವಾನೆ ಮಾಡಿದೆ.


ಸದ್ಯಕ್ಕೆ ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಿ 2019 ರ ಲೋಕಸಭೆ ಚುನಾವಣೆಯತ್ತ ಗಮನ ಕೊಡಲು ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.


ರಾಜ್ಯದಲ್ಲಿ ದೋಸ್ತಿ ಸರ್ಕಾರವನ್ನು ಉರುಳಿಸಲು ಆಪರೇಷನ್ ಕಮಲ ನಡೆಸಿದ್ದಾರೆ ಎಂಬ ಆರೋಪ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡಿರುವುದು ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಹಿನ್ನೆಡೆಯಾಗುವಂತೆ ಮಾಡಿದೆ. ಆಡಿಯೋವನ್ನೇ ಬಿಜೆಪಿ ವಿರುದ್ಧ ಅಸ್ತ್ರವಾಗಿ ಪ್ರಯೋಗ ಮಾಡಿದ್ದ ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಕೂಡ ಆಡಿಯೋ ಬಿಡುಗಡೆ ಮಾಡಿ ಬಿಜೆಪಿಯನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿತ್ತು.

ನಮ್ಮ ಸುದ್ಧಿ ಗಳನ್ನ ವೀಕ್ಷಿಸಲು ಲಿಂಕ್ ಬಳಸಿ https://youtu.be/EkNJBR144Q8

ಕೊನೆಗೂ ಬೆಂಗಳೂರಿಗೆ ಬಂದ ಅತೃಪ್ತ ಶಾಸಕರು : ಅಧಿವೇಶನಕ್ಕೆ ಹಾಜರ್❓

ಜನಜಾಗೃತಿ ಸುದ್ಧಿವಾಹಿನಿ


ಬೆಂಗಳೂರು: ಕಳೆದ ಕೆಲ ತಿಂಗಳಿನಿಂದ ಮುಂಬೈನಲ್ಲಿದ್ದ ಕಾಂಗ್ರೆಸ್ ನ ನಾಲ್ವರು ಅತೃಪ್ತಶಾಸಕರು ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.


ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿದ್ದ ನಾಲ್ವರು ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್, ಮಹೇಶ್ ಕಮಟಳ್ಳಿ ಮತ್ತು ಬಿ. ನಾಗೇಂದ್ರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.


ಇನ್ನು ಅತೃಪ್ತ ಶಾಸಕರೊಂದಿಗೆ ಸಂಪರ್ಕದಲ್ಲಿದ್ದ ಎಂಬ ವದಂತಿ ಇದ್ದ ಜೆಡಿಎಸ್ ಶಾಸಕ ನಾರಾಯಣ ಗೌಡ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರಕ್ಕೆ ಸ್ನೇಹಿತರು, ಕುಟುಂಬ ಸದಸ್ಯರನ್ನು ನೋಡಲು ಹೋದಾಗ ಅಸ್ವಸ್ಥಗೊಂಡಿದ್ದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮುಂಬೈನಲ್ಲೇ ಚಿಕಿತ್ಸೆ ಪಡೆಯುತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರಿಗೆ ಆಗಮಿಸಿರುವ ಅತೃಪ್ತ ಕೈ ಶಾಸಕರು ಇಂದು ನಡೆಯಲಿರುವ ಅಧಿವೇಶನಕ್ಕೆ ಹಾಜರಾಗ್ತಾರಾ ಇಲ್ಲವಾ ಎನ್ನವುದು ಇನ್ನೂ ಖಚಿತವಾಗಿಲ್ಲ. ಅನರ್ಹತೆಯ ಭೀತಿ ಎದುರಿಸುತ್ತಿರುವ ನಾಲ್ವರು ಅತೃಪ್ತರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/EkNJBR144Q8

Wednesday, February 6, 2019

🚨ರಾತ್ರೋ ರಾತ್ರಿ ರೌಡಿಗಳ ಚಳಿ ಬಿಡಿಸಿದ ಡಿಸಿಪಿ ರವಿ ಚೆನ್ನಣ್ಣನವರ್

ಜನಜಾಗೃತಿ ಸುದ್ಧಿವಾಹಿನಿ

Feb 07 / 2019


ಬೆಂಗಳೂರು: ದಕ್ಷಿಣ ವಿಭಾಗದ ಬಳಿಕ ಪಶ್ಚಿಮ ವಲಯದ ಪೊಲೀಸರು, ಮಂಗಳವಾರ ರಾತ್ರಿ ದಿಢೀರನೇ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ.


ಪಶ್ಚಿಮ ವಿಭಾಗದ ಸುಮಾರು 300 ಕ್ಕೂ ಹೆಚ್ಚಿನ ರೌಡಿ ಗಳನ್ನು ವಿಚಾರಣೆಗೊಳಪಡಿಸಿದ ಪೊಲೀಸರು, ಪಾತಕಿಗಳ ಆದಾಯ ಮೂಲದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.


ಅಲ್ಲದೆ, ಪ್ರತಿಯೊಬ್ಬರ ಮೊಬೈಲ್ ಸಂಖ್ಯೆ ಪಡೆದ ಪೊಲೀಸರು, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದರೆ ಮುಲಾಜಿಲ್ಲದೆ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.


ರಾತ್ರಿ 1 ಗಂಟೆ ಬಳಿಕ ತಮ್ಮ ವಿಭಾಗದ ಎಸಿಪಿ ಮತ್ತು ಇನ್ಸ್‌ಪೆಕ್ಟರ್‌ಗಳ ಜತೆ ಡಿಸಿಪಿ ರವಿ.ಡಿ.ಚೆನ್ನಣ್ಣನವರ್ ಕಾರ್ಯಾಚರಣೆ ನಡೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೆ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ, ರೌಡಿಗಳಿಗೆ ಚುರುಕು ಮುಟ್ಟಿಸಿದ್ದರು.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/mwF7DPEYnZc

Monday, January 28, 2019

⭕ಮೋದಿ ಪೋಟೋ ತಿರುಚಿದ ತ.ನಾಡಿನ ಎಂಡಿಎಂಕೆ ಸದಸ್ಯ ಬಂಧನ

ಜನಜಾಗೃತಿ ಸುದ್ಧಿವಾಹಿನಿ

     28 Jan 2019


ತಮಿಳುನಾಡಿನ ಎಂಡಿಎಂಕೆ ಸದಸ್ಯನನ್ನು ಭಾನುವಾರ ಬಂಧಿಸಿದ್ದು, ಫೇಸ್ ಬುಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತಿರುಚಲಾಗಿದೆ ಎಂಬ ಆರೋಪದಲ್ಲಿ ಬಂಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಿಕ್ಷೆ ಬೇಡುವಂತೆ ಚಿತ್ರಿಸುವ ಫೋಟೋವನ್ನು ಪೋಸ್ಟ್ ಮಾಡಿದ ಆರೋಪದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೀರ್ ಕಾಳಿ ಪಟ್ಟಣದ ಎಂಡಿಎಂಕೆ ಸದಸ್ಯ ಸತ್ಯರಾಜ್ ಅಲಿಯಾಸ್ ಬಾಲು ಬಂಧಿತ ಆರೋಪಿ. ಬಿಜೆಪಿಯ ಸ್ಥಳೀಯ ನಾಯಕರ ಆರೋಪ ಮೇಲೆ ಆತನನ್ನು ಬಂಧಿಸಲಾಗಿದೆ. ಶಾಂತಿ ಕದಡುವ ಪ್ರಯತ್ನ ಮಾಡಿದ ಉದ್ದೇಶ ಹೊಂದಿದ ಆರೋಪ ಮಾಡಲಾಗಿದೆ. ಸತ್ಯರಾಜ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಸೋಮವಾರದಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.


ಜನವರಿ ಇಪ್ಪತ್ತಾರನೇ ತಾರೀಕು ಆ ಫೋಟೋವನ್ನು ಸತ್ಯರಾಜ್ ಅಪ್ ಲೋಡ್ ಮಾಡಿದ್ದಾನೆ.

ಎಂಡಿಎಂಕೆ ಸದಸ್ಯರು ಅದೇ ದಿನ ಮದುರೈನಲ್ಲಿ ಮೋದಿ ವಿರುದ್ಧ ಪ್ರತಿಭಟನೆ ಆಯೋಜಿಸಿದ್ದರು.


 ತಮಿಳುನಾಡಿನ ಹಿತಾಸಕ್ತಿಗೆ ಮೋದಿ ದ್ರೋಹ ಎಸಗುತ್ತಿದ್ದಾರೆ ಎಂಉ ಪಕ್ಷದ ಸದಸ್ಯರು ಆರೋಪಿಸಿದ್ದರು.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/syaHfI6BpMQ




Wednesday, January 23, 2019

ಕೈ’ ಮುನ್ನೆಲೆಗೆ ಪ್ರಿಯಾಂಕಾ; ಅನಿರೀಕ್ಷಿತ ನಿರ್ಧಾರ ಪ್ರಕಟಿಸಿದ ಕಾಂಗ್ರೆಸ್‌✋🏻

ಜನಜಾಗೃತಿ ಸುದ್ಧಿವಾಹಿನಿ

ನವದೆಹಲಿ: ಹಲವು ವರ್ಷಗಳ ಊಹಾಪೋಹಗಳಿಗೆ ತೆರೆ ಎಳೆದಿರುವ ಕಾಂಗ್ರೆಸ್‌ ಪಕ್ಷವು, ನೆಹರೂ–ಗಾಂಧಿ ಕುಟುಂಬದ ಇನ್ನೊಂದು ಕುಡಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಮುಖ್ಯವಾಹಿನಿ ರಾಜಕಾರಣಕ್ಕೆ ಕರೆ ತಂದಿದೆ.


ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದ್ದು ಉತ್ತರ ಪ್ರದೇಶದ ಪೂರ್ವದ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ. ಈ ಮೂಲಕ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆ ರಾಜ್ಯದಲ್ಲಿ ಭಾರಿ ಸ್ಪರ್ಧೆ ಒಡ್ಡುವ ಇಂಗಿತ ವ್ಯಕ್ತಪಡಿಸಿದೆ. 


ಪ್ರಿಯಾಂಕಾ (47) ಅವರು ಫೆಬ್ರುವರಿ ಮೊದಲ ವಾರದಲ್ಲಿ ಹೊಸ ಹೊಣೆಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್‌ ತಿಳಿಸಿದೆ.


ಮುಂದಿನ ಲೋಕಸಭಾ ಚುನಾವಣೆಗೆ ಕೆಲವೇ ವಾರಗಳಿರುವ ಈ ಸಂದರ್ಭದಲ್ಲಿ ಪ್ರಿಯಾಂಕಾ ಅವರ ನೇಮಕ ಭಾರಿ ಕಾರ್ಯತಂತ್ರ ಎಂದೇ ವಿಶ್ಲೇಷಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಪ್ರಭಾವ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಲೇ ಇದೆ. ಎಸ್‌ಪಿ ಮತ್ತು ಬಿಎಸ್‌ಪಿ ಮೈತ್ರಿಯಲ್ಲಿ ಕಾಂಗ್ರೆಸ್‌ಗೆ ಅವಕಾಶ ನೀಡದಿರುವುದು ಆ ಪಕ್ಷದ ಪರಿಸ್ಥಿತಿಯನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ. ಈ ಎಲ್ಲದರಿಂದ ಬಿಡಿಸಿಕೊಂಡು ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬುವುದು ಪ್ರಿಯಾಂಕಾ ಅವರಿಗೆ ಸಾಧ್ಯವಾಗ

ಬಹುದು ಎನ್ನಲಾಗುತ್ತಿದೆ. 

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/UQjfgO_t0g0

ಪ್ರಿಯಾಂಕಾ ರಂಗಪ್ರವೇಶ: ಶಿವಸೇನೆ ಹೇಳಿದ್ದೇನು?*_🚩✋🏻

ಜನಜಾಗೃತಿ ಸುದ್ಧಿವಾಹಿನಿ


ಮುಂಬೈ, ಜ.24: ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ ಪಕ್ಷಕ್ಕೆ ಗಣನೀಯ ಲಾಭವಾಗಲಿದೆ ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ. ಪ್ರಿಯಾಂಕಾ ಒಳ್ಳೆಯ ವ್ಯಕ್ತಿತ್ವ ಹೊಂದಿದ್ದು, ಅಜ್ಜಿ ಇಂದಿರಾ ಗಾಂಧಿಯ ಹಲವು ಗುಣಗಳು ಕಾಣಿಸುತ್ತವೆ ಎಂದು ಹೇಳಿಕೆ ನೀಡಿದೆ.


ಕಾಂಗ್ರೆಸ್ ಪಕ್ಷ ಪ್ರಿಯಾಂಕಾ ಗಾಂಧಿಯವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಪೂರ್ವ ಉತ್ತರ ಪ್ರದೇಶಕ್ಕೆ ನೇಮಕ ಮಾಡುವ ಮೂಲಕ ಅವರು ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದಂತಾಗಿದೆ. ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಹುಮ್ಮಸ್ಸಿನಿಂದ ಪಕ್ಷವನ್ನು ಮುನ್ನಡೆಸುವುದು ಕಾಂಗ್ರೆಸ್‌ನ ಉದ್ದೇಶವಾಗಿದೆ.


ಪಿಟಿಐ ಜತೆ ಮಾತನಾಡಿದ ಶಿವಸೇನೆ ವಕ್ತಾರೆ ಮನಿಷಾ ಕಯಂಡೆ, ಕಾಂಗ್ರೆಸ್‌ಗೆ ಸಂಭ್ರಮಿಸಲು ಪ್ರಬಲ ಕಾರಣಗಳಿವೆ. ಇದುವರೆಗೆ ಕಾಂಗ್ರೆಸ್ ಸರಹದ್ದಿನಲ್ಲಿದ್ದ ಪ್ರಿಯಾಂಕಾ ಗಾಂಧಿ ಇದೀಗ ಸಕ್ರಿಯ ರಾಜಕೀಯದ ಭಾಗವಾಗಿದ್ದಾರೆ. ಆಕೆಯ ಒಳ್ಳೆಯ ವ್ಯಕ್ತಿತ್ವದಿಂದಾಗಿ ಕಾಂಗ್ರೆಸ್‌ಗೆ ಲಾಭವಾಗಲಿದೆ. ತನ್ನನ್ನು ತಾನು ಅಭಿವ್ಯಕ್ತಪಡಿಸುವ ಸಾಮರ್ಥ್ಯ ಹಾಗೂ ಮತದಾರರನ್ನು ಸೆಳೆಯುವ ಕೌಶಲ ಆಕೆಗೆ ಇದೆ. ಅಜ್ಜಿಯ ಗುಣಗಳು ಅವರಲ್ಲಿ ಬಹಳಷ್ಟಿವೆ ಎಂದು ಮನಿಷಾ ಹೇಳಿದ್ದಾರೆ. "ಮತ ಹಾಕಲು ಹೋಗುವಾಗ ಜನ, ಪ್ರಿಯಾಂಕಾ ಗಾಂಧಿಯಲ್ಲಿ ಇಂದಿರಾರನ್ನು ಕಾಣಲಿದ್ದಾರೆ" ಎಂದು ಬಣ್ಣಿಸಿದ್ದಾರೆ.

ಎನ್‌ಸಿಪಿ ವಕ್ತಾರ ನವಾಬ್ ಮಲಿಕ್ ಕೂಡಾ, ಪ್ರಿಯಾಂಕಾ ಅವರ ಅಧಿಕೃತ ಪ್ರವೇಶದಿಂದ ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ವಿಶೇಷ ಲಾಭವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ಸುದ್ಧಿ ವೀಕ್ಷಿಸಿ https://youtu.be/UQjfgO_t0g0

Monday, January 21, 2019

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು : ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ

ಜನಜಾಗೃತಿ ಸುದ್ಧಿವಾಹಿನಿ

ಸಿದ್ದಗಂಗಾ ಶ್ರೀಗಳ ನಿಧನಕ್ಕೆ ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಮುಹಮ್ಮದ್ ಅತರುಲ್ಲಾ ಷರೀಫ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಸಿದ್ದಗಂಗಾ ಶ್ರೀಗಳು ಓರ್ವ ವ್ಯಕ್ತಿ ಎಂಬುದಕ್ಕಿಂತ ಒಂದು ಶಕ್ತಿಯಾಗಿ ಬದುಕಿದವರು. ಅನೇಕಾರು ಶಾಲಾ ಕಾಲೇಜುಗಳನ್ನು ಸ್ಥಾಪಿಸಿ ಸಮಾಜಕ್ಕೆ ಅರ್ಪಿಸಿದವರು. ಧರ್ಮಸ್ಥಳದಲ್ಲಿ ನಡೆದ ಸರ್ವ ಧರ್ಮ ಸಮ್ಮೇಳನದ ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವುದೇ ಧಾರ್ಮಿಕ ಸೌಹಾರ್ದತೆಯ ಮೇಲೆ ಅವರಿಗಿದ್ದ ಬದ್ಧತೆಗೆ ಸಾಕ್ಷಿ. ಅವರು ಜಾತಿ ಧರ್ಮದ ಗೋಡೆಯನ್ನು ಮೀರಿ ಬೆಳೆದವರು. ಸಮಾಜವನ್ನು ಜನರ ಕೂಟ ಎಂದು ನೋಡಿರುವರೇ ಹೊರತು ಹಿಂದೂ ಮುಸ್ಲಿಂ ಆಗಿ ಒಮ್ಮೆಯೂ ಭಾವಿಸಿಲ್ಲ. ಈ ಗುಣವೇ ಅವರನ್ನು ಅನನ್ಯಗೊಳಿಸಿದೆ. ಅವರ ನಿಧನವು ಈ ಸಮಾಜಕ್ಕೆ ಬಹುದೊಡ್ಡ ನಷ್ಟ. ಅವರು ಪ್ರತಿಪಾದಿಸಿದ ಸೌಹಾರ್ದ ಸಮಾಜ ಕಾರ್ಯರೂಪಕ್ಕೆ ಬರಲಿ ಮತ್ತು ಅವರ ಪರಿವಾರ, ಅಭಿಮಾನಿ ವರ್ಗಕ್ಕೆ ಅವರ ಅನುಪಸ್ಥಿತಿಯನ್ನು ಸಹಿಸುವ ಸಾಮರ್ಥ್ಯವನ್ನು ದೇವನು ದಯಪಾಲಿಸಲಿ ಎಂದರು.


ಅವರೊಂದು ಸರ್ಕಾರದಂತೆ ಕಾರ್ಯನಿರ್ವಹಿಸಿದರು. ಅನ್ನದಾನ ಮತ್ತು ವಿದ್ಯಾದಾನದ ಮೂಲಕ ಲಕ್ಷಾಂತರ ಮಂದಿ ಹೊಟ್ಟೆಯ ಹಸಿವು ಮತ್ತು ಮೆದುಳಿನ ಹಸಿವನ್ನು ತಣಿಸಿದರು. ಆದ್ದರಿಂದ ಭಾರತ ಸರಕಾರವು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಮುಹಮ್ಮದ್ ಅತರುಲ್ಲಾ ಷರೀಫ್ ವಿನಂತಿಸಿದ್ದಾರೆ.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/jcz6XKhO-GY

ನನ್ನ ಪಾಲಿಗೆ ‘ನಡೆದಾಡುತ್ತಿದ್ದ ಬಸವಣ್ಣ’ ಡಾ.ಶ್ರೀ ಶಿವಕುಮಾರ ಸ್ವಾಮೀಜಿ: ಮಾಜಿ ಸಿಎಂ ಸಿದ್ದರಾಮಯ್ಯ

ಜನಜಾಗೃತಿ ಸುದ್ಧಿವಾಹಿನಿ

ಬೆಂಗಳೂರು,: ಜ.21: "ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಲಿಂಗೈಕ್ಯದಿಂದ ನಾನು ಆಘಾತಕ್ಕೀಡಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದು:ಖತಪ್ತ ಮನಸ್ಸಿನಿಂದ ಪ್ರಾರ್ಥಿಸುತ್ತೇನೆ. ದು:ಖದಲ್ಲಿರುವ ಸಮಸ್ತ ಭಕ್ತಾಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


"ನಾವು ಯಾರೂ ಬಸವಣ್ಣನವರನ್ನು ಕಣ್ಣಾರೆ ನೋಡಿಲ್ಲ, ನಾನು ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳಲ್ಲಿ ಬಸವಣ್ಣನನ್ನು ಕಾಣುತ್ತಿದ್ದೆ. ಅವರನ್ನು ನಡೆದಾಡುವ ದೇವರು ಎನ್ನುತ್ತಾರೆ. ನನ್ನ ಪಾಲಿಗೆ ಅವರು ‘ನಡೆದಾಡುತ್ತಿದ್ದ ಬಸವಣ್ಣ’ ಆಗಿದ್ದರು".


"ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯದಲ್ಲಿ ನಡೆಯುತ್ತಿದ್ದ ಏರುಪೇರು ನಮ್ಮೆಲ್ಲರನ್ನೂ ಆತಂಕಕ್ಕೀಡುಮಾಡಿತ್ತು. ಇಂತಹದ್ದೊಂದು ದಿನ ಎದುರಾಗಬಹುದೆಂಬ ಭಯ ನಿಜವಾಗಿದೆ. ಸಾಧನೆಯ ಮೂಲಕ ಲೋಕವನ್ನೇ ಗೆದ್ದಿರುವ ಸ್ವಾಮಿಗಳು ಕೊನೆಗೂ ಸಾವನ್ನು ಗೆಲ್ಲಲಾಗದೆ ಶರಣಾಗಿ ನಮ್ಮನ್ನು ಅನಾಥರಾಗಿಸಿದ್ದಾರೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಶ್ರೀ ಗಳು 11.44ಗಂಟೆಗೆ ಲಿಂಗೈಕ್ಯ ರಾದರು ಏಕೆ ವಿಷಯ ತಿಳಿಸಿಲ್ಲ ! ?

ಜನಜಾಗೃತಿ ಸುದ್ಧಿವಾಹಿನಿ

 ತುಮಕೂರ್ :ಸಿದ್ದಗಂಗಾ ಮಠದ ಶ್ರೀಗಳಾದ ಶ್ರೀ ಶ್ರೀ ಡಾ ! !  ಶಿವಕುಮಾರ್ ಸ್ವಾಮೀಜಿಗೆ ಮಕ್ಕಳು ಅಂದರೆ ತುಂಬ ಪ್ರೀತಿ ಕಾಳಜಿ ಶ್ರೀ ಗಳ ಆರೋಗ್ಯ ಸರಿ ಇಲ್ಲ ದಿದ್ದರು ಮಕ್ಕಳ ಬಗ್ಗೆ ಅವರ ಕಾಳಜಿ ನೋಡಿದ್ರೆ ಗೊತ್ತಾಗುತ್ತೆ ನಡೆದಾಡುವ ದೇವರ ಕರುಣೆ ಮಕ್ಕಳ ಮೇಲಿನ ಪ್ರೀತಿ ಸ್ವಾಮೀಜಿ ತಾವು ಅನಾರೋಗ್ಯ ದಿಂದ ಬಳಲುತಿದ್ದಾಗ ನಾನು ಯಾವಗ ಸತ್ತರು ಸರಿಯೇ ಮಕ್ಕಳು ಮಧ್ಯಾನದ ದಾಸೋಹ ವನ್ನು ಸ್ವೀಕರಿಸಿದ ನಂತರವೇ ವಿಷಯ  ತಿಳಿಸಬೇಕು ಎಂದಿದಾರಂತೇ ಅದಕ್ಕಾಗಿಯೇ ಶ್ರೀ ಗಳು 11:44 ಕ್ಕೆ ನಿಧನ ರಾದರು ವಿಷಯ ತಿಳಿಸಲಿಲ್ಲ.


ಸಿದ್ದಗಂಗಾ ಮಠದ ಸ್ವಾಮೀಜಿ ವಿಧಿವಶ ಶಾಲಾ-ಕಾಲೇಜುಗಳಿಗೆ ರಜೆ ಫೋಷಣೆ

ಜನಜಾಗೃತಿ ಸುದ್ಧಿವಾಹಿನಿ

ತುಮಕೂರು: ನಡೆದಾಡುವ ದೇವರೆಂದೆ ಖ್ಯಾತರಾದ ಡಾ. ಶಿವಕುಮಾರ ಸ್ವಾಮೀಜಿಗಳು ಇಂದು ವಿಧಿವಶರಾಗಿದ್ದಾರೆ. ಇಂದು ಬೆಳಗ್ಗೆ 11:44ಕ್ಕೆ ಸ್ವಾಮೀಜಿಗಳು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಶ್ರೀಗಳಿಗೆ 111 ವರ್ಷ ವಯಸ್ಸಾಗಿದ್ದು,  ಅಸಂಖ್ಯಾತ ಭಕ್ತಾದಿಗಳನ್ನು ಅಗಲಿದ್ದಾರೆ. ಸಿದ್ದಗಂಗಾ ಮಠದ ಶಾಲಾ-ಕಾಲೇಜುಗಳಿಗೆ ರಜೆ ಫೋಷಣೆ ಮಾಡಲಾಗಿದೆ.


ಏಪ್ರಿಲ್​ 1, 1907 ರಂದು ಜನಿಸಿದ ಸಿದ್ದಗಂಗಾ ಶ್ರೀಗಳು ಇತ್ತೀಚೆಗೆ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು. ಜೊತೆಗೆ ವಯೋಸಹಜವಾಗಿಯೂ ಅವರ ಆರೋಗ್ಯ ಕ್ಷೀಣಿಸಿತ್ತು. ಶ್ರೀಗಳನ್ನು ನಗರದ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ತಮ್ಮ ಕೊನೆಯ ಕ್ಷಣಗಳನ್ನು ಮಠದಲ್ಲೇ ಕಳೆಯಬೇಕು ಎಂಬ ಅವರ ಒತ್ತಾಸೆಯ ಮೇರೆಗೆ ಶ್ರೀಗಳನ್ನು ಹಳೆಯ ಮಠಕ್ಕೆ ಕರೆತರಲಾಗಿತ್ತು.


ಶ್ವಾಸಕೋಶದ ಸೋಂಕಿನ ಸಂಬಂಧ ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಕಳೆದ ತಿಂಗಳು ಸರ್ಜರಿ ಮಾಡಲಾಗಿತ್ತು. ಸರ್ಜರಿ ಬಳಿಕ ಶ್ರೀಗಳು ಬಹು ಬೇಗನೇ ಚೇತರಿಸಿಕೊಂಡಿದ್ದರು. ಆದ್ರೆ ಸೋಂಕು ಮಾತ್ರ ನಿವಾರಣೆಯಾಗಿರಲಿಲ್ಲ. ಅಲ್ಲದೇ ಶ್ರೀಗಳಿಗೆ ಉಸಿರಾಟದ ತೊಂದರೆ ಇತ್ತು. ನಾಳೆ ಸಂಜೆ 4.30ಕ್ಕೆ ಸ್ವಾಮೀಜಿಗಳ ಅಂತಿಮ ವಿಧಿವಿಧಾನ ನೆರವೇರಿಸಲಾಗುತ್ತದೆ.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/QWnSxVvFs7I

Saturday, January 19, 2019

ಭಾರತದ ಸಾಲ ಮೋದಿ ಸರ್ಕಾರದ ಅವಧಿಯಲ್ಲಿ 50% ಏರಿಕೆ❗

ಜನಜಾಗೃತಿ ಸುದ್ಧಿವಾಹಿನಿ


     20 jan 2019


ನವದೆಹಲಿ: ನಾಲ್ಕೂವರೆ ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಆಳ್ವಿಕೆಯಲ್ಲಿ ಒಟ್ಟಾರೆ ಕೇಂದ್ರ ಸರ್ಕಾರಿ ಸಾಲದ ಪ್ರಮಾಣ ಶೇ.49ರಷ್ಟುಜಿಗಿತ ಕಂಡು, 82 ಲಕ್ಷ ಕೋಟಿ ರು.ಗೆ ಏರಿಕೆಯಾಗಿದೆ ಎಂದು ಸ್ವತಃ ಸರ್ಕಾರವೇ ಬಿಡುಗಡೆ ಮಾಡಿರುವ ಅಂಕಿ-ಅಂಶಗಳು ಮಾಹಿತಿ ನೀಡಿವೆ.

2014ರ ಜೂನ್‌ನಲ್ಲಿ ಕೇಂದ್ರ ಸರ್ಕಾರದ ಮೇಲೆ ಒಟ್ಟಾರೆ 54,90,763 ಕೋಟಿ ರು.ನಷ್ಟುಸಾಲವಿತ್ತು. ಆದರೆ ಅದು 2018ರ ಸೆಪ್ಟೆಂಬರ್‌ನಲ್ಲಿ 82,03,253 ಕೋಟಿ ರು.ಗೆ ಏರಿಕೆ ಕಂಡಿದೆ ಎಂದು ಸರ್ಕಾರದ ಸಾಲಕ್ಕೆ ಸಂಬಂಧಿಸಿದ ಹಣಕಾಸು ಸಚಿವಾಲಯದ 8ನೇ ಆವೃತ್ತಿಯ ಸ್ಥಿತಿಗತಿ ವರದಿ ತಿಳಿಸಿದೆ.

ಸಾರ್ವಜನಿಕ ಸಾಲದ ಪ್ರಮಾಣ ಶೇ.51.7ರಷ್ಟುಹೆಚ್ಚಳಗೊಂಡು, 48 ಲಕ್ಷ ಕೋಟಿ ರು.ನಿಂದ 73 ಲಕ್ಷ ಕೋಟಿ ರು.ಗೆ ಏರಿಕೆಯಾಗಿದೆ. ಸರ್ಕಾರದ ಒಟ್ಟಾರೆ ಸಾಲ ಏರಿಕೆಯಾಗಲು ಇದು ಪ್ರಮುಖ ಕಾರಣವಾಗಿದೆ.ಸರ್ಕಾರ ಹೊಂದಿರುವ ಒಟ್ಟಾರೆ ಸಾಲದ ವಿಸ್ತೃತ ವಿಶ್ಲೇಷಣೆಯನ್ನು ಒಳಗೊಂಡ ಸ್ಥಿತಿಗತಿ ವರದಿಯನ್ನು ಹಣಕಾಸು ಸಚಿವಾಲಯ ಹೊರತರುತ್ತದೆ. 2010-11ನೇ ಸಾಲಿನಿಂದ ಪ್ರತಿ ವರ್ಷ ಇದನ್ನು ಬಿಡುಗಡೆ ಮಾಡಲಾಗುತ್ತಿದೆ.

ನಮ್ಮ ಸುದ್ಧಿ ಗಳನ್ನ ವೀಕ್ಷಿಸಲು ಲಿಂಕ್ ಬಳಸಿ https://youtu.be/S3d-poVcRy4 

Thursday, January 17, 2019

💵ಡಾಲರ್‌ ಎದುರು ರೂಪಾಯಿ ಕುಸಿತ: ಸೆನ್ಸೆಕ್ಸ್‌ 106 ಅಂಕ ನಷ್ಟ


ಜನಜಾಗೃತಿ ಸುದ್ಧಿವಾಹಿನಿ

     18 jan 2019


ಮುಂಬಯಿ: ಡಾಲರ್‌ ಎದುರು ರೂಪಾಯಿಯ ದೌರ್ಬಲ್ಯವನ್ನು ಅನುಸರಿಸಿ ಫಾರ್ಮಾ ಮತ್ತು ಬ್ಯಾಂಕಿಂಗ್‌ ರಂಗದ ಶೇರುಗಳು ಭರಾಟೆ ಮಾರಾಟವನ್ನು ಕಂಡ ಪ್ರಯುಕ್ತ ಮುಂಬಯಿ ಶೇರು ಪೇಟೆ ಇಂದು ಶುಕ್ರವಾರದ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 80 ಅಂಕಗಳ ಕುಸಿತವನ್ನು ಕಂಡಿತು.

ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌ 106.87 ಅಂಕಗಳ ನಷ್ಟದೊಂದಿಗೆ 36,267.21 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 39.20 ಅಂಕಗಳ ನಷ್ಟದೊಂದಿಗೆ 10,866.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಡಾಲರ್‌ ಎದುರಿನ ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ 21 ಪೈಸೆಗಳ ಕುಸಿತವನ್ನು ಕಂಡು 71.24 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.ಇಂದಿನ ಬೆಳಗ್ಗಿನ ವಹಿವಟಿನಲ್ಲಿ ಸನ್‌ ಫಾರ್ಮಾ, ರಿಲಯನ್ಸ್‌, ಎಸ್‌ ಬ್ಯಾಂಕ್‌, ಎಚ್‌ ಯು ಎಲ್‌, ಎಕ್ಸಿಸ್‌ ಬ್ಯಾಂಕ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/ESMD9rZEQ-E

ಗಮನಿಸಿ: 1 ದಿನ ರಾಜ್ಯಾದ್ಯಂತ TV ಕೇಬಲ್ ಬಂದ್‌, ಯಾವಾಗ? ಯಾಕೆ?

ಜನಜಾಗೃತಿ ಸುದ್ಧಿವಾಹಿನಿ

    16, Jan 2019

ಕರ್ನಾಟಕ ರಾಜ್ಯ ಕೇಬಲ್ ಆಪರೇಟರ್‌ಗಳು ಪ್ರತಿಭಟನೆಗೆ ಮುಂದಾಗಿದ್ದು, ಒಂದು ದಿನ ಕೇಬಲ್ ಬಂದ್ ಮಾಡಲು ನಿರ್ಧರಿಸಿದ್ದಾರೆ. ಬಂದ್ ಯಾವಾಗ? ಯಾಕೆ? ಇಲ್ಲಿದೆ ಡಿಟೇಲ್ಸ್.

ಬೆಂಗಳೂರ್  ಟ್ರಾಯ್‌ನ ಹೊಸ ಕೇಬಲ್ ನಿಯಮಗಳನ್ನು ವಿರೋಧಿಸಿ ಕರ್ನಾಟಕ ರಾಜ್ಯ ಕೇಬಲ್ ಆಪರೇಟರ್‌ಗಳು ಜನವರಿ 24ರಂದು ರಾಜ್ಯಾದ್ಯಾಂತ ಕೇಬಲ್ ಬಂದ್ ಮಾಡಲಿದ್ದಾರೆ.

ಬೆಂಗಳೂರಿನ ಖಾಸಗಿ ಹೊಟೆಲ್‌ನಲ್ಲಿ ಇಂದು [ಬುಧವಾರ] ಕೇಬಲ್ ಆಪರೇಟರ್‌ಗಳು ಸಭೆ ನಡೆಸಿದ್ದು, ಟ್ರಾಯ್ ನ ಹೊಸ ನೀತಿ ಮತ್ತು ದರ ಪದ್ಧತಿ ವಿರುದ್ಧ ಸಾಮೂಹಿಕವಾಗಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. 

ಟೀವಿ ಚಾನಲ್ ಹೊಸ ದರ ಫೆ. 1 ಕ್ಕೆ ಮುಂದೂಡಿಕೆ

ಫೆಬ್ರವರಿ 1ರಿಂದ ಟ್ರಾಯ್ ಹೊಸ ದರಗಳು ಮತ್ತು ನಿಯಮಗಳನ್ನು ಜಾರಿಗೆ ತರಲಿದೆ. ಹೊಸ ದರ ಮತ್ತು ನಿಯಮಗಳನ್ನು ವಿರೋಧಿಸಿ ಆಪರೇಟರ್‌ಗಳು ಪ್ರತಿಭಟನೆ ಮಾಡಲಿದ್ದಾರೆ. ಇದ್ರಿಂದ ಜನವರಿ 24 ರಂದು ಕೇಬಲ್ ಟಿವಿ ಬಂದ್ ಆಗಲಿದೆ.

ಕೇಬಲ್‌, ಡಿಟಿಎಚ್‌ ನಿಜಕ್ಕೂ ದುಬಾರಿಯಾಗುತ್ತಾ?

ಜನವರಿ 24 ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕದಲ್ಲಿ ಕೇಬಲ್ ಬಂದ್ ಆಗಲಿದೆ. ಕರ್ನಾಟಕದಾದ್ಯಂತ ಕೇಬಲ್ ಟಿವಿ ಬಂದ್ ಆಗಲಿದೆ. ಟ್ರಾಯ್‌ ನೀತಿಗಳ ವಿರುದ್ಧ ಕೇಬಲ್ ಆಪರೇಟರ್‌ಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಅಲ್ಲಿಯೂ ಅವರಿಗೆ ಹಿನ್ನಡೆ ಆಗಿದೆ. 

ಹಿನ್ನಲೆಯಲ್ಲಿ ಸುಪ್ರಿಂ ತೀರ್ಪನ್ನು ಮರುಪರಿಶೀಲನೆಗೆ ಅರ್ಜಿ ಹಾಕಿ ಕಾನೂನು ಹೋರಾಟ ಮುಂದುವರಿಸಿದ್ದಾರೆ.

ನಮ್ಮ ಸುದ್ಧಿ ನೋಡಲು ಲಿಂಕ್ ಬಳಸಿ https://youtu.be/ESMD9rZEQ-E

Wednesday, January 16, 2019

🕋ಹಜ್‌ ಯಾತ್ರೆ-2019: ರಾಜ್ಯದಿಂದ 6701 ಮಂದಿ ಆಯ್ಕೆ- ಸಚಿವ ಝಮೀರ್‌ ಅಹ್ಮದ್‌

ಜನಜಾಗೃತಿ ಸುದ್ಧಿವಾಹಿನಿ 


     16 jan 2019


ಬೆಂಗಳೂರು: ಭಾರತೀಯ ಹಜ್ ಸಮಿತಿಯು ಪ್ರಸಕ್ತ ಸಾಲಿನ ಹಜ್‌ ಯಾತ್ರೆಗಾಗಿ ರಾಜ್ಯದಿಂದ 6701 ಮಂದಿಯನ್ನು ಆಯ್ಕೆ ಮಾಡಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಬಿ.ಝೆಡ್. ಝಮೀರ್‌ ಅಹ್ಮದ್‌ ಖಾನ್ ತಿಳಿಸಿದರು.


ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ರಾಜ್ಯ ಹಜ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಹಜ್‌ ಯಾತ್ರಿಗಳನ್ನು ಲಾಟರಿ(ಖುರ್ರಾ) ಮೂಲಕ ಆಯ್ಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.


ಸೌದಿ ಅರೇಬಿಯಾ ಸರಕಾರವು ಭಾರತೀಯ ಹಜ್ ಸಮಿತಿಗೆ 1,23,900 ಮಂದಿಯ ಕೋಟಾವನ್ನು ಹಂಚಿಕೆ ಮಾಡಿದೆ. 2011ರ ಜನಗಣತಿಯನ್ನು ಆಧರಿಸಿ ಮುಸ್ಲಿಮರ ಜನಸಂಖ್ಯೆಗೆ ಅನುಗುಣವಾಗಿ ವಿವಿಧ ರಾಜ್ಯಗಳಿಗೆ ಭಾರತೀಯ ಹಜ್ ಸಮಿತಿಯು ಕೋಟಾವನ್ನು ನಿಗದಿ ಮಾಡಿದೆ ಎಂದು ಅವರು ಹೇಳಿದರು.


ನಮ್ಮ ರಾಜ್ಯಕ್ಕೆ 6701 ಮಂದಿಯ ಕೋಟಾವನ್ನು ನಿಗದಿ ಮಾಡಲಾಗಿದ್ದು, ಇಂದು ಲಾಟರಿ ಮೂಲಕ 5884 ಮಂದಿಯನ್ನು ಆಯ್ಕೆ ಮಾಡಲಾಗಿದೆ.


ರಾಜ್ಯ ಹಜ್ ಸಮಿತಿಯು 13,995 ಅರ್ಜಿಗಳನ್ನು ಸ್ವೀಕರಿಸಿದ್ದು, ಈ ಪೈಕಿ 7298 ಪುರುಷರು, 6685 ಮಹಿಳೆಯರು ಹಾಗೂ 12 ಮಕ್ಕಳು ಅರ್ಜಿ ಸಲ್ಲಿಸಿದ್ದರು ಎಂದು ಝಮೀರ್‌ ಅಹ್ಮದ್‌ ಖಾನ್ ತಿಳಿಸಿದರು.


70 ವರ್ಷ ಮೇಲ್ಪಟ್ಟವರ ಮೀಸಲಾತಿ ಪ್ರವರ್ಗದಲ್ಲಿ 794 ಅರ್ಜಿದಾರರು ಹಾಗೂ 45 ವರ್ಷ ಮೇಲ್ಪಟ್ಟ ಮಹಿಳೆಯರ ಮೀಸಲಾತಿ ಪ್ರವರ್ಗದಲ್ಲಿ 23 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವರನ್ನು ನೇರವಾಗಿ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.


ಯಾರಿಗೆ ಹಜ್‌ ಯಾತ್ರೆಗೆ ಹೋಗಲು ಅವಕಾಶ ಸಿಗಲಿಲ್ಲವೋ ಅವರು ನಿರಾಶೆಗೊಳ್ಳುವುದು ಬೇಡ. ಸರ್ವಶಕ್ತನಾದ ಅಲ್ಲಾಹ್ ಯಾರನ್ನು ಬೇಕೋ ಅವರನ್ನು ತನ್ನ ಮನೆಯ ದರ್ಶನ ಪಡೆಯಲು ಕರೆಯುತ್ತಾನೆ. ಹೈದರಾಬಾದಿನ ನಿಝಾಮರು ಕೋಟ್ಯಂತರ ರೂ.ಗಳನ್ನು ಪವಿತ್ರ ಮಕ್ಕಾ ಹಾಗೂ ಮದೀನಾಗಳಿಗೆ ನೀಡಿದ್ದಾರೆ. ಆದರೆ, ಅವರಿಗೆ ಹಜ್‌ ಯಾತ್ರೆ ಕೈಗೊಳ್ಳುವ ಅವಕಾಶ ಸಿಗಲಿಲ್ಲ ಎಂದು ಝಮೀರ್‌ ಅಹ್ಮದ್‌ ಖಾನ್ ಹೇಳಿದರು.

ಲಾಟರಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗದವರು ಯಾವುದೇ ಕಾರಣಕ್ಕೂ ಯಾರ ಮೂಲಕವೂ ಒತ್ತಡ ಹೇರುವ ಪ್ರಯತ್ನವನ್ನು ಮಾಡಬೇಡಿ. ಆನ್‌ಲೈನ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಇದರಲ್ಲಿ ಯಾರ ಹಸ್ತಕ್ಷೇಪಕ್ಕೂ ಅವಕಾಶವಿಲ್ಲ ಎಂದು ಝಮೀರ್‌ ಅಹ್ಮದ್ ಖಾನ್ ಹೇಳಿದರು.

ರಾಜ್ಯ ಹಜ್ ಸಮಿತಿಯ ಅಧ್ಯಕ್ಷ ಆರ್.ರೋಷನ್‌ ಬೇಗ್ ಮಾತನಾಡಿ, ದೇಶದಲ್ಲೆ ಮಾದರಿಯಾದ ಹಜ್ ಕ್ಯಾಂಪ್ ಅನ್ನು ನಮ್ಮ ರಾಜ್ಯದಲ್ಲಿ ನಡೆಸಲಾಗುತ್ತಿದೆ. ಯಾತ್ರಿಗಳಿಗೆ ಸೂಕ್ತವಾದ ತರಬೇತಿ, ಮಾರ್ಗದರ್ಶನವನ್ನು ನೀಡಲಾಗುತ್ತಿದೆ. ವಿವಿಧ ರಾಜ್ಯಗಳ ಪ್ರತಿನಿಧಿಗಳು ನಮ್ಮ ರಾಜ್ಯದ ಮಾದರಿಯನ್ನು ಅನುಸರಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿರುವ ಹಜ್‌ ಭವನವು ಇಡೀ ದೇಶಕ್ಕೆ ಮಾದರಿ. 100 ಕೊಠಡಿಗಳು ಅದರಲ್ಲಿದ್ದು, ಸಿಇಟಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಹೊರ ಜಿಲ್ಲೆಗಳು, ಹೊರ ರಾಜ್ಯದಿಂದ ಬರುವ ವಿದ್ಯಾರ್ಥಿಗಳು ತಂಗಲು ಇದರಲ್ಲಿ ಅವಕಾಶ ಮಾಡಿಕೊಡಲಾಗುವುದು. ವರ್ಷದ ಎಲ್ಲ ದಿನಗಳಲ್ಲೂ ಹಜ್ ಭವನ ಸಕ್ರಿಯವಾಗಿರಬೇಕು ಎಂಬುದು ನಮ್ಮ ಬಯಕೆ ಎಂದು ಅವರು ಹೇಳಿದರು.ಕಾರ್ಯಕ್ರಮದಲ್ಲಿ ಯುವಜನ ಸೇವೆ ಹಾಗೂ ಕ್ರೀಡಾ ಸಚಿವ ರಹೀಮ್‌ ಖಾನ್, ವಿಧಾನಪರಿಷತ್ ಸದಸ್ಯರಾದ ನಸೀರ್‌ ಅಹ್ಮದ್, ಕೆ.ಅಬ್ದುಲ್ ಜಬ್ಬಾರ್, ಶಾಸಕಿ ಕನೀಝ್ ಫಾತಿಮಾ, ಮೌಲಾನ ಲುತ್ಫುಲ್ಲಾ ಮಝ್ಹರ್ ರಶಾದಿ, ಮೌಲಾನ ಮಖ್ಸೂದ್ ಇಮ್ರಾನ್ ರಶಾದಿ, ಮೌಲಾನ ಮುಝಮ್ಮಿಲ್, ಮೌಲಾನ ಶಾಯರ್ ಅಲಿ, ರಾಜ್ಯ ಹಜ್ ಸಮಿತಿಯ ಕಾರ್ಯನಿರ್ವಾಹಕ ಅಧಿಕಾರಿ ಸರ್ಫರಾಝ್‌ ಖಾನ್, ನೋಡಲ್ ಅಧಿಕಾರಿ ಸೈಯ್ಯದ್ ಏಜಾಝ್ ಅಹ್ಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ಧಿಗಳನ್ನು ವೀಕ್ಷಿಸಿ https://youtu.be/ujlXO-HUsaM

ನಾನು ಆಪರೇಷನ್ ಕಮಲಕ್ಕೆ ಒಳಗಾಗಿಲ್ಲ : ಶಾಸಕ ಭೀಮಾನಾಯ್ಕ್

ಜನಜಾಗೃತಿ ಸುದ್ಧಿವಾಹಿನಿ


     16 jan 2019


ಬೆಂಗಳೂರು: ಆಪರೇಷನ್ ಕಮಲಕ್ಕೆ ನಾನು ಒಳಗಾಗಿಲ್ಲ. ಕಾಂಗ್ರೆಸ್ ಬಿಡುವುದಿಲ್ಲ. ಬಿಜೆಪಿ ಸೇರುವುದಿಲ್ಲ ಎಂದು ಶಾಸಕ ಭೀಮಾನಾಯ್ಕ್ ಸ್ಪಷ್ಟಪಡಿಸಿದ್ದಾರೆ. ಕುಮಾರಕೃಪಾ ಅತಿಥಿ ಗೃಹಕ್ಕೆ ಆಗಮಿಸಿದ ಅವರು, ವೇಣುಗೋಪಾಲ್ ಅವರನ್ನು ಭೇಟಿ ಮಾಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೈತ್ರಿ ಸರ್ಕಾರ ರಚನೆ ಆರಂಭದಲ್ಲಿ ಬಿಜೆಪಿಯವರು ನನ್ನನ್ನು ಸಂಪರ್ಕಿಸಿದ್ದರು. ಆದರೆ ಇತ್ತೀಚೆಗೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ. ನಾನು ಬಿಜೆಪಿಗೆ ಹೋಗುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದೆ ಎಂಬುದು ಸುಳ್ಳುಮಾಹಿತಿ. ಶುಕ್ರವಾರ ಬೆಂಗಳೂರಿನಲ್ಲಿದ್ದೆ, ಶನಿವಾರ ಜಿಂದಲ್ ಫ್ಲೈಟ್ ಹತ್ತಿ ಕ್ಷೇತ್ರಕ್ಕೆಹೋದೆ. ಸೋಮವಾರ ಗೋವಾದಲ್ಲಿದ್ದೆ. ಗೋವಾಕ್ಕೆ ಹೋದಾಗ ಎರಡು ದಿನ ಮೊಬೈಲ್ ಸ್ವಿಚ್ ಆಫ್ ಮಾಡಿದ್ದೆ.

ಆದರೆ ಬೇರೆ ನಂಬರ್‍ಗಳಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಮೀರ್ ಅಹಮ್ಮದ್ ಖಾನ್ ಸೇರಿದಂತೆ ಹಲವಾರು ಮಂದಿ ನಾಯಕರ ಜೊತೆ ನಾನು ನಿರಂತರ ಸಂಪರ್ಕದಲ್ಲಿದ್ದೆ. ನನ್ನ ಕ್ಷೇತ್ರದ ಮುಖಂಡರ ಜೊತೆಯೂ ಸಂಪರ್ಕದಲ್ಲಿದ್ದೆ. ನಾನು ಎಲ್ಲಿಯೂ ಹೋಗಿಲ್ಲ. ಮೊಬೈಲ್ ಸ್ವಿಚ್‍ಆಫ್ ಮಾಡಿದ್ದು ಒತ್ತಡದ ತಂತ್ರ ಅಲ್ಲ.

ಸಚಿವ ಸ್ಥಾನ ಸಿಗದೆ ಇರುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಪಿ.ಟಿ.ಪರಮೇಶ್ವರ್‍ನಾಯಕ್ ಸೇರಿದಂತೆ ಯಾರಿಗೆ ಸಚಿವ ಸ್ಥಾನ ಕೊಟ್ಟರೂ ಅದನ್ನು ಸ್ವಾಗತಿಸುವುದಾಗಿ ಈ ಮೊದಲೇ ಹೇಳಿದ್ದೆ. ನಮ್ಮ ಬೇಸರಗಳಿಗೂ ಈಗಿನ ರಾಜಕೀಯಕ್ಕೂ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ನಮ್ಮ ಸುದ್ಧಿ ಗಳನ್ನು ವೀಕ್ಷಿಸಲು ಲಿಂಕ್ ಬಳಸಿ https://youtu.be/ujlXO-HUsaM

ಆಪರೇಷನ್ ಕಮಲ ಠುಸ್..!❓

ಜನಜಾಗೃತಿ ಸುದ್ಧಿವಾಹಿನಿ 


     16 jan 2019


ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದ್ದ ಬಿಜೆಪಿಯ ಆಪರೇಷನ್ ಕಮಲ ಬಹುತೇಕ ವಿಫಲವಾಗುವ ಹಂತ ತಲುಪಿದೆ.


ಯಾವ ಶಾಸಕರನ್ನು ನೆಚ್ಚಿಕೊಂಡು ದೋಸ್ತಿ ಸರ್ಕಾರ ಕೆಡವಲು ಬಿಜೆಪಿ ಸಂಚು ರೂಪಿಸಿತ್ತೋ ಅದೇ ಶಾಸಕರು ತಮ್ಮ ತಮ್ಮ ಪಕ್ಷಗಳತ್ತ ಮುಖ ಮಾಡಿರುವುದರಿಂದ ಆಪರೇಷನ್ ಕಮಲ ಠುಸ್ಸಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.


ಕಳೆದೆರಡು ದಿನಗಳಿಂದ ಕಾಂಗ್ರೆಸ್‍ಗೆ ಕೈ ಕೊಟ್ಟು ನಿಗೂಢ ಸ್ಥಳದಲ್ಲಿದ್ದ ಬಳ್ಳಾರಿಯ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯಕ್, ಕಂಪ್ಲಿಯ ಜೆ.ಗಣೇಶ್, ಅಮರೇಗೌಡ ಬಯ್ಯಾಪುರ ದಿಢೀರನೇ ಬೆಂಗಳೂರಿಗೆ ಆಗಮಿಸಿರುವುದರಿಂದ ಆಪರೇಷನ್ ಕಮಲ ಬಿಜೆಪಿಗೆ ತಿರುಗುಬಾಣವಾಗಿದೆ.


ಏಕೆಂದರೆ ಇದರಲ್ಲಿ ಭೀಮಾನಾಯಕ್ ಮತ್ತು ಜೆ.ಗಣೇಶ್ ಬಹುತೇಕ ಆಪರೇಷನ್ ಕಮಲಕ್ಕೆ ಒಳಗಾಗಿದ್ದರು. ಈ ಇಬ್ಬರನ್ನು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿರುವ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಮೂಲಕವೇ ಬಿಜೆಪಿ ಸೆಳೆಯುವ ಪ್ರಯತ್ನ ಮಾಡಿತ್ತು.


ಇದಕ್ಕೆ ಪುಷ್ಟಿ ನೀಡುವಂತೆ ಈ ಇಬ್ಬರು ಶಾಸಕರ ದೂರವಾಣಿ ಕರೆಗಳು ಇದ್ದಕ್ಕಿದ್ದಂತೆ ಕಡಿತಗೊಂಡು ಹಾಗೂ ಯಾರ ಸಂಪರ್ಕಕ್ಕೂ ಸಿಗದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು.


ಆದರೆ ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಶಾಸಕರನ್ನು ಮನವೊಲಿಸುವಲ್ಲಿ ಬಹುತೇಕ ಯಶಸ್ವಿಯಾಗಿದ್ದಾರೆ.


ಸದ್ಯಕ್ಕೆ ಮುಂಬೈನಲ್ಲಿ ಇಬ್ಬರು ಪಕ್ಷೇತರ ಶಾಸಕರು ಸೇರಿದಂತೆ ಆರು ಶಾಸಕರು ವಾಸ್ತವ್ಯ ಹೂಡಿದ್ದಾರೆ. ಬೆಳಗಾವಿಯ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಚಿಂಚೋಳಿಯ ಡಾ.ಉಮೇಶ್ ಜಾಧವ್, ಬಳ್ಳಾರಿಯ ಬಿ.ನಾಗೇಂದ್ರ, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್ ಇದ್ದಾರೆಂದು ಹೇಳಲಾಗುತ್ತಿದೆ.


ಇದರಲ್ಲಿ ಪ್ರತಾಪ್ ಗೌಡ ಪಾಟೀಲ್ ನಡೆ ಈಗಲೂ ನಿಗೂಢವಾಗಿದ್ದು, ರಮೇಶ್ ಜಾರಕಿಹೊಳಿ ತಮ್ಮ ರಾಜಕೀಯ ನಿರ್ಧಾರ ಕೈಗೊಳ್ಳಲಿದ್ದೇನೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ.


ಸದ್ಯಕ್ಕಂತೂ ಆಪರೇಷನ್ ಕಮಲ ಮತ್ತೆ ಹಿನ್ನೆಡೆಯಾಗುವ ಲಕ್ಷಣಗಳು ಸ್ಪಷ್ಟವಾಗಿದೆ. ನಿನ್ನೆಯಿಂದಲೂ ಶಾಸಕರೆಲ್ಲರಿಗೂ ಸಿಹಿ ಸುದ್ದಿ ಕೊಡುತ್ತೇನೆಂದು ಬಿ.ಎಸ್.ಯಡಿಯೂರಪ್ಪ ಹೇಳುತ್ತಿದ್ದರಾದರೂ ಈವರೆಗೂ ಅದನ್ನು ಬಹಿರಂಗಪಡಿಸುತ್ತಿಲ್ಲ.

ಮುಂಬೈ ಹಾಗೂ ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಬಿಎಸ್‍ವೈ ಗಮನಿಸುತ್ತಿದ್ದಾರೆ. ಶಾಸಕರಿಗೂ ಕೂಡ ಗುಟ್ಟು ರಟ್ಟು ಮಾಡುತ್ತಿಲ್ಲ. ಹೀಗಾಗಿ ಬಿಜೆಪಿಯಲ್ಲಿ ಏನು ನಡೆಯುತ್ತಿದೆ ಎಂಬುದು ಯಾರೊಬ್ಬರಿಗೂ ತಿಳಿಯದಿರುವುದು ಗೊಂದಲಗಳನ್ನು ಸೃಷ್ಟಿಸಿದೆ.

ಯಾವ ಅತೃಪ್ತ ಶಾಸಕರ ಮೇಲೆ ಕಮಲ ಪಡೆ ಕಣ್ಣಿಟ್ಟಿತ್ತೋ ಈಗಾಗಲೇ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್-ಜೆಡಿಎಸ್ ಮುಖಂಡರು ಯಶಸ್ವಿಯಾಗಿರುವುದರಿಂದ ಬಿಜೆಪಿಯ ಆಪರೇಷನ್ ಉಲ್ಟಾ ಹೊಡೆದಿದೆ ಎಂದೇ ವಿಶ್ಲೇಷಿಸಲಾಗಿದೆ.

ನಮ್ಮ ಸುದ್ಧಿ ವೀಕ್ಷಿಸಿ https://youtu.be/ujlXO-HUsaM

Tuesday, January 15, 2019

ಅಸಮಾಧಾನ ಇರೋದು ನಿಜ. ಹಾಗಂತ ಪಕ್ಷ ಬಿಡಲ್ಲ- ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್

ಜನಜಾಗೃತಿ ಸುದ್ಧಿವಾಹಿನಿ 

     16 jan 2019


ಬೆಂಗಳೂರು: ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಅವರನ್ನುಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಡಾ.ಅಜಯ್ ಸಿಂಗ್'ನನಗೆ ಅಸಮಾಧಾನ ಇರೋದು ನಿಜ. ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ' ಎಂದು ಖಡಕ್ ಆಗಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ' ನಾನು ಕುಟುಂಬದವರ ಜೊತೆ ಪ್ರವಾಸಕ್ಕೆ ಹೋಗಿದ್ದೆ. ಹೀಗಾಗಿ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಇಂದು ವೇಣುಗೋಪಾಲ್ ರನ್ನು ಭೇಟಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. 

'ಮಂತ್ರಿ ಮಾಡಲಿ ಬಿಡಲಿ ಆದ್ರೆ ಪಕ್ಷ ಮಾತ್ರ ತೊರೆಯಲ್ಲ. 1977ರಲ್ಲಿ ಕಾಂಗ್ರೆಸ್ ಇಬ್ಭಾಗವಾದಾಗ ತಮ್ಮ ತಂದೆ ಪಕ್ಷ ಬಿಟ್ಟಿಲ್ಲ.7 ಜನ ಶಾಸಕರಿದ್ದರೂ ಕೂಡ ಕಾಂಗ್ರೆಸ್ ಕಟ್ಟಿದ್ದಾರೆ. ನಮ್ಮ ತಂದೆಯಿಂದ ಹಿಡಿದು ನಾವು ಕಾಂಗ್ರೆಸ್ ಕಟ್ಟಿದ್ದೇವೆ. ನಮ್ಮನ್ನು ಕಡೆಗಣಿಸಿರೋದು ನಿಜ. ಹಾಗಂತ ಪಕ್ಷ ಬಿಡಲ್ಲ' ಎಂದು ಅವರು ತಿಳಿಸಿದ್ದಾರೆ. 

ನಮ್ಮ ಸುದ್ಧಿ ಗಳನ್ನ ವೀಕ್ಷಿಸಲು ಲಿಂಕ್ ಮೂಲಕ ವೀಕ್ಷಿಸಿ https://youtu.be/ujlXO-HUsaM

ಕಮಲ 2ನೇ ಹಂತ: ಎಷ್ಟು ಮಂದಿ ಅತೃಪ್ತ ಶಾಸಕರಿಂದ ರಾಜೀನಾಮೆ?


ಜನಜಾಗೃತಿ ಸುದ್ಧಿವಾಹಿನಿ 

     16 jan 2019


ಬೆಂಗಳೂರು: ಕಾಂಗ್ರೆಸ್ -ಜೆಡಿಎಸ್ ನೇತೃತ್ವದ ಕರ್ನಾಟಕ ಸರ್ಕಾರವನ್ನು ಹೇಗಾದರೂ ಉರುಳಿಸಬೇಕು ಎಂಬ ಯತ್ನವನ್ನು ಬಿಜೆಪಿ ಮುಂದುವರೆಸಿದೆ. ಕುಮಾರಸ್ವಾಮಿ ನೇತೃತ್ವದ ಬಹುಮತ ಕಳೆದುಕೊಳ್ಳಲಿದೆಯೇ? ಎಂಬ ಪ್ರಶ್ನೆಗೆ ಸದ್ಯಕ್ಕೆ ಉತ್ತರ ಸಾಧ್ಯವಿಲ್ಲ. ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿರುವುದಾಗಿ ಮುಂಬೈನಲ್ಲಿ ಘೋಷಣೆ ಮಾಡಿದ್ದಾರೆ.


ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಎಚ್.ನಾಗೇಶ್ ಬೆಂಬಲ ವಾಪಸ್ ಪಡೆಯುವಂತೆ ಮಾಡುವ ಮೂಲಕ ಬಿಜೆಪಿ ಪ್ರಾಥಮಿಕ ಯಶಸ್ಸು ಕಂಡಿದೆ.


ಇದು ಆಪರೇಷನ್ ಕಮಲದ ಮೊದಲ ಹಂತ ಎನ್ನಲಾಗಿದ್ದು, ಎರಡನೇ ಹಂತದಲ್ಲಿ ಕಾಂಗ್ರೆಸ್‌ನ 6 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ನಿನ್ನೆ ತನಕ ಹರಿದಾಡುತ್ತಿತ್ತು.


ಆದರೆ, ಈಗ ಈ ಪಟ್ಟಿಗೆ ಮತ್ತೊಬ್ಬ ಶಾಸಕ ಸೇರ್ಪಡೆಯಾಗಿದ್ದು, 7 ಮಂದಿ ಶಾಸಕರು ಬಿಜೆಪಿಯತ್ತ ವಾಲಿದ್ದಾರೆ ಎಂಬ ಮಾಹಿತಿಯಿದೆ.


ಆಪರೇಷನ್ ಕಮಲದ 2ನೇ ಹಂತವಾಗಿ ಕಾಂಗ್ರೆಸ್‌ನ ಏಳು ಶಾಸಕರು ರಾಜೀನಾಮೆ ನೀಡಲಿದ್ದಾರೆ. ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಅವರಿಗೂ ಗಾಳ ಹಾಕಲಾಗಿದೆಯಾದರೂ, ಪರಂಪರಾಗತವಾಗಿ ಕಟ್ಟಾ ಕಾಂಗ್ರೆಸ್ಸಿಗರಾದ ನಾವು, ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.


ಗುರುವಾರದಂದು ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ, ರಾಜೀನಾಮೆ ನೀಡಿ, ಬಿಜೆಪಿ ಬೆಂಬಲಿಸುತ್ತೇವೆ ಎಂದು ಘೋಷಣೆ ಮಾಡುವ ನಿರೀಕ್ಷೆ ಇದೆ.


ಎಷ್ಟು ಶಾಸಕರಿಂದ ರಾಜೀನಾಮೆ ಸಾಧ್ಯತೆ? 

ರಮೇಶ್ ಜಾರಕಿಹೊಳಿಗೆ ಸೂಕ್ತ ಸ್ಥಾನಮಾನ


ಈ ನಡುವೆ ಬೆಂಗಳೂರಿನಲ್ಲಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿಗೆ ಬರುವಂತೆ ಸೂಚಿಸಿದ್ದಾರೆ. ಕಾಂಗ್ರೆಸ್ ಅತೃಪ್ತ ಶಾಸಕರ ನಾಯಕತ್ವವನ್ನು ರಮೇಶ್ ಜಾರಕೊಹೊಳಿ ಅವರು ವಹಿಸಿಕೊಂಡಿರುವ ಸಾಧ್ಯತೆ ಇದೆ. ರಮೇಶ್ ಅವರಿಗೆ ಬೇಕಾದ ಸ್ಥಾನ ಮಾನವನ್ನು ನೀಡಲು ಕಾಂಗ್ರೆಸ್ ಸಿದ್ಧವಿದೆ ಎಂಬ ಸಂದೇಶ ನೀಡಲಾಗಿದೆ.


ಎಷ್ಟು ಶಾಸಕರಿಂದ ರಾಜೀನಾಮೆ ಸಾಧ್ಯತೆ? 

ಕುಮಾರಸ್ವಾಮಿ ಅವರಿಂದ ತೀಕ್ಷ್ಣ ಪ್ರತಿಕ್ರಿಯೆ


ರಾಜ್ಯ ರಾಜಕೀಯದ ಬೆಳವಣಿಗೆಯ ಕ್ಷಣಕ್ಷಣದ ಮಾಹಿತಿ ಸಿಎಂ ಆಗಿ ನನಗೆ ಸಿಗುತ್ತಲೇ ಇದೆ. ಯಾವ ಶಾಸಕರನ್ನು ರೆಸಾರ್ಟಿಗೆ ಶಿಫ್ಟ್ ಮಾಡುತ್ತಿಲ್ಲ. ಯಡಿಯೂರಪ್ಪ ಅವರು ಕುದುರೆ ವ್ಯಾಪಾರಕ್ಕಿಳಿದಿದ್ದಾರೆ. ನನಗೆ ಯಾವ ಟೆನ್ಶನ್ ಇಲ್ಲ, ಏನೇನೋ ಸುದ್ದಿ ಪ್ರಸಾರ ಮಾಡಿ, ನೀವು ಫೂಲ್ ಆಗುವುದಷ್ಟೇ ಅಲ್ಲದೆ, ಜನರನ್ನು ಫೂಲ್ ಮಾಡಬೇಡಿ ಎಂದು ಮಾಧ್ಯಮದವರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಲಹೆ ನೀಡಿದರು.


ಎಷ್ಟು ಶಾಸಕರಿಂದ ರಾಜೀನಾಮೆ ಸಾಧ್ಯತೆ? 

ರಾಜೀನಾಮೆ ನೀಡಲು ಸಿದ್ಧರಿರುವ ಶಾಸಕರು


 ರಮೇಶ್ ಜಾರಕಿಹೊಳಿ -ಗೋಕಾಕ್ 

 ನಾಗೇಂದ್ರ - ಬಳ್ಳಾರಿ ಗ್ರಾಮಾಂತರ 

 ಉಮೇಶ್ ಜಾಧವ್ - ಚಿಂಚೋಳಿ 

 ಮಹೇಶ್ ಕುಮಟಳ್ಳಿ - ಅಥಣಿ 

 ಭೀಮಾ ನಾಯ್ಕ್ - ಹಗರಿಬೊಮ್ಮನಳ್ಳಿ 

 ಜೆ.ಎನ್.ಗಣೇಶ್ - ಕಂಪ್ಲಿ

ಪ್ರತಾಪ್ ಗೌಡ ಪಾಟೀಲ್- ಮಸ್ಕಿ


ಎಷ್ಟು ಶಾಸಕರಿಂದ ರಾಜೀನಾಮೆ ಸಾಧ್ಯತೆ? 

ಬಿಜೆಪಿಯ ಮುಂದಿನ ನಡೆಯೇನು?

ಆಪರೇಷನ್ ಕಮಲ ಮುಂದುವರೆಸುವುದು

 ಸದನದಲ್ಲಿ ಸಂಖ್ಯಾಬಲ 211ಕ್ಕೆ ಇಳಿಸುವುದು

 ಸರಳ ಬಹುಮತಕ್ಕೆ ಬೇಕಾದ 106 ಗಡಿ ದಾಟುವುದು

 ಕನಿಷ್ಟ 14 ಶಾಸಕರನ್ನು ಸೆಳೆದುಕೊಳ್ಳುವುದು(ಬಿಜೆಪಿಗೆ ಕನಿಷ್ಟ 16 ಶಾಸಕರ ಅಗತ್ಯವಿದೆ)

ಗುರುಗ್ರಾಮ, ಮುಂಬೈನಲ್ಲಿರುವ ಶಾಸಕರನ್ನು ಕಾಯ್ದುಕೊಳ್ಳುವುದು.

ನಮ್ಮ ಚಾನಲ್ ಗೆ ಭೇಟಿ ನೀಡಿ ಸುದ್ಧಿ ಗಳನ್ನ ವೀಕ್ಷಿಸಿ https://youtu.be/ujlXO-HUsaM

50 ಕೋಟಿ ರೂ.ಗೆ ಮತದಾರರನ್ನು ಮಾರಿದ ಶಾಸಕ.!❓

ಜನಜಾಗೃತಿ ಸುದ್ಧಿವಾಹಿನಿ 

     16 jan 2019


ಕಲಬುರಗಿ: ಆಪರೇಷನ್ ಕಮಲಕ್ಕೆ ತುತ್ತಾಗಿ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಉಮೇಶ್ ಜಾಧವ್ ಬಿಜೆಪಿ ಬಾಗಿಲಲ್ಲಿ ನಿಂತಿದ್ದಾರೆ ಎಂದು ಹೇಳಲಾಗಿದ್ದು, ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಉಮೇಶ್ ಜಾಧವ್, ಬಿಜೆಪಿ ಸೇರಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಈ ಬೆಳವಣಿಗೆಗಳ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

50 ಕೋಟಿ ರೂ.ಗೆ ಚಿಂಚೋಳಿ ಕ್ಷೇತ್ರದ ಮತದಾರರನ್ನು ಶಾಸಕ ಉಮೇಶ್ ಜಾಧವ್ ಮಾರಿದ್ದಾರೆ ಎಂದು ವಾಟ್ಸಾಪ್ ಗ್ರೂಪ್ ಗಳಲ್ಲಿ ಸಂದೇಶ ಹರಿಯಬಿಡಲಾಗಿದೆ.

ಉಮೇಶ್ ಜಾಧವ್ ಅವರ ಫೋಟೋ ಮೇಲೆ ಇಂಗ್ಲಿಷ್ ನಲ್ಲಿ ಕ್ಷೇತ್ರದ ಮತದಾರರನ್ನು 50 ಕೋಟಿ ರೂ.ಗೆ ಮಾರಿದ್ದಾರೆ ಎಂದು ಬರೆಯಲಾಗಿದ್ದು, ಕಾಂಗ್ರೆಸ್ ಬೆಂಬಲಿಗರ ವಾಟ್ಸಾಪ್ ಗ್ರೂಪ್ ಗಳಲ್ಲಿ ಈ ಫೋಟೋ ವೈರಲ್ ಆಗಿದೆ.

ನಮ್ಮ ಸುದ್ಧಿಗಳನ್ನು ವೀಕ್ಷಿಸಲು ಕ್ಲಿಕ್ ಮಾಡಿ https://youtu.be/ujlXO-HUsaM

ಆಪರೇಷನ್ ಕಮಲ ಸಕ್ಸಸ್ ಆದ್ರೂ, ಕಾದಿದೆ ಶಾಕಿಂಗ್ ನ್ಯೂಸ್ ! ಬಿಜೆಪಿಗೆ ಸಿಕ್ಕಿದೆ ಈ ಎಚ್ಚರಿಕೆ

ಜನಜಾಗೃತಿ ಸುದ್ಧಿವಾಹಿನಿ 

     16 jan 2019


ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರವನ್ನು ಉರುಳಿಸಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎನ್ನಲಾಗಿದ್ದು, ಆದರೆ ಒಂದು ವರ್ಗ ಮಾತ್ರ ಆಪರೇಷನ್ ಕಮಲಕ್ಕೆ ಮುಂದಾದ ಬಿಜೆಪಿ ನಾಯಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆಯಂತೆ.


ಬಿಜೆಪಿಯ ಆಪರೇಷನ್ ಕಮಲ ಸಕ್ಸಸ್ ಆದ್ರೂ ಬಿಜೆಪಿಗೆ ಸಂಕಷ್ಟ ಎದುರಾಗಲಿದೆ ಎಂದು ಒಂದು ವರ್ಗ ಬಿಜೆಪಿ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ ರವಾನಿಸಿದೆ. ಏಕೆಂದರೆ 2018 ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಹೆಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಅವರನ್ನು ಟಾರ್ಗೆಟ್ ಮಾಡಿದ್ದರು. ಚುನಾವಣೆಯಲ್ಲಿ ಒಕ್ಕಲಿಗರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದರು ಎಂದು ಹೇಳಲಾಗುತ್ತೆ, ಹಾಗಾಗಿ ಕಾಂಗ್ರೆಸ್ ಸೋಲಲು ಕಾರಣ ಎಂದು ಹೇಳಲಾಗುತ್ತಿದೆ.


ಸಿದ್ದರಾಮಯ್ಯ ಅವರು ಹೆಚ್.ಡಿಡಿ-ಹೆಚ್.ಡಿಕೆ ಅವರನ್ನು ಟಾರ್ಗೆಟ್ ಮಾಡಿದ್ದರಿಂದಲೇ ಒಕ್ಕಲಿಗರ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಕಾಂಗ್ರೆಸ್ ಸೋಲುನುಭವಿಸಿತ್ತು. ಈಗ ಬಿಜೆಪಿ ಸರ್ಕಾರವನ್ನು ಉರುಳಿಸಿದರೆ ಒಕ್ಕಲಿಗರ ಕೋಪ ಬಿಜೆಪಿ ಕಡೆಗೆ ತಿರುಗಬಹುದು ಎನ್ನಲಾಗಿದ್ದು, ಈ ಕುರಿತು ಒಂದು ವರ್ಗ ಬಿಜೆಪಿ ಹೈಕಮಾಂಡ್ ಗೆ ಎಚ್ಚರಿಕೆ ಸಂದೇಶ ರವಾನಿಸಿದೆ ಎನ್ನಲಾಗಿದೆ.

ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು ಭಾಗಗಳಲ್ಲಿ ಒಕ್ಕಲಿಗರ ಪ್ರಾಬಲ್ಯವಿದೆ. ಬಿಜೆಪಿ ಸರ್ಕಾರ ಉರುಳಿಸಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಐದರಿಂದ ಆರು ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಬಹುದು ಎನ್ನಲಾಗುತ್ತಿದೆ.

ನಮ್ಮ ಸುದ್ಧಿ ಗಳನ್ನ ನೋಡಲು ಲಿಂಕ್ ಮೇಲೆ ಕ್ಲಿಕ್ ಮಾಡಿ ತಪ್ಪದೇ ವೀಕ್ಷಿಸಿ https://youtu.be/ujlXO-HUsaM

ಶಬರಿಮಲೆ ವಿವಾದ: ಮೌನ ಮುರಿದ ಪ್ರಧಾನಿ ಮೋದಿ ಹೇಳಿದ್ದೇನು?

ಜನಜಾಗೃತಿ ಸುದ್ಧಿವಾಹಿನಿ


     16 jan 2019

ಕೊಲ್ಲಂ: ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಅವಕಾಶ ನೀಡುವ ಐತಿಹಾಸಿಕ ತೀರ್ಪನ್ನು ಸುಪ್ರೀಂಕೋರ್ಟ್ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಶಬರಿಮಲೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ.

ಕೊಲ್ಲಂನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಮೋದಿ, "ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರದ ನಿಲುವು ನಾಚಿಕೆಗೇಡು. ಈ ವಿವಾದ ಕುರಿತ ಎಲ್‌ಡಿಎಫ್ ನಿರ್ಧಾರ ಯಾವುದೇ ಪಕ್ಷ ಅಥವಾ ಸರ್ಕಾರದ ಅತ್ಯಂತ ನಾಚಿಕೆಗೇಡಿನ ನಡವಳಿಕೆ ಎಂದು ಇತಿಹಾಸದಲ್ಲಿ ದಾಖಲಿಸಲ್ಪಡುತ್ತದೆ" ಎಂದು ಹೇಳಿದರು.

ತ್ರಿಪುರಾದಲ್ಲಿ ಸಂಭವಿಸಿದ ರಾಜಕೀಯ ಬದಲಾವಣೆಯ ಸೂಚನೆ ಕೇರಳದಲ್ಲೂ ಕಂಡುಬರುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎರಡು ಧ್ರುವಗಳ ರಾಜಕೀಯ ಅಧಿಪತ್ಯ ಮುಕ್ತಾಯವಾಗಲಿದ್ದು, ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿಕೂಟ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.


ಎಲ್‌ಡಿಎಫ್ ಹಾಗೂ ಯುಡಿಎಫ್ ಒಂದೇ ನಾಣ್ಯದ ಎರಡು ಮುಖಗಳು ಎಂದು ಮೋದಿ ಟೀಕಿಸಿದರು.

ಇದಕ್ಕೂ ಮುನ್ನ ಮೋದಿ ತಿರುವನಂತಪುರದಲ್ಲಿ 13 ಕಿಲೋಮೀಟರ್ ಉದ್ದದ ಕೊಲ್ಲಂ ಬೈಪಾಸ್ ಉದ್ಘಾಟಿಸಿದರು. ಕಾಂಗ್ರೆಸ್ ಮೇಲೂ ವಾಗ್ದಾಳಿ ನಡೆಸಿದ ಅವರು, "ಯುಡಿಎಫ್ ಉತ್ತಮವೇನೂ ಅಲ್ಲ. ಕಾಂಗ್ರೆಸ್ ಪಕ್ಷ ಬಹು ನಿಲುವು ಹೊಂದಿದೆ. ಸಂಸತ್ತಿನಲ್ಲಿ ಒಂದು ಹೇಳುತ್ತಾರೆ; ಪಟ್ಟಣಂತಿಟ್ಟದಲ್ಲಿ ಮತ್ತೊಂದು ಹೇಳುತ್ತಾರೆ. ಸೋಮವಾರ ಒಂದು ಹೇಳಿದರೆ ಮರುದಿನ ಇನ್ನೊಂದು ಹೇಳುತ್ತಾರೆ" ಎಂದು ಟೀಕಿಸಿದರು.ಮೋದಿ ಹೇಳಿಕೆಯನ್ನು ಸಿಪಿಎಂ ಕಟುವಾಗಿ ಟೀಕಿಸಿದ್ದು, ಸುಪ್ರೀಂಕೋರ್ಟ್ ತೀರ್ಪು ಅನುಷ್ಠಾನಗೊಳಿಸಿದ್ದಕ್ಕೆ ದೇಶದ ಪ್ರಧಾನಿ ಹೀಗೆ ಹೇಳಿರುವುದು ನಿಜಕ್ಕೂ ನಾಚಿಕೆಗೇಡು ಎಂದು ತಿರುಗೇಟು ನೀಡಿದೆ.

ನಮ್ಮ ಸುದ್ಧಿ ಗಳನ್ನ ವೀಕ್ಷಿಸಲು ಕ್ಲಿಕ್ ಮಾಡಿ https://youtu.be/ujlXO-HUsaM

ದೋಸ್ತಿ ಸರ್ಕಾರಕ್ಕೆ ಮತ್ತೊಂದು ಬಿಗ್ ಶಾಕ್ : ಮತ್ತೊಬ್ಬ `ಕೈ' ಶಾಸಕ ಮುಂಬೈಗೆ ಶಿಫ್ಟ್!❓

ಜನಜಾಗೃತಿ ಸುದ್ಧಿವಾಹಿನಿ


     16 jan 2019


ಬೆಂಗಳೂರು: ಮಾಜಿ ಅರಣ್ಯ ಸಚಿವ, ಕೆಪಿಜೆಪಿ ಪಕ್ಷದ ನಾಯಕ ಆರ್. ಶಂಕರ್ ಮತ್ತು ಮುಳಬಾಗಿಲು ಕ್ಷೇತ್ರದ ಶಾಸಕ ಹೆಚ್. ನಾಗೇಶ್ ಅವರು ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು, ಇದೀಗ ಕಾಂಗ್ರೆಸ್ ನ ಮತ್ತೊಬ್ಬ ಅತೃಪ್ತ ಶಾಸಕರು ಮುಂಬೈ ಶಿಫ್ಟ್ ಆಗಿದ್ದಾರೆ ಎನ್ನಲಾಗುತ್ತಿದೆ.

ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಮಂಗಳವಾರ ಸಂಜೆ ಮುಂಬಯಗೆ ತೆರಳಿದ್ದಾರೆ. ಶಾಸಕರು ಹಾಗೂ ಪಕ್ಷದ ನಾಯಕರ ನಡುವೆ ಭಿನ್ನಮತ ಕಾಣಿಸಿಕೊಂಡಿದ್ದು, ಈಗಾಗಲೇ ಮುಂಬೈನಖಾಸಗಿ ಹೋಟೆಲ್ ನಲ್ಲಿರುವ ಆರು ಜನ ಶಾಸಕರನ್ನು ಪ್ರತಾಪ್ ಗೌಡ ಸೇರಿದ್ದಾರೆ ಎನ್ನಲಾಗಿದೆ.

ಮೊದಲ ಹಂತದ ಆಪರೇಷನ್ ಕಮಲದಲ್ಲಿ ಯಶಸ್ವಿಯಾದ ಬಿಜೆಪಿ ಇಂದು ಎರಡನೇ ಹಂತದ ಆಪರೇಷನ್ ಕಮಲ ನಡೆಸಲು ಮುಂದಾಗಲಿದ್ದಾರೆ ಎನ್ನಲಾಗುತ್ತಿದ್ದು, ಕಾಂಗ್ರೆಸ್ ನ 7 ಶಾಸಕರಿಂದ ರಾಜೀನಾಮೆ ಕೊಡಿಸಲು ಬಿಜೆಪಿ ಬಿಗ್ ಪ್ಲಾನ್ ರೂಪಿಸುತ್ತಿದೆ ಎಂದು ಹೇಳಲಾಗುತ್ತಿದೆ.

ನಮ್ಮ ಸುದ್ಧಿ ಗಳನ್ನ ವೀಕ್ಷಿಸಲು ಕ್ಲಿಕ್ ಮಾಡಿ https://youtu.be/ujlXO-HUsaM

ಅತೃಪ್ತ ಶಾಸಕರ ರಾಜೀನಾಮೆ ತಡೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್‌

ಜನಜಾಗೃತಿ ಸುದ್ಧಿವಾಹಿನಿ 


     15 jan 2019


ಬೆಂಗಳೂರು: ಕಾಂಗ್ರೆಸ್ ಕೈತಪ್ಪಿ ಹೋಗಿರುವ ಐದು ಜನ ಶಾಸಕರು ಯಾವ ಸಮಯದಲ್ಲಾದರೂ ರಾಜೀನಾಮೆ ಕೊಡಬಹುದು. ಆದರೆ ಅವರ ರಾಜೀನಾಮೆ ತಡೆಯಲು ಕಾಂಗ್ರೆಸ್ ಒಂದು ಮಾಸ್ಟರ್ ಪ್ಲಾನ್ ಸಿದ್ದಮಾಡಿಕೊಂಡಿದೆ.


ಕಾಂಗ್ರೆಸ್‌ನ ಐದು ಶಾಸಕರು ಈಗಾಗಲೇ ಕರ್ನಾಟಕದ ಗಡಿ ದಾಟಿ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅವರು ಇಂದು ಅಥವಾ ನಾಳೆ ಸ್ಪೀಕರ್ ರಮೇಶ್‌ ಕುಮಾರ್‌ಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಆದರೆ ಅವರು ರಾಜೀನಾಮೆ ನೀಡದಂತೆ ತಡೆಯಲು ಕಾಂಗ್ರೆಸ್‌ ತಂತ್ರವೊಂದನ್ನು ಹೂಡಲಿದೆ.


ಶಾಸಕರು ವಿಧಾನಸಭೆ ಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಲು ಅವಕಾಶವೇ ನೀಡದಂತೆ ಮಾಡಲು, ಸ್ಪೀಕರ್ ರಮೇಶ್‌ ಕುಮಾರ್ ಅವರನ್ನು ಪ್ರವಾಸಕ್ಕೆ ಕಳಿಸಿಬಿಡುವ ಆಲೋಚನೆಯೂ ಕಾಂಗ್ರೆಸ್‌ ಮುಖಂಡರು ಮಾಡಿದ್ದಾರೆ.


ರಮೇಶ್ ಕುಮಾರ್ ಅವರನ್ನು ಪ್ರವಾಸಕ್ಕೆ ಕಳುಹಿಸಿದರೆ, ಅವರು ಮರಳುವವರೆಗೆ ತಮ್ಮ ರಾಜೀನಾಮೆ ಅಂಗೀಕಾರಗೊಳ್ಳುವುದಿಲ್ಲ.


ಇದು ಕಾಂಗ್ರೆಸ್‌ಗೆ ಸಮಯವಾಕಾಶ ದೊರಕಿಸಿಕೊಡುತ್ತದೆ. ಆ ಸಮಯದಲ್ಲಿ ಅತೃಪ್ತ ಶಾಸಕರ ಮನವೊಲಿಸಲು ಅಥವಾ ಬಿಜೆಪಿಯ ಶಾಸಕರನ್ನು ತಮ್ಮತ್ತ ಸೆಳೆದುಕೊಳ್ಳುವ ಯತ್ನ ಕಾಂಗ್ರೆಸ್ ಮಾಡಬಹುದಾಗಿದೆ.


ಸಭಾಧ್ಯಕ್ಷರು ಪಕ್ಷಾತೀತವಾಗಿರಬೇಕು 

ರಮೇಶ್‌ ಕುಮಾರ್ ಒಪ್ಪುತ್ತಾರೆಯೇ?ಈ ಬಗ್ಗೆ ಇಂದಿನ ಕಾಂಗ್ರೆಸ್‌ ಸಭೆಯಲ್ಲಿ ಚರ್ಚಿಸಲಾಗಿದೆ ಎಂಬ ಮಾಹಿತಿ ಇದೆ. ಸಭಾಧ್ಯಕ್ಷರು ಪಕ್ಷಾತೀತವಾಗಿ ಕಾರ್ಯ ನಿರ್ವಹಿಸಬೇಕು ಎಂಬ ನಿಯಮ ಇದೆ ಹಾಗಾಗಿ, ಈ ರಾಜಕೀಯ ಆಟಕ್ಕೆ ರಮೇಶ್‌ ಕುಮಾರ್ ಒಪ್ಪಿಕೊಳ್ಳುತ್ತಾರೆಯೇ ಎಂಬ ಅನುಮಾನವೂ ಇದೆ.


ರಮೇಶ್‌ ಕುಮಾರ್‌ ಅನ್ನು ಪ್ರವಾಸಕ್ಕೆ ಕಳುಹಿಸುವ ತಂತ್ರ? 

ಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಬೇಕುನಿಯಮದ ಪ್ರಕಾರ ಶಾಸಕರು ರಾಜೀನಾಮೆಯನ್ನು ಸಭಾಧ್ಯಕ್ಷರಿಗೆ ಸಲ್ಲಿಸಬೇಕು. ಸಭಾಧ್ಯಕ್ಷರು ಅಂಕಿತ ಹಾಕುವವರೆಗೂ ರಾಜೀನಾಮೆ ಅಂಗೀಕಾರಗೊಳ್ಳುವುದಿಲ್ಲ. ಇದರ ಲಾಭವನ್ನು ಕಾಂಗ್ರೆಸ್ ಪಡೆದುಕೊಳ್ಳಲು ರಮೇಶ್ ಕುಮಾರ್ ಅವರನ್ನು ಪ್ರವಾಸಕ್ಕೆ ಕಳುಹಿಸುವ ಯತ್ನ ಮಾಡಲಿದೆ ಎನ್ನಲಾಗಿದೆ.

ರಾಜೀನಾಮೆ ಸಲ್ಲಿಸುವ ಸಾಧ್ಯತೆ ಐದು ಶಾಸಕರು ಮುಂಬೈನಲ್ಲಿರಮೇಶ್ ಜಾರಕಿಹೊಳಿ, ಉಮೇಶ್ ಜಾದವ್, ಶ್ರೀಮಂತ ಪಾಟೀಲ್ ಸೇರಿ ಇನ್ನೂ ಕೆಲವರು ಈಗಾಗಲೇ ಮುಂಬೈನಲ್ಲಿದ್ದಾರೆ ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದೆ. ಇವರು ಬಿಜೆಪಿ ಸಂಪರ್ಕದಲ್ಲಿದ್ದು, ಯಾವಾಗ ಬೇಕಾದರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.

ವಾಪಸ್ ಕರೆತರಲು ತಂತ್ರ 

ಮುಂಬೈಗೆ ತೆರಳಲಿರುವ ಡಿಕೆಶಿ

ಅತೃಪ್ತ ಶಾಸಕರ ಮನವೊಲಿಸಲು ಸಚಿವ ಡಿ.ಕೆ.ಶಿವಕುಮಾರ್ ಅವರು ಮುಂಬೈಗೆ ತೆರಳಲಿದ್ದಾರೆ. ಸಮ್ಮೇಳನವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ಔರಂಗಾಬಾದ್‌ಗೆ ಹೋಗುತ್ತಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರಾದರೂ ಅವರು ಮುಂಬೈನಲ್ಲಿ ತಂಗಿರುವ ತಮ್ಮ ಪಕ್ಷದ ಶಾಸಕರನ್ನು ವಾಪಸ್ ಕರೆತರಲು ಮುಂಬೈಗೆ ಹೋಗುತ್ತಿದ್ದಾರೆ ಎನ್ನಲಾಗಿದೆ.

ನಮ್ಮ ಸುದ್ಧಿಗಳನ್ನು ವೀಕ್ಷಿಸಲು ಕ್ಲಿಕ್ ಮಾಡಿ https://youtu.be/YrKYQ4HlZeA

ರಾಜ್ಯ ಸರ್ಕಾರದಿಂದ ರೈತರಿಗೆ `ಸಂಕ್ರಾಂತಿ ಉಡುಗೊರೆ' : 1.7 ಲಕ್ಷ ಸಾಲ ಖಾತೆಗಳಿಗೆ 876 ಕೋಟಿ ರೂ. ಬಿಡುಗಡೆ

ಜನಜಾಗೃತಿ ಸುದ್ಧಿವಾಹಿನಿ

     15 jan 2019


ಬೆಂಗಳೂರು: ರಾಜ್ಯ ಸರ್ಕಾರವು ರೈತರಿಗೆ ಸಂಕ್ರಾಂತಿ ಹಬ್ಬಕ್ಕೆ ಭರ್ಜರಿ ಉಡುಗೊರೆ ನೀಡಿದ್ದು, 1.1 ಲಕ್ಷ ಸಹಕಾರಿ ಬ್ಯಾಂಕುಗಳ ಸಾಲದ ಖಾತೆಗಳಿಗೆ 616 ಕೋಟಿ ರೂ. ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿನ 58 ಸಾವಿರ ಸಾಲದ ಖಾತೆಗಳಿಗೆ 260 ಕೋಟಿ ರೂ.ಗಳ ಬೆಳೆ ಸಾಲ ಮನ್ನಾದ ಮೊತ್ತ ಬಿಡುಗಡೆ ಮಾಡಲಾಗಿದೆ.

ಈ ಎರಡೂ ಬ್ಯಾಂಕುಗಳಲ್ಲಿ ಒಟ್ಟು 1.7 ಲಕ್ಷ ಸಾಲ ಖಾತೆಗಳಿಗೆ 876 ಕೋಟಿ ರೂ. ಗಳಷ್ಟು ಸಾಲ ಮನ್ನಾ ಮೊತ್ತ ಬಿಡುಗಡೆ ಮಾಡಿದಂತಾಗಿದೆ. ಜನವರಿ 11 ರ ವರೆಗೆ ಒಟ್ಟು 10 ಲಕ್ಷಕ್ಕೂ ಹೆಚ್ಚು ರೈತರು ಸಾಲ ಮನ್ನಾ ಯೋಜನೆಗಾಗಿ ಅರ್ಹತೆ ಹೊಂದಿದ್ದು, ಸಹಕಾರಿ ಬ್ಯಾಂಕುಗಳ ಹಾಗೂ ವಾಣಿಜ್ಯ ಬ್ಯಾಂಕುಗಳ ಸಾಲ ಖಾತೆಗಳ ಜಿಲ್ಲಾವಾರು ವಿವರ ನೀಡಲಾಗಿದೆ.

ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಾಲದ ಖಾತೆಗಳಿಗೆ ಮನ್ನಾ ಮೊತ್ತವನ್ನು ನಿಯಮಿತವಾಗಿ ಪಾವತಿಸಲಾಗುತ್ತಿದೆ.

ಸಹಕಾರಿ ಬ್ಯಾಂಕುಗಳಲ್ಲಿ ಸಾಲವನ್ನು ತೀರಿಸುವ ವಾಯಿದೆ ಮುಗಿದ ನಂತರ ಮನ್ನಾ ಮೊತ್ತ ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ.

ನಮ್ಮ ಸುದ್ಧಿಗಳನ್ನು ವೀಕ್ಷಿಸಲು ಕ್ಲಿಕ್ ಮಾಡಿ https://youtu.be/YrKYQ4HlZeA

Monday, January 14, 2019

ಪಕ್ಷ ಬಿಟ್ಟು ಹೋಗುವವರನ್ನು ವಾಪಸ್ ಕರೆತರುವ ತಾಕತ್ತು ನಮಗಿದೆ' ; ಡಿಕೆಶಿ

ಜನಜಾಗೃತಿ ಸುದ್ಧಿವಾಹಿನಿ 

     15 jan 2019


ಬೆಂಗಳೂರು: ಬಿಜೆಪಿ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ಪಕ್ಷ ತೊರೆದು ಹೋಗುವವರನ್ನು ಮತ್ತೆ ಪಕ್ಷಕ್ಕೆ ಕರೆ ತರುವ ತಾಕತ್ತು ನಮಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಹೆಣೆದಿರುವ ತಂತ್ರಕ್ಕೆ ಪ್ರತಿ ತಂತ್ರ ಹೆಣೆಯುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೂ ಇದೆ ಎಂದರು.


ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬುದು ಸುಳ್ಳು. ಯಾರೂ ಕೂಡಾ ಬಿಜೆಪಿಯೊಂದಿಗೆ ಹೋಗಿಲ್ಲ. ಆನಂದ್ ಸಿಂಗ್ ಕೂಡ ನಮ್ಮೊಂದಿಗೇ ಇದ್ದಾರೆ.


ಸುಖಾಸುಮ್ಮನೆ ಸುಳ್ಳು ಸುದ್ದಿಗಳನ್ನು ಬಿಜೆಪಿ ಪ್ರಚುರಪಡಿಸುತ್ತಿದೆ ಎಂದು ಹೇಳಿದರು.


ಒಂದು ವೇಳೆ ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿದರೆ ಅವರನ್ನು ಮತ್ತೆ ಕರೆತರುವ ತಾಕತ್ತು ನಮಗಿದೆ ಎಂದರು.


ಸಿಎಂ ವಿರುದ್ಧ ಪರೋಕ್ಷವಾಗಿ ಅಸಮಾಧಾನ : ಕೈ ಅತೃಪ್ತರ ಭಿನ್ನಮತೀಯ ಚಟುವಟಿಕೆ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನ ಪವರ್ ಪುಲ್ ನಾಯಕ ಡಿ.ಕೆ.ಶಿವಕುಮಾರ್ ನಡುವೆ ಭಿನ್ನಮತ ಉಂಟಾಗಿದೆ.


'ಬಿಜೆಪಿ ಬಗ್ಗೆ ಸಿಎಂ ಕುಮಾರಸ್ವಾಮಿ ಸಹಾನುಭೂತಿ ಹೊಂದಿದ್ದಾರೆ' ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಮೊದಲ ಬಾರಿಗೆ ಸಚಿವ ಡಿ.ಕೆ.ಶಿವಕುಮಾರ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

'ಅತೃಪ್ತ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಅಪರೇಶನ್ ಬಗ್ಗೆ ಸಿಎಂಗೆ ಮಾಹಿತಿ ಇದೆ. ಶಾಸಕರಿಗೆ ಆಮಿಷವೊಡ್ಡುತ್ತಿರುವ ಬಗ್ಗೆಯೂ ಸಿಎಂ ಕುಮಾರಸ್ವಾಮಿಗೆ ನಿಖರ ಮಾಹಿತಿ ಇದೆ. ಸ್ವತಃ ಶಾಸಕರೇ ತಮಗೆ ಆಮಿಷವೊಡ್ಡುತ್ತಿರುವ ಬಗ್ಗೆ ಸಿಎಂಗೆ ಮಾಹಿತಿ ಕೊಟ್ಟಿದ್ದಾರೆ. ನಾನಾಗಿದ್ದರೆ 24 ಗಂಟೆಗಳಲ್ಲಿ ಎಲ್ಲವನ್ನೂ ಬಯಲು ಮಾಡ್ತಿದ್ದೆ' ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ನಮ್ಮ ಸುದ್ಧಿ ಗಳನ್ನ ವೀಕ್ಷಿಸಲು ಕ್ಲಿಕ್ ಮಾಡಿ https://youtu.be/YrKYQ4HlZeA

ಕರ್ನಾಟಕದಲ್ಲಿ ಸರ್ಕಾರ ರಚನೆ ಯತ್ನಕ್ಕೆ ಕೊನೆಗೂ ಅಮಿತ್‌ ಶಾ ಎಂಟ್ರಿ❗

ಜನಜಾಗೃತಿ ಸುದ್ಧಿವಾಹಿನಿ


     15 jan 2019


ನವದೆಹಲಿ: ಸಂಪುಟ ವಿಸ್ತರಣೆ ನಂತರ ರಮೇಶ್‌ ಜಾರಕಿಹೊಳಿ ದಿಲ್ಲಿಗೆ ಬಂದು ಕುಳಿತಿದ್ದರೂ ಅವರೊಡನೆ ನೇರವಾಗಿ ಕುಳಿತು ಮಾತನಾಡಲು ತಯಾರಾಗದ ಅಮಿತ್‌ ಶಾ, ಕಳೆದ ಒಂದು ವಾರದ ಈಚೆಗೆ ಮಾತ್ರ '18 ಶಾಸಕರು ತಯಾರಾದರೆ ಸರ್ಕಾರ ರಚನೆಗೆ ನಮ್ಮ ಅಡ್ಡಿ ಇಲ್ಲ' ಎಂದು ಯಡಿಯೂರಪ್ಪನವರಿಗೆ ಸ್ಪಷ್ಟಪಡಿಸಿದ್ದಾರೆ.


ಶೀಘ್ರದಲ್ಲೇ ಕೆಲ ಜಿಲ್ಲೆಯ ಶಾಸಕರಿಗೆ ಶುಭಸುದ್ದಿ: ಬಿ.ಎಸ್.ಯಡಿಯೂರಪ್ಪ!


ಅಗತ್ಯಬಿದ್ದಲ್ಲಿ ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಸಹಾಯ ಪಡೆದುಕೊಳ್ಳಿ ಎಂದು ಕೂಡ ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್‌ಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬಂದರೆ 20 ಲೋಕಸಭಾ ಸೀಟ್‌ ಗೆಲ್ಲಬಹುದು ಎಂಬ ಅಭಿಪ್ರಾಯವಿದ್ದು, ಕಾಂಗ್ರೆಸ್‌, ಜೆಡಿಎಸ್‌ ಸರ್ಕಾರವಿದ್ದರೆ ಬಿಜೆಪಿ 10-12ಕ್ಕಿಂತ ಜಾಸ್ತಿ ಗೆಲ್ಲುವುದು ಕಷ್ಟಎಂಬ ಅನಿಸಿಕೆಯಿದೆ.

ಹೀಗಾಗಿ ಸರ್ಕಾರ ರಚನೆ ಎಂದಕೂಡಲೇ ಹೈಕಮಾಂಡ್‌ ಕೂಡ ಉತ್ಸಾಹದಲ್ಲಿದೆ.

ಬಿಎಸ್‌ವೈ ಲವಲವಿಕೆಯ ಗುಟ್ಟೇನು?ಇಷ್ಟು ದಿನ ಸೈಲೆಂಟ್ ಆಗಿದ್ದ ಬಿಜೆಪಿ ಹೈಕಮಾಂಡ್ ಇದೀಗ ಅಖಾಡಕ್ಕೆ ಇಳಿದಿದ್ದಾರೆ. ಅಮಿತ್ ಶಾ ಎಂಟ್ರಿ ಕೊಡುತ್ತಿದ್ದಂತೆ ರಾಜ್ಯ ರಾಜ್ಯಕಾರಣದಲ್ಲಿ ಸಂಚಲನ ಮೂಡಿದೆ. ಇಷ್ಟೇ ಅಲ್ಲ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಕನಸು ಬಿಜೆಪಿ ಪಾಳಯದಲ್ಲಿ ಬಲಗೊಳ್ಳುತ್ತಿದೆ.

ನಮ್ಮ ಸುದ್ಧಿಗಳನ್ನು ವೀಕ್ಷಿಸಲು ಕ್ಲಿಕ್ ಮಾಡಿ https://youtu.be/YrKYQ4HlZeA

🤚🏻ಕಾಂಗ್ರೆಸ್ ಶಾಸಕರೇನು ಬಕ್ರಾಗಳಲ್ಲ' : ಪ್ರಿಯಾಂಕ್ ಖರ್ಗೆ

ಜನಜಾಗೃತಿ ಸುದ್ಧಿವಾಹಿನಿ 


     15 jan 2019


ಬೆಂಗಳೂರು: ಸರ್ಕಾರ ಕೆಡವುವಷ್ಟು ಸಂಖ್ಯಾ ಬಲ ಬಿಜೆಪಿಯವರ ಬಳಿ ಇಲ್ಲ. ತೋಳ ಬಂತು ತೋಳ ಎಂಬಂತೆ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಇಂದು ಬೆಳಗ್ಗೆ ಕುಮಾರಕೃಪ ಅತಿಥಿಗೃಹದಲ್ಲಿ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಅಸಂವಿಧಾನಿಕವಾಗಿ ಪ್ರಯತ್ನ ಪಡುತ್ತಿರುವುದು ಇದು ಮೊದಲ ಬಾರಿ ಅಲ್ಲ.

ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಪ್ರಯತ್ನ ಪಡುತ್ತಲೇ ಇದ್ದಾರೆ. ಹಲವಾರು ಬಾರಿ ಸರ್ಕಾರಕ್ಕೆ ಡೆಡ್‍ಲೈನ್‍ಗಳನ್ನು ಕೊಡುತ್ತಲೇ ಇದ್ದಾರೆ.ಯಾವಾಗಲೂ ಯಶಸ್ವಿಯಾಗಿಲ್ಲ. ಈಗಲೂ ಯಶಸ್ವಿಯಾಗುವುದಿಲ್ಲ ಎಂದರು.

ಸರ್ಕಾರ ಪತನಗೊಳಿಸಲು ಕನಿಷ್ಠ 12ರಿಂದ 15 ಮಂದಿ ಶಾಸಕರು ಬೇಕು. ಅಷ್ಟು ಸಂಖ್ಯಾಬಲ ಬಿಜೆಪಿಯವರ ಬಳಿ ಇಲ್ಲ. ಮೂರ್ನಾಲ್ಕು ಮಂದಿ ಬಿಜೆಪಿಯವರ ಜತೆ ಹೋಗಿರಬಹುದು. ಅಷ್ಟರಿಂದಲೇ ಸರ್ಕಾರ ಕೆಡವಲು ಸಾಧ್ಯವಿಲ್ಲ ಎಂದು ಹೇಳಿದರು.

ಶಾಸಕರನ್ನು ಬಲವಂತವಾಗಿ ಹಿಡಿದಿಟ್ಟುಕೊಳ್ಳುವುದು ಸರಿಯಲ್ಲ. ಅವರೇನು ಕುರಿಗಳಲ್ಲ. ಎರಡೂವರೆ ಲಕ್ಷ ಜನರಿಂದ ಮತ ಪಡೆದು ಚುನಾಯಿತರಾದ ಜವಾಬ್ದಾರಿಯುತ ಪ್ರತಿನಿಧಿಗಳು.ಅವರಿಗೆ ಸ್ವಂತ ವಿಚೇಚನೆ ಇದೆ ಎಂದು ತಿಳಿಸಿದರು. ಮಾಧ್ಯಮಗಳು ದಿನಬೆಳಗಾದರೆ ಬ್ರೇಕಿಂಗ್ ಸುದ್ದಿಗಳನ್ನು ಹಾಕಿ ಅನಗತ್ಯವಾಗಿ ಆತಂಕ ಸೃಷ್ಟಿಸುತ್ತಿವೆ. ಆ ಕಾರಣಕ್ಕಾಗಿ ಕೆ.ಸಿ.ವೇಣುಗೋಪಾಲ್ ಅವರು ಬೆಂಗಳೂರಿಗೆ ಬಂದು ವಸ್ತು ಸ್ಥಿತಿಯನ್ನು ಅಧ್ಯಯನ ಮಾಡುತ್ತಿದ್ದಾರೆ ಎಂದು ಹೇಳಿದರು.

ನಮ್ಮ ಚಾನಲ್ ಗೆ ಭೇಟಿ ನೀಡಿ ಸುದ್ಧಿಗಳನ್ನ ವೀಕ್ಷಿಸಿ https://youtu.be/YrKYQ4HlZeA

ಭಾರತೀಯ ಸೇನೆಯಿಂದ ಆತ್ಮಹತ್ಯಾ ಬಾಂಬರ್ ಸೆರೆ❓

ಜನಜಾಗೃತಿ ಸುದ್ಧಿವಾಹಿನಿ


     15 jan 2019

ನವದೆಹಲಿ: ಹೊಟ್ಟೆಗೆ ಬಾಂಬ್‌ ಕಟ್ಟಿಕೊಂಡಿದ್ದ ಆತ್ಮಹತ್ಯಾ ಬಾಂಬರ್‌ನೊಬ್ಬನನ್ನು ಭಾರತೀಯ ಸೇನೆ ಸೆರೆಹಿಡಿದಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸಂಜಯ್‌ ಚೌದರಿ ಎಂಬ ಹೆಸರಿನ ಫೇಸ್‌ಬುಕ್‌ ಪೇಜ್‌ನಲ್ಲಿ ವಯಸ್ಸಾದ ವ್ಯಕ್ತಿಯೊಬ್ಬ ಹಳದಿ ಬಣ್ಣದ ಬ್ಯಾಗ್‌ಗಳನ್ನು ತನ್ನ ಹೊಟ್ಟೆಗೆ ಕಟ್ಟಿಕೊಂಡು ಸೇನಾಧಿಕಾರಿಯ ಜೊತೆ ನೀಂತಿರುವ ಫೋಟೋವನ್ನು ಪೋಸ್ಟ್‌ ಮಾಡಿ, 'ಇವನು ಸೂಸೈಡ್‌ ಬಾಂಬರ್‌. ಭಾರತೀಯ ಸೇನೆ ಈತನನ್ನು ಸೆರೆಹಿಡಿದಿದೆ' ಎಂದು ಒಕ್ಕಣೆ ಬರೆಯಲಾಗಿದೆ. ಸದ್ಯ ಈ ಪೋಸ್ಟ್‌ 6,300 ಬಾರಿ ಶೇರ್‌ ಆಗಿದೆ. ಫೇಸ್‌ಬುಕ್‌ ಮಾತ್ರವಲ್ಲದೆ ಟ್ವೀಟರ್‌ ಮತ್ತು ವಾಟ್ಸ್‌ಆಯಪ್‌ಗಳಲ್ಲೂ ವೈರಲ್‌ ಆಗಿದೆ.

ಆದರೆ ನಿಜಕ್ಕೂ ಫೋಟೋದಲ್ಲಿರುವಾತ ಸೂಸೈಡ್‌ ಬಾಂಬರ್‌ ಹೌದೇ ಎಂದು ಆಲ್ಟ್‌ ನ್ಯೂಸ್‌ ಸುದ್ದಿ ಸಂಸ್ಥೆ ಪರಿಶೀಲಿಸಿದಾಗ ಕಳೆದ ವರ್ಷವೂ ಇದೇ ಫೋಟೋ ಹರಿದಾಡಿವುದು ಪತ್ತೆಯಾಗಿದೆ.

ಈ ಸುದ್ದಿ ಸತ್ಯಾಸತ್ಯ ಏನು ಎಂದು ರಿವರ್ಸ್‌ ಇಮೇಜ್‌ನಲ್ಲಿ ಪರಿಶೀಲಿಸಿದಾಗ 2014ರ ಟ್ವೀಟ್‌ವೊಂದರಲ್ಲಿ 'ಮಾದಕ ವಸ್ತು ಸಾಗಣೆ ಮಾಡುತ್ತಿದ್ದ ವ್ಯಕ್ತಿಯ ಬಂಧನ' ಎಂದು ಬರೆದು ಇದೇ ಪೋಟೋವನ್ನು ಪೋಸ್ಟ್‌ ಮಾಡಲಾಗಿರುವುದು ಪತ್ತೆಯಾಗಿದೆ.ಅಲ್ಲದೆ ಪಾಕಿಸ್ತಾನ ಮೂಲದ ಪತ್ರಕರ್ತರೊಬ್ಬರ ಟ್ವೀಟ್‌ನಲ್ಲೂ ಇದೇ ರೀತಿ ಬರೆಯಲಾಗಿದೆ. ಅಂದರೆ ಈತ ಪಾಕಿಸ್ತಾ ಮತ್ತು ಅಷ್ಘಾನಿಸ್ತಾನ ಗಡಿಗಳಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮಾಡುತ್ತಿದ್ದು, ಪಾಕ್‌ ಸೇನೆ 2014ರಲ್ಲಿ ಈತನನ್ನು ಬಂಧಿಸಿತ್ತು. ಸದ್ಯ ಅದೇ ಫೋಟೋವನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಯನ್ನು ಹರಡಲಾಗುತ್ತಿದೆ.

ನಮ್ಮ ಚಾನಲ್ ಗೆ ಭೇಟಿ ನೀಡಿ ಸುದ್ಧಿಗಳನ್ನು ವೀಕ್ಷಿಸಿ https://youtu.be/YrKYQ4HlZeA

ಕರಾಳ 'ಸಂಕ್ರಾಂತಿ' : ಕಾರು ಕಾಲುವೆಗೆ ಬಿದ್ದು ಒಂದೇ ಕುಟುಂಬದ ಐವರು ದುರ್ಮರಣ..!

ಜನಜಾಗೃತಿ ಸುದ್ಧಿವಾಹಿನಿ


     15 jan 2019


ಬೆಳಗಾವಿ: ಅಂತ್ಯಕ್ರಿಯೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಕಾರು ಕಾಲುವೆಗೆ ಬಿದ್ದು ಒಂದೇ ಕುಟುಂಬದ ಐವರು ನೀರು ಪಾಲಾಗಿರುವ ಘಟನೆ ಸವದತ್ತಿ ತಾಲೂಕಿನ ಕಡಬಿ ಶಿವಾಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಅಂತ್ಯಕ್ರಿಯೆ ಮುಗಿಸಿಕೊಂಡು ಮನೆಗೆ ವಾಪಾಸ್ ಆಗುತ್ತಿದ್ದ ಐದು ಜನರಿದ್ದ ಕಾರು ಪಲ್ಟಿಯಾಗಿ ಕಾಲುವೆಗೆ ಬಿದ್ದಿದ್ದು, ಐದೂ ಜನ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಕಡಬಿ ಗ್ರಾಮದ ಒಂದೇ ಕುಟುಂಬದ ನಿವಾಸಿಗಳಾದ ಪಕ್ಕೀರವ್ವ ಪೂಜೇರಿ(29), ಹನುಮಂತ ಪೂಜೇರಿ(60), ಲಗಮಣ್ಣ ಪೂಜೇರಿ(38), ಪಾರವ್ವ ಪೂಜೇರಿ(50), ಲಕ್ಷ್ಮೀ ಪೂಜೇರಿ(40) ಮೃತ ದುರ್ದೈವಿಗಳು. ಇನ್ನು ಕಾರು ಚಾಲಕ ಅಡಿವೆಪ್ಪ ಮಾಳಗಿ ಎಂಬಾತ ಕಾರು ಕಾಲುವೆಗೆ ಬೀಳುತ್ತಿದ್ದಂತೆ ಈಜಿ ದಡ ಸೇರುವ ಮೂಲಕ ಬದುಕುಳಿದಿದ್ದಾನೆ.

ಸುದ್ಧಿ ಗಳನ್ನ ವೀಕ್ಷಿಸಲು ನಮ್ಮ ಚಾನಲ್ ಗೆ ಭೇಟಿನೀಡಿ https://youtu.be/YrKYQ4HlZeA

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗ್ರಾಮ ಹಳ್ಳಿ ಗಳಲ್ಲಿ ನೀರಿಗಾಗಿ ಪರದಾಟ ಅಧಿಕಾರಿ ಗಳು ಕೇರ್ ಮಾಡ್ತಿಲ್ಲ ಎಂದ ದೇಶಮುಖ್

ಔರಾದ್: ಅಧಿಕಾರಿಗಳು  ಯಾವುದೇ ಸ್ಪಂದನೆ ನೀಡುತಿಲ್ಲ ಮತ್ತು ಊರಿನ ಗ್ರಾಮ ಪಂಚಾಯತ್  ಅದ್ಯಕ್ಷರು  ಯಾವುದೇ ಪರಿಹಾರ ಕಂಡುಹಿಡಿಯಲು ವಿಫಲ ವಾಗುತ್ತಿದ್ದಾರೆ  ಎಂದು ಕೆಪಿಸಿಸಿ ಕಾರ್ಮಿಕ ವಿಭಾಗದ  ತಾಲ್ಲೂಕ ಸಂಘಟನ ಕಾರ್ಯದರ್ಶಿ ಹಣಮಂತ್ ದೇಶಮುಖ ತಿಳಿಸಿದ್ದಾರೆ 

ಇದೆ ರೀತಿ ತಾಲೂಕಿನ ಅನೇಕ ಗ್ರಾಮಗಳಲ್ಲಿ  ನೀರಿನ ತೊಂದರೆ ಇದೆ ಬೋರವೆಲ್ ಗಳು ಇದ್ದು ಇಲ್ಲ ದಂತಾಗಿವೆ ಅವು ಗಳು ಕೊಳೆತು ಹೋಗುತಿದ್ದರು ಆ ಕಡೆ ಗಮನ ಹರಿಸಲು ಯಾರು ದಿಕ್ಕಿಲ್ಲದಂತಾಗಿದೆ ಅದಕ್ಕೆ ಅಧಿಕಾರಿಗಳು ಕೂಡಲೇ ಪರಿಹಾರ ಕಂಡುಕೊಳ್ಳಬೇಕು ಎಂದು ದೇಶಮುಖ್ ನಮ್ಮ ಸುದ್ಧಿ ವಾಹಿನಿಯ ಮೂಲಕ ತಮ್ಮ ಮನದಾಳದ ಮಾತು ಹಂಚಿ ಕೊಂಡಿದ್ದಾರೆ 

ಹೀಗೆ ಇದೆ ತೊಂದರೆ ಜನರಿಗೆ ಮುಂದಿನ ದಿನಗಳಲ್ಲಿ  ಉಂಟಾದರೆ ಕಾನೂನಿನ ಪ್ರಕಾರ ಸೂಕ್ತ ಹೋರಾಟ  

ಮಾಡಬೇಕಾಗುತ್ತದೆ ಎಂದು ದೇಶಮುಖ್  ನಮ್ಮ ಮಾಧ್ಯಮದ ಮೂಲಕ ತಿಳಿಸಿದ್ದಾರೆ

ನಮ್ಮ ಚಾನಲ್ ಗೆ ಭೇಟಿ ನೀಡಿ ಹಾಗೂ Subscribe ಮಾಡಿ Youtube.com/c/janajagrutiTVNews

 

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಕಾರು : ಒಂದೇ ಕುಟುಂಬದ ಐವರು ಜಲಸಮಾಧಿ

ಜನಜಾಗೃತಿ ಸುದ್ಧಿವಾಹಿನಿ


     15 jan 2019


ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಜಲಸಮಾಧಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಕಡಬಿ ಗ್ರಾಮದ ಬಳಿ ನಡೆದಿದೆ.

ಸೋಮವಾರ ರಾತ್ರಿ ಘಟಪ್ರಭಾ ಎಡದಂಡೆ ನಾಲೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದು, ಐವರು ಸಾವನ್ನಪ್ಪಿದ್ದಾರೆ. ಮೃತರನ್ನು ಪಕ್ಕೀರವ್ವ ಪೂಜಾರಿ (29), ಹನುಮಂತ ಪೂಜಾರಿ (60), ಲಗಮಣ್ಣ ಪೂಜಾರಿ (38), ಪಾರವ್ವ ಪೂಜಾರಿ (50), ಲಕ್ಷ್ಮೀ ಪೂಜಾರಿ (40) ಎಂದು ಗುರುತಿಸಲಾಗಿದೆ.ಮೃತರೆಲ್ಲ ಕಡಬಿ ಗ್ರಾಮದವರು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಮುರುಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಮ್ಮ ಚಾನಲ್ ಗೆ ಭೇಟಿ ನೀಡಿ Subscribe ಮಾಡಿ Youtube.com/c/janajagrutiTVNews

ಜೆಡಿಎಸ್ ಜೊತೆ ಸೀಟು ಹಂಚಿಕೆಯ ಜೊತೆಗೆ, ಕಾಂಗ್ರೆಸ್ಸಿಗೆ ಶುರುವಾಯ್ತು ಇನ್ನೊಂದು ತಲೆನೋವು

ಜನಜಾಗೃತಿ ಸುದ್ಧಿವಾಹಿನಿ


ಕರ್ನಾಟಕ ಕಾಂಗ್ರೆಸ್ಸಿಗೆ ಚುನಾವಣಾಪೂರ್ವ ಮೈತ್ರಿ ಮತ್ತು ಚುನಾವಣೋತ್ತರ ಮೈತ್ರಿಯ ನಡುವಿನ ನಿಜವಾದ 'ವ್ಯತ್ಯಾಸ' ಏನು ಎನ್ನುವುದು ಅರ್ಥವಾಗುವ ಕಾಲ ಸನ್ನಿಹಿತವಾದಂತಿದೆ. ರಾಜ್ಯ ಅಸೆಂಬ್ಲಿ ಚುನಾವಣೆಗೆ ಮುನ್ನ ಬೀದಿರಂಪ ಮಾಡಿಕೊಂಡಿದ್ದ ಜೆಡಿಎಸ್-ಕಾಂಗ್ರೆಸ್, ಅತಂತ್ರ ಫಲಿತಾಂಶ ಬರುತ್ತಿದ್ದಂತೆಯೇ ಒಂದಾಯಿತು.

ಮನೆ ಬಾಗಿಲಿಗೆ ಬಂದ ಮುಖ್ಯಮಂತ್ರಿ ಹುದ್ದೆಯನ್ನು ಒಲ್ಲೆ ಎನ್ನಲು ಕುಮಾರಸ್ವಾಮಿ ಏನು ರಾಜಕೀಯ ಸನ್ಯಾಸ ತೆಗೆದುಕೊಂಡಿರಲಿಲ್ಲ. 


ಆದರೆ, ಸಮ್ಮಿಶ್ರ ಸರಕಾರದಲ್ಲಿ ಜೆಡಿಎಸ್ ತನ್ನ ಬಿಗುವನ್ನು ಹೆಚ್ಚಿಸಿಕೊಳ್ಳುತ್ತಿದ್ದಂತೆಯೇ, ಕಾಂಗ್ರೆಸ್ಸಿಗರು ಬಹಿರಂಗವಾಗಿಯೇ ತಮ್ಮ ಅಪಸ್ವರವನ್ನು ಎತ್ತಲಾರಂಭಿಸಿದರು.

ನಾಲ್ಕು, ಐದು, ಆರು ಸೀಟಿನಿಂದ, ಈಗ ಜೆಡಿಎಸ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹನ್ನೆರಡು ಸೀಟನ್ನು ಬಿಟ್ಟುಕೊಡಬೇಕು ಎನ್ನುವ ನಿಲುವು ತಾಳಿದೆ ಎನ್ನುವ ಸುದ್ದಿ, ಒಂದೆಡೆ ಹೈಕಮಾಂಡಿಗೂ ಮತ್ತು ರಾಜ್ಯ ಕಾಂಗ್ರೆಸ್ಸಿಗರಿಗೂ ನಿದ್ದೆಗೆಡಿಸಿದೆ.

ಇದರ ಜೊತೆಗೆ, ಮಹಿಳೆಯರಿಗೆ ಪ್ರಾತಿನಿಧ್ಯ ನೀಡಬೇಕು ಎನ್ನುವ ತಮ್ಮ ಮುಖಂಡ ರಾಹುಲ್ ಗಾಂಧಿಯವರ ಮಾತು, ಬರೀ ಮಾತಾಗಬಾರದು, ಅದು ಕಾರ್ಯರೂಪಕ್ಕೆ ಬರಬೇಕು ಎಂದು ರಾಜ್ಯ ಮಹಿಳಾ ಕಾಂಗ್ರೆಸ್ಸಿಗರು ಬೇಡಿಕೆಯನ್ನು ಇಟ್ಟಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಮುಂಬರುವ ಲೋಕಸಭಾ ಚುನಾವಣೆ

ಬಿಜೆಪಿಗಿಂತ ಕಾಂಗ್ರೆಸ್ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಿದೆ

ಮುಂಬರುವ ಲೋಕಸಭಾ ಚುನಾವಣೆಗೆ ಮಹಿಳೆಯರಿಗೂ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎನ್ನುವ ಡಿಮಾಂಡ್ ಕೇಳಿಬಂದಿದೆ.


ಕೆಲವೊಂದು ಕ್ಷೇತ್ರಗಳಲ್ಲಂತೂ ಬಲವಾದ ಒತ್ತಡವಿರುವುದರಿಂದ, ಕಾಂಗ್ರೆಸ್ ಯಾವ ರೀತಿ ಈ ಪರಿಸ್ಥಿತಿಯನ್ನು ನಿಭಾಯಿಸಲಿದೆ ಎನ್ನುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಬಿಜೆಪಿಗಿಂತ ಕಾಂಗ್ರೆಸ್ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಿದೆ ಎನ್ನುವ ಸಂದೇಶ ರವಾನೆಯಾಗಬೇಕು ಎನ್ನುವುದು ರಾಜ್ಯ ಮಹಿಳಾ ಕಾಂಗ್ರೆಸ್ ನಾಯಕಿಯರ ವಾದ.


2014ರ ಲೋಕಸಭಾ ಚುನಾವಣೆ

ಲಕ್ಷ್ಮೀ ಹೆಬ್ಬಾಳ್ಕರ್, ಮಂಡ್ಯದಲ್ಲಿ ರಮ್ಯಾ,

2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಇಬ್ಬರು ಮಹಿಳೆಯರಿಗೆ ಟಿಕೆಟ್ ಅನ್ನು ನೀಡಿತ್ತು. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸುರೇಶ್ ಅಂಗಡಿಯವರ ವಿರುದ್ದ 75,860 ಮತಗಳ ಅಂತರದಿಂದ ಮತ್ತು ಮಂಡ್ಯದಲ್ಲಿ ರಮ್ಯಾ, ತಮ್ಮ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಸಿ ಎಸ್ ಪುಟ್ಟರಾಜು ವಿರುದ್ದ 5,518 ಮತಗಳ ಅಂತರದಿಂದ ಸೋತಿದ್ದರು.


ಬೆಳಗಾವಿ ಗ್ರಾಮಾಂತರ

ಈ ಬಾರಿ ಮೂರು ಸೀಟು ನೀಡಬೇಕು ಎನ್ನುವ ಒತ್ತಡ

ಆದರೆ, ಈ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್, ಬೆಳಗಾವಿ ಗ್ರಾಮಾಂತರ ಅಸೆಂಬ್ಲಿ ಕ್ಷೇತ್ರದ ಶಾಸಕಿಯಾಗಿರುವುದರಿಂದ ಲೋಕಸಭಾ ಚುನಾವಣಾ ಸ್ಪರ್ಧೆಗೆ ಒಲ್ಲೆ ಎಂದಿದ್ದಾರೆ. ಕಳೆದ ಬಾರಿ ಎರಡು ಕ್ಷೇತ್ರಗಳಲ್ಲಿ ಮಹಿಳೆಯರು ಸ್ಪರ್ಧಿಸಿದ್ದರು, ಈ ಬಾರಿ ಮೂರು ಸೀಟು ನೀಡಬೇಕು ಎನ್ನುವ ಒತ್ತಡ ಸದ್ದಿಲ್ಲದೇ ನಡೆಯುತ್ತಿದೆ ಎನ್ನುವ ಮಾತು ಕೇಳಿಬರುತ್ತಿದೆ.


ಹನ್ನೆರಡು ಕ್ಷೇತ್ರ

ಕಾಂಗ್ರೆಸ್ಸಿಗೆ ತೀವ್ರ ತಲೆನೋವಾಗುವ ಸಾಧ್ಯತೆಯಿಲ್ಲದಿಲ್ಲ

ಹನ್ನೆರಡು ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಯಾವ ಕಾರಣಕ್ಕೂ ಬಿಟ್ಟುಕೊಡಬಾರದು ಎಂದು ಈಗಾಗಲೇ, ಹಲವು ಕಾಂಗ್ರೆಸ್ ಮುಖಂಡರು ನೇರವಾಗಿ ರಾಹುಲ್ ಗಾಂಧಿಯವರಲ್ಲಿ ಮನವಿ ಮಾಡಿಬಂದಿದ್ದಾರೆ. ಇದರ ಜೊತೆಗೆ , ಮೂರು ಸೀಟು ಅನ್ನು ಮಹಿಳೆಯರಿಗೆ ಬಿಟ್ಟುಕೊಡಿ ಎನ್ನುವ ಕೂಗು, ಚುನಾವಣೆಯ ವೇಳೆ ಹೆಚ್ಚಾದರೆ, ಕಾಂಗ್ರೆಸ್ಸಿಗೆ ಅದು ತೀವ್ರ ತಲೆನೋವಾಗುವ ಸಾಧ್ಯತೆಯಿಲ್ಲದಿಲ್ಲ.


ಮೂಲಗಳ ಪ್ರಕಾರ

ಹಲವು ಮಹಿಳಾ ಟಿಕೆಟ್ ಆಕಾಂಕ್ಷಿಗಳು ಮೂಲಗಳ ಪ್ರಕಾರ, ಮಾರ್ಗರೆಟ್ ಆಳ್ವ (ಉತ್ತರ ಕನ್ನಡ), ರಮ್ಯಾ (ಬೆಂಗಳೂರಿನ ಯಾವುದಾದರೂ ಕ್ಷೇತ್ರದಲ್ಲಿ, ಗ್ರಾಮಾಂತರ ಹೊರತು ಪಡಿಸಿ) ಬಯಸಿದರೆ, ಟಿಕೆಟ್ ನೀಡಲು ಹೈಕಮಾಂಡ್ ಸಿದ್ದವಿದೆ. ಇದರ ಜೊತೆಗೆ, ಎಐಸಿಸಿ ಸದಸ್ಯೆ ಕಾಂತ ನಾಯಕ್ (ವಿಜಯಪುರ), ಬಾಗಲಕೋಟೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವೀಣಾ ಕಾಶಪ್ಪನವರ್ (ಬಾಗಲಕೋಟೆ) ಕೂಡಾ ಟಿಕೆಟ್ ಆಕಾಂಕ್ಷಿಗಳು ಎನ್ನುವ ಸುದ್ದಿ ಹರಿದಾಡುತ್ತಿದೆ.

ನಮ್ಮ ಚಾನಲ್ ಗೆ ಭೇಟಿ ನೀಡಿ subscribe ಮಾಡಲು ಮರಿಯದಿರಿ Youtube.com/c/janajagrutiTVNews