Tuesday, January 15, 2019

50 ಕೋಟಿ ರೂ.ಗೆ ಮತದಾರರನ್ನು ಮಾರಿದ ಶಾಸಕ.!❓

ಜನಜಾಗೃತಿ ಸುದ್ಧಿವಾಹಿನಿ 

     16 jan 2019


ಕಲಬುರಗಿ: ಆಪರೇಷನ್ ಕಮಲಕ್ಕೆ ತುತ್ತಾಗಿ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಉಮೇಶ್ ಜಾಧವ್ ಬಿಜೆಪಿ ಬಾಗಿಲಲ್ಲಿ ನಿಂತಿದ್ದಾರೆ ಎಂದು ಹೇಳಲಾಗಿದ್ದು, ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಉಮೇಶ್ ಜಾಧವ್, ಬಿಜೆಪಿ ಸೇರಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಈ ಬೆಳವಣಿಗೆಗಳ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

50 ಕೋಟಿ ರೂ.ಗೆ ಚಿಂಚೋಳಿ ಕ್ಷೇತ್ರದ ಮತದಾರರನ್ನು ಶಾಸಕ ಉಮೇಶ್ ಜಾಧವ್ ಮಾರಿದ್ದಾರೆ ಎಂದು ವಾಟ್ಸಾಪ್ ಗ್ರೂಪ್ ಗಳಲ್ಲಿ ಸಂದೇಶ ಹರಿಯಬಿಡಲಾಗಿದೆ.

ಉಮೇಶ್ ಜಾಧವ್ ಅವರ ಫೋಟೋ ಮೇಲೆ ಇಂಗ್ಲಿಷ್ ನಲ್ಲಿ ಕ್ಷೇತ್ರದ ಮತದಾರರನ್ನು 50 ಕೋಟಿ ರೂ.ಗೆ ಮಾರಿದ್ದಾರೆ ಎಂದು ಬರೆಯಲಾಗಿದ್ದು, ಕಾಂಗ್ರೆಸ್ ಬೆಂಬಲಿಗರ ವಾಟ್ಸಾಪ್ ಗ್ರೂಪ್ ಗಳಲ್ಲಿ ಈ ಫೋಟೋ ವೈರಲ್ ಆಗಿದೆ.

ನಮ್ಮ ಸುದ್ಧಿಗಳನ್ನು ವೀಕ್ಷಿಸಲು ಕ್ಲಿಕ್ ಮಾಡಿ https://youtu.be/ujlXO-HUsaM

No comments:

Post a Comment