Thursday, January 3, 2019

ಪ್ರಧಾನಿ ಮೋದಿಗೆ ಮತ್ತೊಂದು ಮಿತ್ರ ಪಕ್ಷದಿಂದ 'ಶಾಕ್'

      ಜನಜಾಗೃತಿ ಸುದ್ಧಿವಾಹಿನಿ


     04 jan 2019


ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮಿತ್ರ ಪಕ್ಷಗಳೇ ಶಾಕ್ ನೀಡುತ್ತಿದ್ದು, ಈಗ ಮತ್ತೊಂದು ಮಿತ್ರ ಪಕ್ಷ ಸರ್ಕಾರದ ತೀರ್ಮಾನಕ್ಕೆ ವಿರೋಧ ವ್ಯಕ್ತಪಡಿಸಿದೆ.

ರಾಮಮಂದಿರ ನಿರ್ಮಾಣ ವಿಚಾರ ಕುರಿತಂತೆ ರಾಮ್ ವಿಲಾಸ್ ಪಾಸ್ವಾನ್ ಅವರ ಎಲ್.ಜೆ.ಪಿ. ಪಕ್ಷ ಭಿನ್ನ ನಿಲುವು ವ್ಯಕ್ತಪಡಿಸಿದ್ದು, ರಫೆಲ್ ಯುದ್ದ ವಿಮಾನ ವಿಚಾರದಲ್ಲಿ ಉದ್ಧವ್ ಠಾಕ್ರೆ ಅವರ ಶಿವಸೇನೆ ಕಾಂಗ್ರೆಸ್ ಪರ ನಿಂತಿತ್ತು.

ಇದೀಗ ನಿತೀಶ್ ಕುಮಾರ್ ನೇತೃತ್ವದ ಜೆಡಿಯು, ತ್ರಿವಳಿ ತಲಾಖ್ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿದ ವೇಳೆ ಸರ್ಕಾರದ ವಿರುದ್ಧವಾಗಿ ಮತ ಚಲಾಯಿಸುವುದಾಗಿ ತಿಳಿಸಿದೆ. ಇದರಿಂದಾಗಿ ತ್ರಿವಳಿ ತಲಾಕ್ ಮಸೂದೆ ಅಂಗೀಕಾರವಾಗುವುದು ಕಷ್ಟ ಸಾಧ್ಯವೆನ್ನಲಾಗಿದೆ

ನಮ್ಮ ಚಾನಲ್ ಗೆ ಭೇಟಿ ನೀಡಿ subscribe ಮಾಡಿ ಬೆಂಬಲಿಸಿ Youtube.com/c/janajagrutiTVNews

No comments:

Post a Comment