ಜನಜಾಗೃತಿ ಸುದ್ಧಿವಾಹಿನಿ
16 jan 2019
ಬೆಂಗಳೂರು: ಮಾಜಿ ಅರಣ್ಯ ಸಚಿವ, ಕೆಪಿಜೆಪಿ ಪಕ್ಷದ ನಾಯಕ ಆರ್. ಶಂಕರ್ ಮತ್ತು ಮುಳಬಾಗಿಲು ಕ್ಷೇತ್ರದ ಶಾಸಕ ಹೆಚ್. ನಾಗೇಶ್ ಅವರು ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು, ಇದೀಗ ಕಾಂಗ್ರೆಸ್ ನ ಮತ್ತೊಬ್ಬ ಅತೃಪ್ತ ಶಾಸಕರು ಮುಂಬೈ ಶಿಫ್ಟ್ ಆಗಿದ್ದಾರೆ ಎನ್ನಲಾಗುತ್ತಿದೆ.
ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಮಂಗಳವಾರ ಸಂಜೆ ಮುಂಬಯಗೆ ತೆರಳಿದ್ದಾರೆ. ಶಾಸಕರು ಹಾಗೂ ಪಕ್ಷದ ನಾಯಕರ ನಡುವೆ ಭಿನ್ನಮತ ಕಾಣಿಸಿಕೊಂಡಿದ್ದು, ಈಗಾಗಲೇ ಮುಂಬೈನಖಾಸಗಿ ಹೋಟೆಲ್ ನಲ್ಲಿರುವ ಆರು ಜನ ಶಾಸಕರನ್ನು ಪ್ರತಾಪ್ ಗೌಡ ಸೇರಿದ್ದಾರೆ ಎನ್ನಲಾಗಿದೆ.
ಮೊದಲ ಹಂತದ ಆಪರೇಷನ್ ಕಮಲದಲ್ಲಿ ಯಶಸ್ವಿಯಾದ ಬಿಜೆಪಿ ಇಂದು ಎರಡನೇ ಹಂತದ ಆಪರೇಷನ್ ಕಮಲ ನಡೆಸಲು ಮುಂದಾಗಲಿದ್ದಾರೆ ಎನ್ನಲಾಗುತ್ತಿದ್ದು, ಕಾಂಗ್ರೆಸ್ ನ 7 ಶಾಸಕರಿಂದ ರಾಜೀನಾಮೆ ಕೊಡಿಸಲು ಬಿಜೆಪಿ ಬಿಗ್ ಪ್ಲಾನ್ ರೂಪಿಸುತ್ತಿದೆ ಎಂದು ಹೇಳಲಾಗುತ್ತಿದೆ.
ನಮ್ಮ ಸುದ್ಧಿ ಗಳನ್ನ ವೀಕ್ಷಿಸಲು ಕ್ಲಿಕ್ ಮಾಡಿ https://youtu.be/ujlXO-HUsaM
No comments:
Post a Comment