Monday, January 14, 2019

ಕರಾಳ 'ಸಂಕ್ರಾಂತಿ' : ಕಾರು ಕಾಲುವೆಗೆ ಬಿದ್ದು ಒಂದೇ ಕುಟುಂಬದ ಐವರು ದುರ್ಮರಣ..!

ಜನಜಾಗೃತಿ ಸುದ್ಧಿವಾಹಿನಿ


     15 jan 2019


ಬೆಳಗಾವಿ: ಅಂತ್ಯಕ್ರಿಯೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಕಾರು ಕಾಲುವೆಗೆ ಬಿದ್ದು ಒಂದೇ ಕುಟುಂಬದ ಐವರು ನೀರು ಪಾಲಾಗಿರುವ ಘಟನೆ ಸವದತ್ತಿ ತಾಲೂಕಿನ ಕಡಬಿ ಶಿವಾಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಅಂತ್ಯಕ್ರಿಯೆ ಮುಗಿಸಿಕೊಂಡು ಮನೆಗೆ ವಾಪಾಸ್ ಆಗುತ್ತಿದ್ದ ಐದು ಜನರಿದ್ದ ಕಾರು ಪಲ್ಟಿಯಾಗಿ ಕಾಲುವೆಗೆ ಬಿದ್ದಿದ್ದು, ಐದೂ ಜನ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಕಡಬಿ ಗ್ರಾಮದ ಒಂದೇ ಕುಟುಂಬದ ನಿವಾಸಿಗಳಾದ ಪಕ್ಕೀರವ್ವ ಪೂಜೇರಿ(29), ಹನುಮಂತ ಪೂಜೇರಿ(60), ಲಗಮಣ್ಣ ಪೂಜೇರಿ(38), ಪಾರವ್ವ ಪೂಜೇರಿ(50), ಲಕ್ಷ್ಮೀ ಪೂಜೇರಿ(40) ಮೃತ ದುರ್ದೈವಿಗಳು. ಇನ್ನು ಕಾರು ಚಾಲಕ ಅಡಿವೆಪ್ಪ ಮಾಳಗಿ ಎಂಬಾತ ಕಾರು ಕಾಲುವೆಗೆ ಬೀಳುತ್ತಿದ್ದಂತೆ ಈಜಿ ದಡ ಸೇರುವ ಮೂಲಕ ಬದುಕುಳಿದಿದ್ದಾನೆ.

ಸುದ್ಧಿ ಗಳನ್ನ ವೀಕ್ಷಿಸಲು ನಮ್ಮ ಚಾನಲ್ ಗೆ ಭೇಟಿನೀಡಿ https://youtu.be/YrKYQ4HlZeA

No comments:

Post a Comment