ಜನಜಾಗೃತಿ ಸುದ್ಧಿವಾಹಿನಿ
15 jan 2019
ನವದೆಹಲಿ: ಸಂಪುಟ ವಿಸ್ತರಣೆ ನಂತರ ರಮೇಶ್ ಜಾರಕಿಹೊಳಿ ದಿಲ್ಲಿಗೆ ಬಂದು ಕುಳಿತಿದ್ದರೂ ಅವರೊಡನೆ ನೇರವಾಗಿ ಕುಳಿತು ಮಾತನಾಡಲು ತಯಾರಾಗದ ಅಮಿತ್ ಶಾ, ಕಳೆದ ಒಂದು ವಾರದ ಈಚೆಗೆ ಮಾತ್ರ '18 ಶಾಸಕರು ತಯಾರಾದರೆ ಸರ್ಕಾರ ರಚನೆಗೆ ನಮ್ಮ ಅಡ್ಡಿ ಇಲ್ಲ' ಎಂದು ಯಡಿಯೂರಪ್ಪನವರಿಗೆ ಸ್ಪಷ್ಟಪಡಿಸಿದ್ದಾರೆ.
ಶೀಘ್ರದಲ್ಲೇ ಕೆಲ ಜಿಲ್ಲೆಯ ಶಾಸಕರಿಗೆ ಶುಭಸುದ್ದಿ: ಬಿ.ಎಸ್.ಯಡಿಯೂರಪ್ಪ!
ಅಗತ್ಯಬಿದ್ದಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಹಾಯ ಪಡೆದುಕೊಳ್ಳಿ ಎಂದು ಕೂಡ ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್ಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬಂದರೆ 20 ಲೋಕಸಭಾ ಸೀಟ್ ಗೆಲ್ಲಬಹುದು ಎಂಬ ಅಭಿಪ್ರಾಯವಿದ್ದು, ಕಾಂಗ್ರೆಸ್, ಜೆಡಿಎಸ್ ಸರ್ಕಾರವಿದ್ದರೆ ಬಿಜೆಪಿ 10-12ಕ್ಕಿಂತ ಜಾಸ್ತಿ ಗೆಲ್ಲುವುದು ಕಷ್ಟಎಂಬ ಅನಿಸಿಕೆಯಿದೆ.
ಹೀಗಾಗಿ ಸರ್ಕಾರ ರಚನೆ ಎಂದಕೂಡಲೇ ಹೈಕಮಾಂಡ್ ಕೂಡ ಉತ್ಸಾಹದಲ್ಲಿದೆ.
ಬಿಎಸ್ವೈ ಲವಲವಿಕೆಯ ಗುಟ್ಟೇನು?ಇಷ್ಟು ದಿನ ಸೈಲೆಂಟ್ ಆಗಿದ್ದ ಬಿಜೆಪಿ ಹೈಕಮಾಂಡ್ ಇದೀಗ ಅಖಾಡಕ್ಕೆ ಇಳಿದಿದ್ದಾರೆ. ಅಮಿತ್ ಶಾ ಎಂಟ್ರಿ ಕೊಡುತ್ತಿದ್ದಂತೆ ರಾಜ್ಯ ರಾಜ್ಯಕಾರಣದಲ್ಲಿ ಸಂಚಲನ ಮೂಡಿದೆ. ಇಷ್ಟೇ ಅಲ್ಲ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಕನಸು ಬಿಜೆಪಿ ಪಾಳಯದಲ್ಲಿ ಬಲಗೊಳ್ಳುತ್ತಿದೆ.
ನಮ್ಮ ಸುದ್ಧಿಗಳನ್ನು ವೀಕ್ಷಿಸಲು ಕ್ಲಿಕ್ ಮಾಡಿ https://youtu.be/YrKYQ4HlZeA
No comments:
Post a Comment