ಜನಜಾಗೃತಿ ಸುದ್ಧಿವಾಹಿನಿ
Feb 14 / 2019
ಚಿಕ್ಕಮಗಳೂರು: ಶಾಲೆಯಲ್ಲಿ ಮಕ್ಕಳಿಗೆ ನೀಡಿದ್ದ ಬಿಸಿಯೂಟ ಸೇವಿಸಿ, ಹಾಲು ಕುಡಿದ 17 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ತಾಲೂಕಿನ ಶಿರವಾಸೆಯಲ್ಲಿ ನಡೆದಿದೆ.
ಶಿರವಾಸೆ ಗ್ರಾಮದಲ್ಲಿರುವ ವಿವೇಕಾನಂದ ಶಾಲೆಯಲ್ಲಿ ಮಧ್ಯಾಹ್ನ ಊಟದ ಬಳಿಕ ಮಕ್ಕಳು ಊಟ ಮಾಡಿ ಹಾಲು ಕುಡಿಯುತ್ತಿದ್ದಂತೆ ತಲೆಸುತ್ತು, ವಾಂತಿ ಹಾಗೂ ಹೊಟ್ಟೆನೋವಿನಿಂದ ಬಳಲಿದ್ದಾರೆ. ಕೂಡಲೇ ಎಚ್ಚೆತ್ತ ಶಿಕ್ಷಕರು ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಬಳಿಕ ಅಲ್ಲಿಂದ ಎಲ್ಲ ಮಕ್ಕಳನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ತಹಶೀಲ್ದಾರ್ ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.ಮಕ್ಕಳು ತಿಂದಿದ್ದ ಪುಳಿಯೊಗರೆ, ಹಾಲು ಮತ್ತು ನೀರನ್ನು ಹೆಚ್ಚಿನ ಪರೀಕ್ಷೆಗೆಂದು ಲ್ಯಾಬ್ ಗೆ ಕಳುಹಿಸಲಾಗಿದೆ.
ನಮ್ಮ ಸುದ್ಧಿ ಗಳನ್ನ ವೀಕ್ಷಿಸಲು ಲಿಂಕ್ ಬಳಸಿ https://youtu.be/EkNJBR144Q8
Feb 14 / 2019
ಚಿಕ್ಕಮಗಳೂರು: ಶಾಲೆಯಲ್ಲಿ ಮಕ್ಕಳಿಗೆ ನೀಡಿದ್ದ ಬಿಸಿಯೂಟ ಸೇವಿಸಿ, ಹಾಲು ಕುಡಿದ 17 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ತಾಲೂಕಿನ ಶಿರವಾಸೆಯಲ್ಲಿ ನಡೆದಿದೆ.
ಶಿರವಾಸೆ ಗ್ರಾಮದಲ್ಲಿರುವ ವಿವೇಕಾನಂದ ಶಾಲೆಯಲ್ಲಿ ಮಧ್ಯಾಹ್ನ ಊಟದ ಬಳಿಕ ಮಕ್ಕಳು ಊಟ ಮಾಡಿ ಹಾಲು ಕುಡಿಯುತ್ತಿದ್ದಂತೆ ತಲೆಸುತ್ತು, ವಾಂತಿ ಹಾಗೂ ಹೊಟ್ಟೆನೋವಿನಿಂದ ಬಳಲಿದ್ದಾರೆ. ಕೂಡಲೇ ಎಚ್ಚೆತ್ತ ಶಿಕ್ಷಕರು ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಬಳಿಕ ಅಲ್ಲಿಂದ ಎಲ್ಲ ಮಕ್ಕಳನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ತಹಶೀಲ್ದಾರ್ ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.ಮಕ್ಕಳು ತಿಂದಿದ್ದ ಪುಳಿಯೊಗರೆ, ಹಾಲು ಮತ್ತು ನೀರನ್ನು ಹೆಚ್ಚಿನ ಪರೀಕ್ಷೆಗೆಂದು ಲ್ಯಾಬ್ ಗೆ ಕಳುಹಿಸಲಾಗಿದೆ.
ನಮ್ಮ ಸುದ್ಧಿ ಗಳನ್ನ ವೀಕ್ಷಿಸಲು ಲಿಂಕ್ ಬಳಸಿ https://youtu.be/EkNJBR144Q8
No comments:
Post a Comment