ಜನಜಾಗೃತಿ ಸುದ್ಧಿವಾಹಿನಿ
ಬೆಂಗಳೂರು: ಕಳೆದ ಕೆಲ ತಿಂಗಳಿನಿಂದ ಮುಂಬೈನಲ್ಲಿದ್ದ ಕಾಂಗ್ರೆಸ್ ನ ನಾಲ್ವರು ಅತೃಪ್ತಶಾಸಕರು ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿದ್ದ ನಾಲ್ವರು ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್, ಮಹೇಶ್ ಕಮಟಳ್ಳಿ ಮತ್ತು ಬಿ. ನಾಗೇಂದ್ರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.
ಇನ್ನು ಅತೃಪ್ತ ಶಾಸಕರೊಂದಿಗೆ ಸಂಪರ್ಕದಲ್ಲಿದ್ದ ಎಂಬ ವದಂತಿ ಇದ್ದ ಜೆಡಿಎಸ್ ಶಾಸಕ ನಾರಾಯಣ ಗೌಡ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರಕ್ಕೆ ಸ್ನೇಹಿತರು, ಕುಟುಂಬ ಸದಸ್ಯರನ್ನು ನೋಡಲು ಹೋದಾಗ ಅಸ್ವಸ್ಥಗೊಂಡಿದ್ದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮುಂಬೈನಲ್ಲೇ ಚಿಕಿತ್ಸೆ ಪಡೆಯುತ್ತಿದೆ ಎಂದು ಹೇಳಿದ್ದಾರೆ.
ಬೆಂಗಳೂರಿಗೆ ಆಗಮಿಸಿರುವ ಅತೃಪ್ತ ಕೈ ಶಾಸಕರು ಇಂದು ನಡೆಯಲಿರುವ ಅಧಿವೇಶನಕ್ಕೆ ಹಾಜರಾಗ್ತಾರಾ ಇಲ್ಲವಾ ಎನ್ನವುದು ಇನ್ನೂ ಖಚಿತವಾಗಿಲ್ಲ. ಅನರ್ಹತೆಯ ಭೀತಿ ಎದುರಿಸುತ್ತಿರುವ ನಾಲ್ವರು ಅತೃಪ್ತರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/EkNJBR144Q8
No comments:
Post a Comment