ಜನಜಾಗೃತಿ ಸುದ್ಧಿವಾಹಿನಿ
ಬೆಂಗಳೂರು : ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್ .ಗಣೇಶ್ ಬಂಧನವಾಗಿದೆ.
ರಾಮನಗರ ಪೊಲೀಸರು ಶಾಸಕ ಕಂಪ್ಲಿ ಗಣೇಶ್ರನ್ನು ಹೊರರಾಜ್ಯದಲ್ಲಿ ಅರೆಸ್ಟ್ ಮಾಡಿರುವುದು ಪಕ್ಕಾ. ಆದ್ರೆ, ಯಾವ ಸ್ಥಳದಲ್ಲಿ ಬಂಧಿಸಿದ್ದಾರೆ ಎನ್ನುವುದು ಖಚಿತ ಮಾಹಿತಿ ಇಲ್ಲ. ಇಂದು ರಾತ್ರಿ ವೇಳೆಗೆ ಗಣೇಶ್ರನ್ನು ರಾಮನಗರಕ್ಕೆ ಕರೆತರುವ ಸಾಧ್ಯತೆ ಇದೆ. ಬಳಿಕ, ಕೋರ್ಟ್ ಮುಂದೆ ಹಾಜರುಪಡಿಸುತ್ತಾರೆ ಎಂದು ತಿಳಿದುಬಂದಿದೆ.
ಜ. 20 ರಂದು ಈಗಲ್ಟನ್ ರೆಸಾರ್ಟ್ನಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರು ವಿಜಯನಗರ (ಹೊಸಪೇಟೆ) ಶಾಸಕ ಆನಂದ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು.
ಘಟನೆಯ ನಂತ್ರ, ಗಣೇಶ್ ತಲೆ ಮರೆಸಿಕೊಂಡಿದ್ದರು. ಈ ನಡುವೆ, ನಿನ್ನೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ತಮ್ಮ ವಕೀಲರ ಮೂಲಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್ ತೆಗೆದುಕೊಂಡಿದ್ದರು.
ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/VW7cgrd6_ms
No comments:
Post a Comment