Friday, February 15, 2019

✉ಅವಶ್ಯವಿದ್ದರೆ ನಮ್ಮ ರಕ್ತ ಹರಿಸಲು ಸಿದ್ಧ... ಪ್ರಧಾನಿ ಮೋದಿಗೆ ಸಿದ್ದಾಪುರದ ವಿದ್ಯಾರ್ಥಿ ಮಹಮದ್ ಶಕೀಬ್ ಪತ್ರ

ಜನಜಾಗೃತಿ ಸುದ್ಧಿವಾಹಿನಿ

   〰〰〰〰〰〰〰〰〰

ಕಾರವಾರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ನಡೆಸಿದ ಭೀಕರ ದಾಳಿಗೆ ದೇಶದ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಹೇಯ ಕೃತ್ಯ ನಡೆಸಿದ ಉಗ್ರರಿಗೆ ತಕ್ಕ ಪಾಠ ಕಲಿಸುವಂತೆ ವಿದ್ಯಾರ್ಥಿಯೋರ್ವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾನೆ. 

 ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಹಮದ್ ಶಕೀಬ್ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಅಂತಿಮ ವರ್ಷದಲ್ಲಿ ಓದುತ್ತಿದ್ದಾನೆ. ಫೆ. 14ರಂದು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ನಡೆಸಿದ ದಾಳಿ ಬಗ್ಗೆ ತಿಳಿದಿದ್ದೇವೆ. 


ದೇಶದ 44ಕ್ಕೂ ಹೆಚ್ಚು ಯೋಧರು ತಮ್ಮ ಅಮೂಲ್ಯ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇಂತಹ ದುಷ್ಕೃತ್ಯವೆಸಗಿದ ಪಾಕಿಸ್ತಾನಿ ಉಗ್ರರಿಗೆ ತಕ್ಕ ಪಾಠ ಕಲಿಸಬೇಕು. ನಾನು ನಿಮಗೆ ಈ ಬಗ್ಗೆ ಕೈ ಮುಗಿದು ಬೇಡಿಕೊಳ್ಳುತ್ತೇನೆ. ಯೋಧರು ಮಾಡಿದ ತ್ಯಾಗ ವ್ಯರ್ಥವಾಗದಂತೆ ನೋಡಿಕೊಳ್ಳಿ. ಅವರಿಗೆ ಪಾಠ ಕಲಿಸಲು ನಾವು ಯಾವುದೇ ತ್ಯಾಗಕ್ಕೂ ಬದ್ಧರಿದ್ದೇವೆ. ಅವಶ್ಯವಿದ್ದರೆ ರಕ್ತವನ್ನು ಹರಿಸಲು ಸಿದ್ಧರಿದ್ದೇವೆ ಎಂದು ಬರೆದು ಮೇಲ್ ಮತ್ತು ಪೋಸ್ಟ್ ಮೂಲಕ ಪ್ರಧಾನಿ ಕಚೇರಿಗೆ ರವಾನಿಸಿದ್ದಾನೆ.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/47WLrf7Pu10


No comments:

Post a Comment