Monday, February 18, 2019

ಬಿಜೆಪಿಯ ಕೀರ್ತಿ ಅಜಾದ್ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ!🤚🏻

ಜನಜಾಗೃತಿ ಸುದ್ಧಿವಾಹಿನಿ

ನವದೆಹಲಿ:ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಬಿಜೆಪಿಯ ಉಚ್ಚಾಟಿತ ಲೋಕಸಭಾ ಸದಸ್ಯ ಕೀರ್ತಿ ಅಜಾದ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.ಮಾಜಿ ಕ್ರಿಕೆಟ್ ಆಟಗಾರ ಹಾಗೂ ರಾಜಕಾರಣಿಯಾಗಿರುವ ಕೀರ್ತಿ ಅಜಾದ್,1983 ರಲ್ಲಿ ಟೀಂ ಇಂಡಿಯಾ ವಿಶ್ವ ಕಪ್ ಗೆದ್ದಾಗ ಕೀರ್ತಿ ಅಜಾದ್ ಕೂಡಾ ಟೀಂ ಇಂಡಿಯಾ ಆಟಗಾರರಾಗಿದ್ದರು.


ಬಿಹಾರದಲ್ಲಿನ ದರ್ಬಾಂಗಾ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಭ್ರಷ್ಟಾಚಾರ, ಅಕ್ರಮ ಕುರಿತಂತೆ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ಆರೋಪ ಮಾಡಿದ್ದರಿಂದ ಅವರನ್ನು ಡಿಸೆಂಬರ್ 3, 2015ರಿಂದ ಬಿಜೆಪಿಯಿಂದ ಉಚ್ಚಾಟಿಸಲಾಗಿತ್ತು.


ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ತಮ್ಮನ್ನು ಸಂಪ್ರದಾಯಿಕ ಮಿಥಿಲಾ ಶೈಲಿಯಲ್ಲಿ ಸನ್ಮಾನಿಸಲಾಯಿತು ಎಂದು ಕೀರ್ತಿ ಅಜಾದ್ ಟ್ವೀಟ್ ಮಾಡಿದ್ದಾರೆ.2014ರಲ್ಲಿ ಅವರು ಬಿಜೆಪಿ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದು ಡಿಸೆಂಬರ್ 3, 2015ರಿಂದ ಬಿಜೆಪಿಯಿಂದ ಉಚ್ಚಾಟಿಸಲಾಗಿತ್ತು ಫೆಬ್ರವರಿ 15 ರಂದೇ ಅಜಾದ್ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ, ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.ನಾಳೆ ಅಜಾದ್ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/y5NrJ6S-iYo

No comments:

Post a Comment