Sunday, March 10, 2019

ಮಲ್ಲಿಕಾರ್ಜುನ ಖರ್ಗೆ ದೇಶಧ ಎರಡನೇ ಅಂಬೇಡ್ಕರ್ : ರಾಜಶೇಖರ್ ಪಾಟೀಲ್

ಜನಜಾಗೃತಿ ಸುದ್ಧಿವಾಹಿನಿ
ಯಾದಗಿರಿ: ಕಾಂಗ್ರೆಸ್ ನ ಹಿರಿಯ ನಾಯಕ, ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಎರಡನೇ ಅಂಬೇಡ್ಕರ್, ಲೋಕಸಭೆ ಚುನಾವಣೆಯಲ್ಲಿ ಅವರನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ ದೇಶ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ್ ಪಾಟೀಲ್ ಹೇಳಿದರು.

ಗುರುಮಠಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು 8 ಬಾರಿ ಶಾಸಕರಾಗಿ, 2 ಬಾರಿ ಲೋಕಸಭೆ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಮತದಾರರು ಇವರಿಗೆ ಅವರನ್ನು ಗೆಲ್ಲಿಸಬೇಕು. ಪ್ರಧಾನಿ ಮೋದಿ ಅವರನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಖರ್ಗೆ ಅವರಿಗೆ ಮಾತ್ರ ಇದೆ ಎಂದರು.

ಬಳಿಕ ಮಾತನಾಡಿದ ಕೆಪಿಸಿಸಿ ಕಾರ್ಯದರ್ಶಿ ಈಶ್ವರ್ ಖಂಡ್ರೆ, ಪ್ರಧಾನಿ ಮೋದಿ ಅವರು ಬರೀ ಹುಸಿ ಭರವಸೆಗಳನ್ನು ನೀಡಿ ಜನರಿಗೆ ಮೋಸ ಮಾಡಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಆಡಳಿತ ನಡೆಸಿದರೂ ಸಹ ದೇಶಕ್ಕೆ ಏನೂ ಕೊಡುಗೆ ನೀಡಿಲ್ಲ ಎಂದು ಆರೋಪಿಸಿದರು.
ನಮ್ಮ ಸುದ್ಧಿ ವೀಕ್ಷಿಸಲು ಲಿಂಕ್ ಬಳಸಿ https://youtu.be/AFrRSRKwwtY

No comments:

Post a Comment